Crime

ಸ್ನೇಹಿತರ ಮುಂದೆ ಪತ್ನಿ ಬಟ್ಟೆ ಬಿಚ್ಚಿಸುತ್ತಿದ್ದ ಪತಿ; ಠಾಣೆಯಲ್ಲಿ ದಾಖಲಾಯ್ತು ದೂರು!

ತನ್ನ ಸ್ನೇಹಿತರ ಮುಂದೆ ಬಟ್ಟೆ ಚಿಚ್ಚಲು ಪತಿ ತನಗೆ ಒತ್ತಾಯಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ. 35 ವರ್ಷದ ಸಂತ್ರಸ್ತ ಮಹಿಳೆ ವಿಎಫ್‌ಎಕ್ಸ್ ಕಲಾವಿದೆಯಾಗಿದ್ದು, ಚಲನಚಿತ್ರೋದ್ಯಮದಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಖೋರಾಜ್‍ನಲ್ಲಿ ವಾಸವಾಗಿದ್ದಳು. ಆಕೆಯ ಪತಿ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಮೂಲತಃ ಉತ್ತರಾಖಂಡದ ಡೆಹ್ರಾಡೂನ್ ಮೂಲದ ಈ ದಂಪತಿ ಎಂಟು ವರ್ಷಗಳಿಂದ ಪರಸ್ಪರ ಪರಿಚಿತರಾಗಿದ್ದು, ಮದುವೆಯಾಗಿ ಐದು ವರ್ಷಗಳಾಗಿವೆ. ತನ್ನ ಪತಿ ಕಿರುಕುಳ ನೀಡುತ್ತಿರುವುದಾಗಿ ಆಕೆ ಆರೋಪ ಮಾಡಿದ್ದಾಳೆ. ಮದುವೆಯಾದ ಹೊಸದರಲ್ಲಿ ದಂಪತಿ ಮೊದಲು ಕೋಲ್ಕತ್ತಾಗೆ ಮತ್ತು ನಂತರ ಮುಂಬೈಗೆ ತೆರಳಿದರು.
ಮುಂಬೈನಲ್ಲಿ ಮಹಿಳೆ ಚಲನಚಿತ್ರೋದ್ಯಮದಲ್ಲಿ ವಿಎಫ್‌ಎಕ್ಸ್ ಕಲಾವಿದೆಯಾಗಿ ಕೆಲಸ ಮಾಡಿದಳು. ಮದುವೆಯ ನಂತರ ಮುಂಬೈಗೆ ತೆರಳಿದಾಗ, ಪತಿ ತನ್ನ ಸ್ನೇಹಿತರನ್ನು ಪಾರ್ಟಿಗಳಿಗಾಗಿ ಮನೆಗೆ ಕರೆಯುತ್ತಿದ್ದ. ಪಾರ್ಟಿಗಳ ಸಮಯದಲ್ಲಿ “ಡೇರ್‌ ಆಂಡ್‌ ಟ್ರುತ್‌” ಆಟದ ಹೆಸರಿನಲ್ಲಿ ತನ್ನ ಪತಿ ತನ್ನ ಸ್ನೇಹಿತರ ಮುಂದೆ ತನ್ನ ಬಟ್ಟೆ ಬಿಚ್ಚಲು ಒತ್ತಾಯಿಸುತ್ತಿದ್ದ ಎಂದು ಮಹಿಳೆ ದೂರಿದ್ದಾಳೆ. ಒಂದು ವೇಳೆ ಅವಳು ನಿರಾಕರಿಸಿದರೆ ಅಥವಾ ಆಕ್ಷೇಪಿಸಿದರೆ ಪತಿ ತನ್ನನ್ನು ಹೊಡೆಯುತ್ತಾನೆ ಎಂದು ಆಕೆ ಆರೋಪಿಸಿದ್ದಾಳೆ. ತನ್ನ ಗಂಡನ ಈ ಅಶ್ಲೀಲ ಬೇಡಿಕೆಗಳಿಂದಾಗಿ ಅವರ ನಡುವೆ ಆಗಾಗ ಜಗಳವಾಗುತ್ತಿತ್ತು ಎಂದು ತಿಳಿಸಿದ್ದಾಳೆ.
ದಂಪತಿಗಳು ಇತ್ತೀಚೆಗೆ ಗುಜರಾತ್‍ನ ಖೋರಾಜ್‍ಗೆ ಸ್ಥಳಾಂತರಗೊಂಡಿದ್ದರು. ಖೋರಾಜ್‍ಗೆ ತೆರಳಿದ ನಂತರ, ಪತಿ ತನಗೆ ಕಿರುಕುಳ ನೀಡುವುದನ್ನು ಮುಂದುವರಿಸಿದ್ದಾನೆ. ಹಾಗಾಗಿ ಆತನ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago