Crime

ಸ್ನೇಹಿತರ ಮುಂದೆ ಪತ್ನಿ ಬಟ್ಟೆ ಬಿಚ್ಚಿಸುತ್ತಿದ್ದ ಪತಿ; ಠಾಣೆಯಲ್ಲಿ ದಾಖಲಾಯ್ತು ದೂರು!

ತನ್ನ ಸ್ನೇಹಿತರ ಮುಂದೆ ಬಟ್ಟೆ ಚಿಚ್ಚಲು ಪತಿ ತನಗೆ ಒತ್ತಾಯಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ. 35 ವರ್ಷದ ಸಂತ್ರಸ್ತ ಮಹಿಳೆ ವಿಎಫ್‌ಎಕ್ಸ್ ಕಲಾವಿದೆಯಾಗಿದ್ದು, ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಖೋರಾಜ್‍ನಲ್ಲಿ ವಾಸವಾಗಿದ್ದಳು. ಆಕೆಯ ಪತಿ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಮೂಲತಃ ಉತ್ತರಾಖಂಡದ ಡೆಹ್ರಾಡೂನ್ ಮೂಲದ ಈ ದಂಪತಿ ಎಂಟು ವರ್ಷಗಳಿಂದ ಪರಸ್ಪರ ಪರಿಚಿತರಾಗಿದ್ದು, ಮದುವೆಯಾಗಿ ಐದು ವರ್ಷಗಳಾಗಿವೆ. ತನ್ನ ಪತಿ ಕಿರುಕುಳ ನೀಡುತ್ತಿರುವುದಾಗಿ ಆಕೆ ಆರೋಪ ಮಾಡಿದ್ದಾಳೆ. ಮದುವೆಯಾದ ಹೊಸದರಲ್ಲಿ ದಂಪತಿ ಮೊದಲು ಕೋಲ್ಕತ್ತಾಗೆ ಮತ್ತು ನಂತರ ಮುಂಬೈಗೆ ತೆರಳಿದರು.
ಮುಂಬೈನಲ್ಲಿ ಮಹಿಳೆ ಚಲನಚಿತ್ರೋದ್ಯಮದಲ್ಲಿ ವಿಎಫ್‌ಎಕ್ಸ್ ಕಲಾವಿದೆಯಾಗಿ ಕೆಲಸ ಮಾಡಿದಳು. ಮದುವೆಯ ನಂತರ ಮುಂಬೈಗೆ ತೆರಳಿದಾಗ, ಪತಿ ತನ್ನ ಸ್ನೇಹಿತರನ್ನು ಪಾರ್ಟಿಗಳಿಗಾಗಿ ಮನೆಗೆ ಕರೆಯುತ್ತಿದ್ದ. ಪಾರ್ಟಿಗಳ ಸಮಯದಲ್ಲಿ “ಡೇರ್‌ ಆಂಡ್‌ ಟ್ರುತ್‌” ಆಟದ ಹೆಸರಿನಲ್ಲಿ ತನ್ನ ಪತಿ ತನ್ನ ಸ್ನೇಹಿತರ ಮುಂದೆ ತನ್ನ ಬಟ್ಟೆ ಬಿಚ್ಚಲು ಒತ್ತಾಯಿಸುತ್ತಿದ್ದ ಎಂದು ಮಹಿಳೆ ದೂರಿದ್ದಾಳೆ. ಒಂದು ವೇಳೆ ಅವಳು ನಿರಾಕರಿಸಿದರೆ ಅಥವಾ ಆಕ್ಷೇಪಿಸಿದರೆ ಪತಿ ತನ್ನನ್ನು ಹೊಡೆಯುತ್ತಾನೆ ಎಂದು ಆಕೆ ಆರೋಪಿಸಿದ್ದಾಳೆ. ತನ್ನ ಗಂಡನ ಈ ಅಶ್ಲೀಲ ಬೇಡಿಕೆಗಳಿಂದಾಗಿ ಅವರ ನಡುವೆ ಆಗಾಗ ಜಗಳವಾಗುತ್ತಿತ್ತು ಎಂದು ತಿಳಿಸಿದ್ದಾಳೆ.
ದಂಪತಿಗಳು ಇತ್ತೀಚೆಗೆ ಗುಜರಾತ್‍ನ ಖೋರಾಜ್‍ಗೆ ಸ್ಥಳಾಂತರಗೊಂಡಿದ್ದರು. ಖೋರಾಜ್‍ಗೆ ತೆರಳಿದ ನಂತರ, ಪತಿ ತನಗೆ ಕಿರುಕುಳ ನೀಡುವುದನ್ನು ಮುಂದುವರಿಸಿದ್ದಾನೆ. ಹಾಗಾಗಿ ಆತನ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

32 seconds ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

13 minutes ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

20 hours ago

ಮೈಸೂರಿನಲ್ಲಿ ಐಷಾರಾಮಿ ಕಾರುಗಳ ಮೇಲೆ ಆರ್‌ಟಿಒ ದಾಳಿ: ₹3 ಕೋಟಿ ದಂಡ, ₹15 ಕೋಟಿ ಮೌಲ್ಯದ ವಾಹನ ವಶ

ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…

21 hours ago

ಕೆ.ಆರ್.ಪೇಟೆ: ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿದ ವ್ಯಕ್ತಿ ಬಂಧನ

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…

21 hours ago

ರ್‍ಯಾಶ್ ಡ್ರೈವಿಂಗ್ ಪ್ರಶ್ನಿಸಿದ ಮಹಿಳೆಗೆ ರ‍್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ: ಪ್ರಕರಣ ದಾಖಲು

ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ‍್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕನಿಂದ ಮಹಿಳೆಯ…

23 hours ago