Categories: LatestPolitics

‘ನಾನು ಪೋಸ್ಟ್ ಡಿಲೀಟ್ ಮಾಡುವುದಿಲ್ಲ’: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ಸಂಸದೆ ಪುತ್ರಿಯ ಬಹಿರಂಗ ಸವಾಲ್

ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ, ಒಡಿಶಾದ ಭುವನೇಶ್ವರ ಕ್ಷೇತ್ರದ ಬಿಜೆಪಿ ಸಂಸದೆ ಹಾಗೂ ಮಾಜಿ ಐಎಎಸ್ ಅಧಿಕಾರಿ ಅಪರಾಜಿತಾ ಸಾರಂಗಿ ಅವರ ಪುತ್ರಿ ಅರ್ಚಿತಾ ಸಾರಂಗಿ ಮಾಡಿದ ಸಾಮಾಜಿಕ ಜಾಲತಾಣದ ಪೋಸ್ಟ್ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಂಬಂಧಿಸಿದ ಸುದ್ದಿಯನ್ನು ಅರ್ಚಿತಾ ಸಾರಂಗಿ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದರು. ಆದರೆ, ಆ ಪೋಸ್ಟ್ ಅನ್ನು ಅಳಿಸುವಂತೆ ತಮ್ಮ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಅವರು ಸಾರ್ವಜನಿಕವಾಗಿ ಆರೋಪಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಮತ್ತೊಂದು ಇನ್‌ಸ್ಟಾಗ್ರಾಂ ಪೋಸ್ಟ್ ಹಂಚಿಕೊಂಡ ಅರ್ಚಿತಾ, “ಧರ್ಮೇಂದ್ರ ಪ್ರಧಾನ್ ಅವರ ಪಿಎ ಅವರಿಗೆ ನನ್ನದೊಂದು ಮಾತು. ಈ ಪೋಸ್ಟ್ ಡಿಲೀಟ್ ಮಾಡಿಸುವಂತೆ ನೀವು ನನ್ನ ತಾಯಿಗೆ ಸಂದೇಶ ಕಳುಹಿಸುತ್ತೀರಿ ಎಂಬುದು ನನಗೆ ಗೊತ್ತಿದೆ. ಈ ಹಿಂದೆ ಕೂಡ ಹೀಗೆಯೇ ಆಗಿತ್ತು. ಆದರೆ ಈ ಬಾರಿ ಯಾವುದೇ ಕಾರಣಕ್ಕೂ ನಾನು ಈ ಪೋಸ್ಟ್ ಡಿಲೀಟ್ ಮಾಡುವುದಿಲ್ಲ. ಜೈ ಜಗನ್ನಾಥ್! ಜೈ ಹಿಂದ್!” ಎಂದು ಬರೆದುಕೊಂಡಿದ್ದರು.

ಈ ಪೋಸ್ಟ್ ವೈರಲ್ ಆದ ಕೆಲವೇ ಗಂಟೆಗಳಲ್ಲಿ ಅರ್ಚಿತಾ ಸಾರಂಗಿ ಅವರ ಇನ್‌ಸ್ಟಾಗ್ರಾಂ ಖಾತೆ ನಿಷ್ಕ್ರಿಯಗೊಂಡಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಇದೇ ವೇಳೆ, ಅರ್ಚಿತಾ ಅವರ ತಾಯಿ ಹಾಗೂ ಬಿಜೆಪಿ ಸಂಸದೆ ಅಪರಾಜಿತಾ ಸಾರಂಗಿ ಅವರು ಧರ್ಮೇಂದ್ರ ಪ್ರಧಾನ್ ಅವರ ನಿರ್ಧಾರವನ್ನು ಬೆಂಬಲಿಸಿದ್ದಾರೆ. ನೀಟ್ ಅಕ್ರಮ ಪ್ರಕರಣದ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಪ್ರಧಾನ್ ಅವರು ರಾಜಕೀಯ ನೈತಿಕತೆಯ ಮಾದರಿಯನ್ನು ತೋರಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಜಕೀಯ ಪ್ರವೇಶಿಸುವ ಮೊದಲು ಅಪರಾಜಿತಾ ಸಾರಂಗಿ ಭಾರತೀಯ ಆಡಳಿತ ಸೇವೆ (IAS) ಅಧಿಕಾರಿಯಾಗಿದ್ದರು. 2024ರ ಲೋಕಸಭಾ ಚುನಾವಣೆಯಲ್ಲಿ ಭುವನೇಶ್ವರ ಕ್ಷೇತ್ರದಿಂದ ಸ್ಪರ್ಧಿಸಿ, ತಮ್ಮ ಪ್ರತಿಸ್ಪರ್ಧಿಯನ್ನು 35 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿ ಸಂಸದರಾಗಿ ಆಯ್ಕೆಯಾಗಿದ್ದರು.

ಇತ್ತ ಒಡಿಶಾದ ಬಿಜೆಪಿ ಪ್ರಮುಖ ನಾಯಕರಲ್ಲಿ ಒಬ್ಬರಾಗಿರುವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ರಾಜ್ಯ ಹಾಗೂ ರಾಷ್ಟ್ರೀಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಈ ಬೆಳವಣಿಗೆಗಳ ನಡುವೆ ಅರ್ಚಿತಾ ಸಾರಂಗಿ ಅವರ ಸಾಮಾಜಿಕ ಜಾಲತಾಣದ ಹೇಳಿಕೆ ವ್ಯಾಪಕ ಗಮನ ಸೆಳೆದಿದೆ.

ಭ್ರಷ್ಟರ ಬೇಟೆ

Recent Posts

‘ಲೀಲಮ್ಮ… ನಿನ್ನ ಗಂಡ ಯಾರಮ್ಮ?’ ಪುಸ್ತಕ ಲೋಕಾರ್ಪಣೆ: ಲೀಲಾವತಿ–ರಾಜ್‌ಕುಮಾರ್‌ ಕುರಿತ ವಿವಾದಗಳಿಗೆ ದಾಖಲೆಗಳ ಸಮೇತ ಉತ್ತರ ಎಂದ ಎನ್‌.ಆರ್‌. ರಮೇಶ್

ಕನ್ನಡದ ಹಿರಿಯ ನಟಿ ದಿವಂಗತ ಲೀಲಾವತಿ ಅವರ ಜೀವನ, ಅವರ ಪತಿ ಮಹಾಲಿಂಗ ಭಾಗವತರ್‌ ಅವರ ಹಿನ್ನೆಲೆ ಹಾಗೂ ಈ…

1 hour ago

ತುಮಕೂರಿನಲ್ಲಿ ಭೀಕರ ಹತ್ಯೆ: ರೌಡಿಶೀಟರ್ ಮಲ್ಲನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ತುಮಕೂರು ತಾಲೂಕಿನ ಬೆಳಗುಂಬ ರಸ್ತೆಯಲ್ಲಿರುವ ಗರುಡ ಕೆಫೆ ಸಮೀಪ ರೌಡಿಶೀಟರ್‌ವೊಬ್ಬನನ್ನು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಹತ್ಯೆಗೈದ ಘಟನೆ ಸೋಮವಾರ ಆತಂಕ…

1 hour ago

ತೊಡೆಯ ಮೇಲೆ ಮಹಿಳೆಯನ್ನು ಕೂರಿಸಿಕೊಂಡು ಆಟೋ ಓಡಿಸಿದ ಅಪ್ರಾಪ್ತ! ವೈರಲ್ ಆದ ವಿಡಿಯೊದ ಅಸಲಿ ಸತ್ಯ ಬಹಿರಂಗ

ಹೈದರಾಬಾದ್‌ನ ಚಾದರ್‌ಘಾಟ್ ಸೇತುವೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ಮಹಿಳೆಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡೇ ಆಟೋರಿಕ್ಷಾ ಚಲಾಯಿಸುತ್ತಿರುವ ವಿಡಿಯೊ ಮತ್ತೊಮ್ಮೆ ಸಾಮಾಜಿಕ…

21 hours ago

ಪೊಲೀಸ್-ಪತ್ರಕರ್ತರ ಸೋಗಿನಲ್ಲಿ ₹60 ಸಾವಿರ ಸುಲಿಗೆ! ನಾಲ್ವರು ಯೂಟ್ಯೂಬರ್‌ಗಳು ಅಂದರ್

ಹುಕ್ಕೇರಿ ತಾಲ್ಲೂಕಿನಲ್ಲಿ ಪತ್ರಕರ್ತರು ಹಾಗೂ ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್‌ಗಳನ್ನು ಹುಕ್ಕೇರಿ…

21 hours ago

ವೇದಿಕೆಯಲ್ಲಿ ಪೊಲೀಸ್ ರಾಜೀನಾಮೆ ಘೋಷಣೆ ವೈರಲ್.. ಆದರೆ ಅಸಲಿ ಕಥೆ ಬೇರೆಯೇ!

ದೆಹಲಿ ಜಂತರ್ ಮಂತರ್‌ನಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ವೇಳೆ ಪೊಲೀಸರು…

21 hours ago

ಎಸ್‌ಬಿಐ ಮ್ಯಾನೇಜರ್‌ಗೆ ಕಪಾಳಮೋಕ್ಷ? ಕರುಣಾನಿಧಿ ಮೊಮ್ಮಗಳು ಕಾಯಲ್ವಿಳಿ ವಿರುದ್ಧ ಎಫ್‌ಐಆರ್; ವೈರಲ್ ಆಯ್ತು ಸಿಸಿಟಿವಿ ವಿಡಿಯೋ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಮೊಮ್ಮಗಳು ಹಾಗೂ ಕೇಂದ್ರ ಸಚಿವ ಎಂ.ಕೆ. ಅಲಗಿರಿ ಅವರ ಪುತ್ರಿ ಕಾಯಲ್ವಿಳಿ…

22 hours ago