Crime

ಸ್ನೇಹಿತರ ಮುಂದೆ ಪತ್ನಿ ಬಟ್ಟೆ ಬಿಚ್ಚಿಸುತ್ತಿದ್ದ ಪತಿ; ಠಾಣೆಯಲ್ಲಿ ದಾಖಲಾಯ್ತು ದೂರು!

ತನ್ನ ಸ್ನೇಹಿತರ ಮುಂದೆ ಬಟ್ಟೆ ಚಿಚ್ಚಲು ಪತಿ ತನಗೆ ಒತ್ತಾಯಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ. 35 ವರ್ಷದ ಸಂತ್ರಸ್ತ ಮಹಿಳೆ ವಿಎಫ್‌ಎಕ್ಸ್ ಕಲಾವಿದೆಯಾಗಿದ್ದು, ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಖೋರಾಜ್‍ನಲ್ಲಿ ವಾಸವಾಗಿದ್ದಳು. ಆಕೆಯ ಪತಿ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಮೂಲತಃ ಉತ್ತರಾಖಂಡದ ಡೆಹ್ರಾಡೂನ್ ಮೂಲದ ಈ ದಂಪತಿ ಎಂಟು ವರ್ಷಗಳಿಂದ ಪರಸ್ಪರ ಪರಿಚಿತರಾಗಿದ್ದು, ಮದುವೆಯಾಗಿ ಐದು ವರ್ಷಗಳಾಗಿವೆ. ತನ್ನ ಪತಿ ಕಿರುಕುಳ ನೀಡುತ್ತಿರುವುದಾಗಿ ಆಕೆ ಆರೋಪ ಮಾಡಿದ್ದಾಳೆ. ಮದುವೆಯಾದ ಹೊಸದರಲ್ಲಿ ದಂಪತಿ ಮೊದಲು ಕೋಲ್ಕತ್ತಾಗೆ ಮತ್ತು ನಂತರ ಮುಂಬೈಗೆ ತೆರಳಿದರು.
ಮುಂಬೈನಲ್ಲಿ ಮಹಿಳೆ ಚಲನಚಿತ್ರೋದ್ಯಮದಲ್ಲಿ ವಿಎಫ್‌ಎಕ್ಸ್ ಕಲಾವಿದೆಯಾಗಿ ಕೆಲಸ ಮಾಡಿದಳು. ಮದುವೆಯ ನಂತರ ಮುಂಬೈಗೆ ತೆರಳಿದಾಗ, ಪತಿ ತನ್ನ ಸ್ನೇಹಿತರನ್ನು ಪಾರ್ಟಿಗಳಿಗಾಗಿ ಮನೆಗೆ ಕರೆಯುತ್ತಿದ್ದ. ಪಾರ್ಟಿಗಳ ಸಮಯದಲ್ಲಿ “ಡೇರ್‌ ಆಂಡ್‌ ಟ್ರುತ್‌” ಆಟದ ಹೆಸರಿನಲ್ಲಿ ತನ್ನ ಪತಿ ತನ್ನ ಸ್ನೇಹಿತರ ಮುಂದೆ ತನ್ನ ಬಟ್ಟೆ ಬಿಚ್ಚಲು ಒತ್ತಾಯಿಸುತ್ತಿದ್ದ ಎಂದು ಮಹಿಳೆ ದೂರಿದ್ದಾಳೆ. ಒಂದು ವೇಳೆ ಅವಳು ನಿರಾಕರಿಸಿದರೆ ಅಥವಾ ಆಕ್ಷೇಪಿಸಿದರೆ ಪತಿ ತನ್ನನ್ನು ಹೊಡೆಯುತ್ತಾನೆ ಎಂದು ಆಕೆ ಆರೋಪಿಸಿದ್ದಾಳೆ. ತನ್ನ ಗಂಡನ ಈ ಅಶ್ಲೀಲ ಬೇಡಿಕೆಗಳಿಂದಾಗಿ ಅವರ ನಡುವೆ ಆಗಾಗ ಜಗಳವಾಗುತ್ತಿತ್ತು ಎಂದು ತಿಳಿಸಿದ್ದಾಳೆ.
ದಂಪತಿಗಳು ಇತ್ತೀಚೆಗೆ ಗುಜರಾತ್‍ನ ಖೋರಾಜ್‍ಗೆ ಸ್ಥಳಾಂತರಗೊಂಡಿದ್ದರು. ಖೋರಾಜ್‍ಗೆ ತೆರಳಿದ ನಂತರ, ಪತಿ ತನಗೆ ಕಿರುಕುಳ ನೀಡುವುದನ್ನು ಮುಂದುವರಿಸಿದ್ದಾನೆ. ಹಾಗಾಗಿ ಆತನ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

9 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

11 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

22 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

22 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

22 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

23 hours ago