Latest

ತಂದೆಯಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದೇನೆ- ನಟಿ ಖುಷ್ಬೂ

ಇತ್ತೀಚೆಗಷ್ಟೇ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಅಧಿಕಾರ ವಹಿಸಿಕೊಂಡ ಹಿರಿಯ ನಟಿ-ರಾಜಕಾರಣಿ ಖುಷ್ಬೂ ಸುಂದರ್, ನಾನು 8 ವರ್ಷ ವರ್ಷದವಳಿದ್ದಾಗ ತನ್ನ ತಂದೆಯಿಂದ ಲೈಂಗಿಕವಾಗಿ ಮತ್ತು ದೈಹಿಕವಾಗಿ ಕಿರುಕುಳಕ್ಕೊಳಗಿರುವುದಾಗಿ ಬಹಿರಂಗಪಡಿಸಿದ್ದಾರೆ.
ಮೋಜೋ ಸ್ಟೋರಿ ಬರ್ಖಾ ದತ್ ಅವರೊಂದಿಗೆ ಸಂವಾದದಲ್ಲಿ ಮಾತನಾಡಿದ ಖುಷ್ಬೂ, “ಮಗುವಿನ ಮೇಲೆ ದೌರ್ಜನ್ಯಕ್ಕೊಳಗಾದಾಗ, ಅದು ಮಗುವಿಗೆ ಜೀವಮಾನದ ಗಾಯವನ್ನು ಉಂಟುಮಾಡುತ್ತದೆ ಎಂದು ನಾನು ಭಾವಿಸುತ್ತೇನೆ ಮತ್ತು ಅದು ಹುಡುಗಿ ಅಥವಾ ಹುಡುಗನ ಬಗ್ಗೆ ಅಲ್ಲ. ತನ್ನ ಹೆಂಡತಿಯನ್ನು ಹೊಡೆಯುವುದು, ತನ್ನ ಮಕ್ಕಳನ್ನು ಹೊಡೆಯುವುದು, ತನ್ನ ಏಕೈಕ ಮಗಳನ್ನು ಲೈಂಗಿಕವಾಗಿ ನಿಂದಿಸುವುದು ತನ್ನ ಜನ್ಮಸಿದ್ಧ ಹಕ್ಕು ಎಂದು ಬಹುಶಃ ಭಾವಿಸಿದ ವ್ಯಕ್ತಿ. ನನ್ನ ಮೇಲೆ ದೌರ್ಜನ್ಯ ಪ್ರಾರಂಭವಾದಾಗ ನಾನು ಕೇವಲ 8 ವರ್ಷ ವಯಸ್ಸಿನವಳಾಗಿದ್ದೆ. ನಾನು 15 ವರ್ಷದವಳಾದಾಗ ಅವರ ವಿರುದ್ಧ ಮಾತನಾಡುವ ಧೈರ್ಯ ಮಾಡಿದೆ ಎಂದು ಹೇಳಿಕೊಂಡಿದ್ದಾರೆ.
ಆಗ ನನಗೆ ಒಂದು ನಿಲುವು ತೆಗೆದುಕೊಳ್ಳಬೇಕಾದ ಸ್ಥಿತಿ ಬಂದಿತು ಮತ್ತು ಇತರ ಕುಟುಂಬ ಸದಸ್ಯರು ನಿಂದನೆಗೆ ಒಳಗಾಗುತ್ತಾರೆ ಎಂಬ ಭಯವು ವರ್ಷಗಳವರೆಗೆ ನನ್ನ ಬಾಯಿಯನ್ನು ಮುಚ್ಚಿತ್ತು ಎಂದು ಹೇಳಿದ್ದಾರೆ. ಇನ್ನು ಮುಂದುವರೆದು ಮಾತನಾಡಿದ ಅವರು, “ನನ್ನೊಂದಿಗೆ ಉಳಿದುಕೊಂಡಿರುವ ಒಂದು ಭಯವೆಂದರೆ ನನ್ನ ತಾಯಿ ನನ್ನನ್ನು ನಂಬದೇ ಇರಹುದು. ಏಕೆಂದರೆ ‘ಕುಚ್ ಭಿ ಹೋಜಾಯೇ ಮೇರಾ ಪತಿ ದೇವತಾ ಹೈ’ ಮನಸ್ಥಿತಿಯ ವಾತಾವರಣದಲ್ಲಿ ನನ್ನ ತಾಯಿ ಇದ್ದುದ್ದನ್ನ ನಾನು ನೋಡಿದ್ದೇನೆ. ಆದರೆ 15ನೇ ವಯಸ್ಸಿಗೆ ಸಾಕು ಎಂದುಕೊಂಡು ಅವರ ವಿರುದ್ಧ ತಿರುಗಿ ಬಿದ್ದೆ ಎಂದು ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

3 hours ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

4 hours ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

7 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

7 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

7 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

7 hours ago