ಇತ್ತೀಚೆಗಷ್ಟೇ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಅಧಿಕಾರ ವಹಿಸಿಕೊಂಡ ಹಿರಿಯ ನಟಿ-ರಾಜಕಾರಣಿ ಖುಷ್ಬೂ ಸುಂದರ್, ನಾನು 8 ವರ್ಷ ವರ್ಷದವಳಿದ್ದಾಗ ತನ್ನ ತಂದೆಯಿಂದ ಲೈಂಗಿಕವಾಗಿ ಮತ್ತು ದೈಹಿಕವಾಗಿ ಕಿರುಕುಳಕ್ಕೊಳಗಿರುವುದಾಗಿ ಬಹಿರಂಗಪಡಿಸಿದ್ದಾರೆ.
ಮೋಜೋ ಸ್ಟೋರಿ ಬರ್ಖಾ ದತ್ ಅವರೊಂದಿಗೆ ಸಂವಾದದಲ್ಲಿ ಮಾತನಾಡಿದ ಖುಷ್ಬೂ, “ಮಗುವಿನ ಮೇಲೆ ದೌರ್ಜನ್ಯಕ್ಕೊಳಗಾದಾಗ, ಅದು ಮಗುವಿಗೆ ಜೀವಮಾನದ ಗಾಯವನ್ನು ಉಂಟುಮಾಡುತ್ತದೆ ಎಂದು ನಾನು ಭಾವಿಸುತ್ತೇನೆ ಮತ್ತು ಅದು ಹುಡುಗಿ ಅಥವಾ ಹುಡುಗನ ಬಗ್ಗೆ ಅಲ್ಲ. ತನ್ನ ಹೆಂಡತಿಯನ್ನು ಹೊಡೆಯುವುದು, ತನ್ನ ಮಕ್ಕಳನ್ನು ಹೊಡೆಯುವುದು, ತನ್ನ ಏಕೈಕ ಮಗಳನ್ನು ಲೈಂಗಿಕವಾಗಿ ನಿಂದಿಸುವುದು ತನ್ನ ಜನ್ಮಸಿದ್ಧ ಹಕ್ಕು ಎಂದು ಬಹುಶಃ ಭಾವಿಸಿದ ವ್ಯಕ್ತಿ. ನನ್ನ ಮೇಲೆ ದೌರ್ಜನ್ಯ ಪ್ರಾರಂಭವಾದಾಗ ನಾನು ಕೇವಲ 8 ವರ್ಷ ವಯಸ್ಸಿನವಳಾಗಿದ್ದೆ. ನಾನು 15 ವರ್ಷದವಳಾದಾಗ ಅವರ ವಿರುದ್ಧ ಮಾತನಾಡುವ ಧೈರ್ಯ ಮಾಡಿದೆ ಎಂದು ಹೇಳಿಕೊಂಡಿದ್ದಾರೆ.
ಆಗ ನನಗೆ ಒಂದು ನಿಲುವು ತೆಗೆದುಕೊಳ್ಳಬೇಕಾದ ಸ್ಥಿತಿ ಬಂದಿತು ಮತ್ತು ಇತರ ಕುಟುಂಬ ಸದಸ್ಯರು ನಿಂದನೆಗೆ ಒಳಗಾಗುತ್ತಾರೆ ಎಂಬ ಭಯವು ವರ್ಷಗಳವರೆಗೆ ನನ್ನ ಬಾಯಿಯನ್ನು ಮುಚ್ಚಿತ್ತು ಎಂದು ಹೇಳಿದ್ದಾರೆ. ಇನ್ನು ಮುಂದುವರೆದು ಮಾತನಾಡಿದ ಅವರು, “ನನ್ನೊಂದಿಗೆ ಉಳಿದುಕೊಂಡಿರುವ ಒಂದು ಭಯವೆಂದರೆ ನನ್ನ ತಾಯಿ ನನ್ನನ್ನು ನಂಬದೇ ಇರಹುದು. ಏಕೆಂದರೆ ‘ಕುಚ್ ಭಿ ಹೋಜಾಯೇ ಮೇರಾ ಪತಿ ದೇವತಾ ಹೈ’ ಮನಸ್ಥಿತಿಯ ವಾತಾವರಣದಲ್ಲಿ ನನ್ನ ತಾಯಿ ಇದ್ದುದ್ದನ್ನ ನಾನು ನೋಡಿದ್ದೇನೆ. ಆದರೆ 15ನೇ ವಯಸ್ಸಿಗೆ ಸಾಕು ಎಂದುಕೊಂಡು ಅವರ ವಿರುದ್ಧ ತಿರುಗಿ ಬಿದ್ದೆ ಎಂದು ಹೇಳಿದ್ದಾರೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…