Latest

ಮಂಡ್ಯದ ಬೆಣ್ಣೆ ಇಡ್ಲಿ ಖ್ಯಾತಿಯ ಇಡ್ಲಿ ಶಿವಪ್ಪ ನಿಧನ

ರಾಮನಗರ ಮೂಲದವರಾದ ಶಿವಪ್ಪ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕು ದರಸಗುಪ್ಪೆ ಗ್ರಾಮದಲ್ಲಿ ನೆಲೆಸಿದ್ದರು. ಚಾಮರಾಜನಗರ ಬೀದರ್ ರಾಷ್ಟ್ರೀಯ ಹೆದ್ದಾರಿ ಸಮೀಪವಿದ್ದ ತಮ್ಮ ಮನೆಯಲ್ಲಿಯೇ ಜೀವನೋಪಾಯಕ್ಕೆ ಸಣ್ಣ ಟೀ ಅಂಗಡಿ ಪ್ರಾರಂಭಿಸಿದರು. ಶುಚಿ ಮತ್ತು ರುಚಿಗೆ ಖ್ಯಾತರಾಗಿದ್ದ ಶಿವಪ್ಪ ಅವರ ಹೋಟೆಲ್‍ನಲ್ಲಿ ಟೀ ಕುಡಿಯಲು ಜನ ತಂಡ ತಂಡವಾಗಿ ಆಗಮಿಸುತ್ತಿದ್ದರು. ನಂತರ ಸಣ್ಣದಾಗಿ ಬೆಳಗಿನ ಉಪಹಾರ ಇಡ್ಲಿ ಮಾರಲು ಪ್ರಾರಂಭಿಸಿದರು. ನೋಡ ನೋಡುತ್ತಿದ್ದಂತೆಯೇ ಅವರ ಇಡ್ಲಿ ಬೆಣ್ಣೆ ಇಡ್ಲಿ ಎಂದೇ ಜನಪ್ರಿಯವಾಯಿತು. ಇವರು ಮಾಡುವ ಇಡ್ಲಿಗೆ ಜನರು ಗಂಟೆ ಗಟ್ಟಲೇ ಕಾಯುವಂತಾಯಿತು.
ಶ್ರೀರಂಗಪಟ್ಟಣ-ಬೀದರ್ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಈ ಪುಟ್ಟ ಹೋಟೆಲ್ ದಕ್ಷಿಣ ಭಾರತದಲ್ಲಿ ಹೆಸರು ವಾಸಿಯಾಗಿತ್ತು. ಹೋಟೆಲ್‍ ಗೆ ಮೈಸೂರು, ಮಂಡ್ಯ, ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಯ ಪ್ರವಾಸಿಗರು ಇಡ್ಲಿ ತಿನ್ನಲು ಆಗಮಿಸುತ್ತಿದ್ದರು.
ನಟರಾದ ಪ್ರಕಾಶ್ ರೈ ಹಾಗೂ ಸಿಹಿಕಹಿ ಚಂದ್ರು ಅವರು ತಮ್ಮ ಕಾರ್ಯಕ್ರಮಕ್ಕಾಗಿ ಆಗಮಿಸಿ ಇವರ ಇಡ್ಲಿ ಸವಿದು ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಶಿವಪ್ಪ ಸ್ಕೂಟರ್ ನಲ್ಲಿ ರಾಮನಗರಕ್ಕೆ ಹೋಗುತ್ತಿದ್ದಾಗ ರಸ್ತೆ ಮಧ್ಯೆ ನಾಯಿ ಅಡ್ಡ ಬಂದು ಸ್ಕೂಟರ್ ನಿಂದ ಕೆಳಕ್ಕೆ ಬಿದ್ದು ಗಾಯಗೊಂಡಿದ್ದರು.
ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿ ನಂತರ ಮನೆಗೆ ಕರೆತರಲಾಗಿತ್ತು.
ಗುರುವಾರ ಮಧ್ಯರಾತ್ರಿ ತೀವ್ರ ನೋವಿನಿಂದ ನರಳುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ, ಪುತ್ರ ಸೇರಿದಂತೆ ಸಾವಿರಾರು ಮಂದಿ ಇಡ್ಲಿ ಪ್ರಿಯರನ್ನು ಅಗಲಿದ್ದಾರೆ. ಶಿವಪ್ಪ ಅವರ ಅಂತ್ಯಕ್ರಿಯೆ ದರಸಗುಪ್ಪೆ ಗ್ರಾಮದ ಬಳಿ ನಡೆಯಲಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 day ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 day ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 day ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 day ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 day ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 day ago