ಇತ್ತೀಚೆಗಷ್ಟೇ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಅಧಿಕಾರ ವಹಿಸಿಕೊಂಡ ಹಿರಿಯ ನಟಿ-ರಾಜಕಾರಣಿ ಖುಷ್ಬೂ ಸುಂದರ್, ನಾನು 8 ವರ್ಷ ವರ್ಷದವಳಿದ್ದಾಗ ತನ್ನ ತಂದೆಯಿಂದ ಲೈಂಗಿಕವಾಗಿ ಮತ್ತು ದೈಹಿಕವಾಗಿ ಕಿರುಕುಳಕ್ಕೊಳಗಿರುವುದಾಗಿ ಬಹಿರಂಗಪಡಿಸಿದ್ದಾರೆ.
ಮೋಜೋ ಸ್ಟೋರಿ ಬರ್ಖಾ ದತ್ ಅವರೊಂದಿಗೆ ಸಂವಾದದಲ್ಲಿ ಮಾತನಾಡಿದ ಖುಷ್ಬೂ, “ಮಗುವಿನ ಮೇಲೆ ದೌರ್ಜನ್ಯಕ್ಕೊಳಗಾದಾಗ, ಅದು ಮಗುವಿಗೆ ಜೀವಮಾನದ ಗಾಯವನ್ನು ಉಂಟುಮಾಡುತ್ತದೆ ಎಂದು ನಾನು ಭಾವಿಸುತ್ತೇನೆ ಮತ್ತು ಅದು ಹುಡುಗಿ ಅಥವಾ ಹುಡುಗನ ಬಗ್ಗೆ ಅಲ್ಲ. ತನ್ನ ಹೆಂಡತಿಯನ್ನು ಹೊಡೆಯುವುದು, ತನ್ನ ಮಕ್ಕಳನ್ನು ಹೊಡೆಯುವುದು, ತನ್ನ ಏಕೈಕ ಮಗಳನ್ನು ಲೈಂಗಿಕವಾಗಿ ನಿಂದಿಸುವುದು ತನ್ನ ಜನ್ಮಸಿದ್ಧ ಹಕ್ಕು ಎಂದು ಬಹುಶಃ ಭಾವಿಸಿದ ವ್ಯಕ್ತಿ. ನನ್ನ ಮೇಲೆ ದೌರ್ಜನ್ಯ ಪ್ರಾರಂಭವಾದಾಗ ನಾನು ಕೇವಲ 8 ವರ್ಷ ವಯಸ್ಸಿನವಳಾಗಿದ್ದೆ. ನಾನು 15 ವರ್ಷದವಳಾದಾಗ ಅವರ ವಿರುದ್ಧ ಮಾತನಾಡುವ ಧೈರ್ಯ ಮಾಡಿದೆ ಎಂದು ಹೇಳಿಕೊಂಡಿದ್ದಾರೆ.
ಆಗ ನನಗೆ ಒಂದು ನಿಲುವು ತೆಗೆದುಕೊಳ್ಳಬೇಕಾದ ಸ್ಥಿತಿ ಬಂದಿತು ಮತ್ತು ಇತರ ಕುಟುಂಬ ಸದಸ್ಯರು ನಿಂದನೆಗೆ ಒಳಗಾಗುತ್ತಾರೆ ಎಂಬ ಭಯವು ವರ್ಷಗಳವರೆಗೆ ನನ್ನ ಬಾಯಿಯನ್ನು ಮುಚ್ಚಿತ್ತು ಎಂದು ಹೇಳಿದ್ದಾರೆ. ಇನ್ನು ಮುಂದುವರೆದು ಮಾತನಾಡಿದ ಅವರು, “ನನ್ನೊಂದಿಗೆ ಉಳಿದುಕೊಂಡಿರುವ ಒಂದು ಭಯವೆಂದರೆ ನನ್ನ ತಾಯಿ ನನ್ನನ್ನು ನಂಬದೇ ಇರಹುದು. ಏಕೆಂದರೆ ‘ಕುಚ್ ಭಿ ಹೋಜಾಯೇ ಮೇರಾ ಪತಿ ದೇವತಾ ಹೈ’ ಮನಸ್ಥಿತಿಯ ವಾತಾವರಣದಲ್ಲಿ ನನ್ನ ತಾಯಿ ಇದ್ದುದ್ದನ್ನ ನಾನು ನೋಡಿದ್ದೇನೆ. ಆದರೆ 15ನೇ ವಯಸ್ಸಿಗೆ ಸಾಕು ಎಂದುಕೊಂಡು ಅವರ ವಿರುದ್ಧ ತಿರುಗಿ ಬಿದ್ದೆ ಎಂದು ಹೇಳಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…