ಕಲಬುರಗಿಯಲ್ಲಿ ಪತಿಯ ಅನೈತಿಕ ಸಂಬಂಧದಿಂದ ಬೇಸತ್ತ ಪತ್ನಿಯೊಬ್ಬಳು ಗಂಡನ ಎರಡು ಕಾಲು ಮುರಿಸುವಂತೆ ಸುಪಾರಿ ನೀಡಿದ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಘಟನೆ ಕಲಬುರಗಿ ನಗರದ ಅತ್ತರ ಕಾಂಪೌಂಡ್ ಬಳಿಯಾಗಿದೆ.
ವೆಂಕಟೇಶ್ ಎಂಬಾತ ಪರಸ್ತ್ರೀಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರಿಂದ, ಪತ್ನಿ ಉಮಾದೇವಿ ತೀವ್ರ ಕೋಪಗೊಂಡಿದ್ದಳು. ಪತಿಯ ವರ್ತನೆಗೆ ಬೇಸತ್ತಿದ್ದಾಳೆ, ಹೀಗಾಗಿ ಅವನನ್ನು ಸುಮ್ಮನಾಗಿಸಲು ಅವರ ಕಾಲು ಮುರಿಸುವ ಯೋಜನೆ ರೂಪಿಸಿದ್ದಾಳೆ. ಈ ಯೋಜನೆಗಾಗಿ ಆಕೆಯು ಆರಿಫ್, ಮನೋಹರ್, ಮತ್ತು ಸುನೀಲ್ ಎಂಬುವವರಿಗೆ 5 ಲಕ್ಷ ರೂ. ಸುಪಾರಿ ನೀಡಿದ್ದಾಳೆ.
ಯೋಜನೆ ಅನ್ವಯ, ಆರೋಪಿಗಳು ವೆಂಕಟೇಶನ್ನು ಗುರಿಯಾಗಿಸಿ ಅವನ ಎರಡು ಕಾಲುಗಳನ್ನು ಮುರಿದಿದ್ದಾರೆ. ಘಟನೆಯ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಗೆ ದೂರು ದಾಖಲಾಗಿದ್ದು, ಪೊಲೀಸರು ಉಮಾದೇವಿ ಮತ್ತು ಮೂವರು ಸುಪಾರಿ ಕೊಲೆಗಾರರನ್ನು ಬಂಧಿಸಿದ್ದಾರೆ.
ಈ ಪ್ರಕರಣ ಸ್ಥಳೀಯರಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪತಿ-ಪತ್ನಿಯ ವೈಯಕ್ತಿಕ ಕಲಹ ಇಷ್ಟು ದೂರ ಹೋಗುವುದು ಗಂಭೀರ ವಿಚಾರವಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…