ಬೆಂಗಳೂರು ಗ್ರಾಮಾಂತರ: ನ್ಯಾಯಾಲಯದಲ್ಲಿ ಪತಿಯ ವಿರುದ್ಧ ಸಾಕ್ಷ್ಯ ನೀಡಲು ಬಂದಿದ್ದ ಪತ್ನಿಗೆ ಚಾಕು ಇರಿದು ಕೊಲೆ ಯತ್ನ ನಡೆಸಿದ ಅಮಾನವೀಯ ಘಟನೆ ಬೆಂಗಳೂರು ಗ್ರಾಮಾಂತರದ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.
38 ವರ್ಷದ ಜಮುನಾ ಎಂಬ ಮಹಿಳೆ ತನ್ನ ಪತಿ ಗುರುಮೂರ್ತಿಗೆ ವಿರುದ್ಧವಾಗಿ ಕೌಟುಂಬಿಕ ಹಿಂಸೆ ಆರೋಪದಲ್ಲಿ ಪೊಲೀಸ್ದಲ್ಲೇ ಮೊದಲು ಪ್ರಕರಣ ದಾಖಲಿಸಿದ್ದರು. ನಂತರ ಅವರು ಪತಿಯನ್ನೆ ದೂರಿಟ್ಟು ಪ್ರತ್ಯೇಕವಾಗಿದ್ದು, ಕೋರ್ಟ್ನಲ್ಲಿ ಪ್ರಕರಣ ವಿಚಾರಣೆಯಲ್ಲಿತ್ತು.
ಈ ಹಿನ್ನೆಲೆಯಲ್ಲಿ, ಜಮುನಾ ಸಾಕ್ಷ್ಯ ನೀಡುವ ದಿನ ಕೋರ್ಟ್ಗೆ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಪತಿ ಗುರುಮೂರ್ತಿಗೆ ಲಭಿಸಿದ್ದು, ಕೋಪದಿಂದ ಪತ್ನಿಯನ್ನು ಹುಡುಕಿಕೊಂಡು ಬಂದು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಯತ್ನ ನಡೆಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆಯ ಬಳಿಕ ಗಾಯಾಳು ಜಮುನಾಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಗುರುಮೂರ್ತಿ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನದ ಪ್ರಕರಣ ದಾಖಲಿಸಲಾಗಿದೆ. ಪೊಲೀಸರ ತನಿಖೆ ಮುಂದುವರಿದಿದ್ದು, ಆರೋಪಿಯನ್ನು ಬಂಧಿಸುವ ಕಾರ್ಯ ತೀವ್ರಗೊಳಿಸಲಾಗಿದೆ.
ಪತಿಯ ಮಾನಸಿಕ ಸ್ಥಿತಿ ಹಾಗೂ ಈ ಅಪರಾಧಕ್ಕೆ ಕಾರಣವಾದ ಹಿನ್ನೆಲೆ ಕುರಿತು ಪೊಲೀಸರು ವಿವರವಾದ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…