Latest

ಮಂಡ್ಯದ ಬೆಣ್ಣೆ ಇಡ್ಲಿ ಖ್ಯಾತಿಯ ಇಡ್ಲಿ ಶಿವಪ್ಪ ನಿಧನ

ರಾಮನಗರ ಮೂಲದವರಾದ ಶಿವಪ್ಪ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕು ದರಸಗುಪ್ಪೆ ಗ್ರಾಮದಲ್ಲಿ ನೆಲೆಸಿದ್ದರು. ಚಾಮರಾಜನಗರ ಬೀದರ್ ರಾಷ್ಟ್ರೀಯ ಹೆದ್ದಾರಿ ಸಮೀಪವಿದ್ದ ತಮ್ಮ ಮನೆಯಲ್ಲಿಯೇ ಜೀವನೋಪಾಯಕ್ಕೆ ಸಣ್ಣ ಟೀ ಅಂಗಡಿ ಪ್ರಾರಂಭಿಸಿದರು. ಶುಚಿ ಮತ್ತು ರುಚಿಗೆ ಖ್ಯಾತರಾಗಿದ್ದ ಶಿವಪ್ಪ ಅವರ ಹೋಟೆಲ್‍ನಲ್ಲಿ ಟೀ ಕುಡಿಯಲು ಜನ ತಂಡ ತಂಡವಾಗಿ ಆಗಮಿಸುತ್ತಿದ್ದರು. ನಂತರ ಸಣ್ಣದಾಗಿ ಬೆಳಗಿನ ಉಪಹಾರ ಇಡ್ಲಿ ಮಾರಲು ಪ್ರಾರಂಭಿಸಿದರು. ನೋಡ ನೋಡುತ್ತಿದ್ದಂತೆಯೇ ಅವರ ಇಡ್ಲಿ ಬೆಣ್ಣೆ ಇಡ್ಲಿ ಎಂದೇ ಜನಪ್ರಿಯವಾಯಿತು. ಇವರು ಮಾಡುವ ಇಡ್ಲಿಗೆ ಜನರು ಗಂಟೆ ಗಟ್ಟಲೇ ಕಾಯುವಂತಾಯಿತು.
ಶ್ರೀರಂಗಪಟ್ಟಣ-ಬೀದರ್ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಈ ಪುಟ್ಟ ಹೋಟೆಲ್ ದಕ್ಷಿಣ ಭಾರತದಲ್ಲಿ ಹೆಸರು ವಾಸಿಯಾಗಿತ್ತು. ಹೋಟೆಲ್‍ ಗೆ ಮೈಸೂರು, ಮಂಡ್ಯ, ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಯ ಪ್ರವಾಸಿಗರು ಇಡ್ಲಿ ತಿನ್ನಲು ಆಗಮಿಸುತ್ತಿದ್ದರು.
ನಟರಾದ ಪ್ರಕಾಶ್ ರೈ ಹಾಗೂ ಸಿಹಿಕಹಿ ಚಂದ್ರು ಅವರು ತಮ್ಮ ಕಾರ್ಯಕ್ರಮಕ್ಕಾಗಿ ಆಗಮಿಸಿ ಇವರ ಇಡ್ಲಿ ಸವಿದು ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಶಿವಪ್ಪ ಸ್ಕೂಟರ್ ನಲ್ಲಿ ರಾಮನಗರಕ್ಕೆ ಹೋಗುತ್ತಿದ್ದಾಗ ರಸ್ತೆ ಮಧ್ಯೆ ನಾಯಿ ಅಡ್ಡ ಬಂದು ಸ್ಕೂಟರ್ ನಿಂದ ಕೆಳಕ್ಕೆ ಬಿದ್ದು ಗಾಯಗೊಂಡಿದ್ದರು.
ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿ ನಂತರ ಮನೆಗೆ ಕರೆತರಲಾಗಿತ್ತು.
ಗುರುವಾರ ಮಧ್ಯರಾತ್ರಿ ತೀವ್ರ ನೋವಿನಿಂದ ನರಳುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ, ಪುತ್ರ ಸೇರಿದಂತೆ ಸಾವಿರಾರು ಮಂದಿ ಇಡ್ಲಿ ಪ್ರಿಯರನ್ನು ಅಗಲಿದ್ದಾರೆ. ಶಿವಪ್ಪ ಅವರ ಅಂತ್ಯಕ್ರಿಯೆ ದರಸಗುಪ್ಪೆ ಗ್ರಾಮದ ಬಳಿ ನಡೆಯಲಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago