Categories: CrimeLatest

“ನನಗೆ ಸೆಲ್ಯೂಟ್ ಮಾಡಿಲ್ಲ!”: ಬನ್ ಹಣ ಕೊಡದೇ ಐಪಿಎಸ್ ಅಧಿಕಾರಿ ಎಂದು ನಾಟಕ, ಕೊನೆಗೆ ಜೈಲು ಪಾಲು

ಲಕ್ನೋದಲ್ಲಿ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದ್ದು, ಬನ್ ತಿಂದು ಹಣ ನೀಡದೆ ಹೋಗಲು ಯತ್ನಿಸಿದ ವ್ಯಕ್ತಿಯೊಬ್ಬ ತಾನು ಐಪಿಎಸ್ ಅಧಿಕಾರಿ ಎಂದು ಹೇಳಿ ಪೊಲೀಸರನ್ನೇ ಬೆದರಿಸಲು ಮುಂದಾದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ವರದಿಗಳ ಪ್ರಕಾರ, ರಸ್ತೆಬದಿಯ ಅಂಗಡಿಯೊಂದರಲ್ಲಿ ಆರೋಪಿಯು ಬನ್ ತಿಂದು ಸುಮಾರು 40 ರೂಪಾಯಿ ಬಿಲ್ ಪಾವತಿಸದೆ ಅಲ್ಲಿಂದ ತೆರಳಲು ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಅಂಗಡಿ ಮಾಲೀಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ವಿಚಾರಣೆ ನಡೆಸುತ್ತಿದ್ದಂತೆ, ಆ ವ್ಯಕ್ತಿ ತಾನು ನೋಯ್ಡಾದಲ್ಲಿ ಕೆಲಸ ಮಾಡುತ್ತಿರುವ ಐಪಿಎಸ್ ಅಧಿಕಾರಿ ಎಂದು ಹೇಳಿ ಪೊಲೀಸರ ಮೇಲೆಯೇ ಗದರಲು ಆರಂಭಿಸಿದ್ದಾನೆ. “ನನಗೆ ಸೆಲ್ಯೂಟ್ ಮಾಡುವುದು ಬಿಟ್ಟು ಪ್ರಶ್ನೆ ಮಾಡ್ತೀರಾ?” ಎಂದು ಕರ್ತವ್ಯದಲ್ಲಿದ್ದ ಪೊಲೀಸರನ್ನೇ ಪ್ರಶ್ನಿಸಿದ್ದಾನೆ.

ಇದಕ್ಕೂ ಮೀರಿಸಿ, ಕಾನ್‌ಸ್ಟೆಬಲ್‌ಗಳು ಆತನನ್ನು ಸಾಮಾನ್ಯವಾಗಿ “ಅಣ್ಣಾ” ಎಂದು ಕರೆದಾಗ ಕೋಪಗೊಂಡ ಆರೋಪಿಯು, “ಅಣ್ಣಾ ಎಂದು ಕರೆಯಬೇಡಿ, ಸರ್ ಎಂದು ಕರೆ” ಎಂದು ದಬಾಯಿಸಿದ್ದಾನೆ. ತಾನು ಹಿರಿಯ ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ವಿಶೇಷ ಗೌರವ ನೀಡುವಂತೆ ಒತ್ತಾಯಿಸಿದ್ದಾನೆ.

ಆದರೆ ಆರೋಪಿಯ ಮಾತಿಗೆ ಮಣಿಯದ ಕಾನ್‌ಸ್ಟೆಬಲ್ ಅತ್ಯಂತ ಸಮಾಧಾನದಿಂದ ಮತ್ತು ಚಾಣಾಕ್ಷತನದಿಂದ ಪ್ರತಿಕ್ರಿಯಿಸಿದ್ದಾರೆ. “ಮೊದಲು ಸಮವಸ್ತ್ರದಲ್ಲಿ ಬನ್ನಿ, ಗುರುತಿನ ಚೀಟಿ ತೋರಿಸಿ, ನಂತರ ನಿಮಗೆ ಸೆಲ್ಯೂಟ್ ಮಾಡುತ್ತೇವೆ” ಎಂದು ಖಡಕ್ ಉತ್ತರ ನೀಡಿದ್ದಾರೆ. ಪೊಲೀಸರ ಈ ಸಮಯಪ್ರಜ್ಞೆ ಮತ್ತು ಧೈರ್ಯವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ವಿಚಾರಣೆ ವೇಳೆ ಯಾವುದೇ ಗುರುತಿನ ಚೀಟಿ ತೋರಿಸಲು ಆರೋಪಿಗೆ ಸಾಧ್ಯವಾಗದೇ ಹೋದ ಹಿನ್ನೆಲೆ, ಆತ ನಕಲಿ ಅಧಿಕಾರಿ ಎಂಬುದು ಬಹಿರಂಗವಾಗಿದೆ. ಬಳಿಕ ಲಕ್ನೋದ ಮಹಾನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಹಾಗೂ ಸರ್ಕಾರಿ ಸಿಬ್ಬಂದಿಗೆ ತಪ್ಪು ಮಾಹಿತಿ ನೀಡಿದ ಆರೋಪದಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

11 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

11 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

11 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

11 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

11 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

11 hours ago