ಹುಬ್ಬಳ್ಳಿ (ಆ.4): ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿನ ನೇಹಾ ಹತ್ಯೆ ಪ್ರಕರಣದಲ್ಲಿ ಮತ್ತೊಂದು ವಿವಾದಾತ್ಮಕ ಬೆಳವಣಿಗೆ ನಡೆದಿದೆ. ಈ ಕೃತ್ಯದಲ್ಲಿ ಅರೆಸ್ಟ್ ಆಗಿರುವ ಆರೋಪಿ ಫಯಾಜ್ ಇದೀಗ ಜಾಮೀನಿಗಾಗಿ ಕೋರ್ಟ್ ಮೆಟ್ಟಿಲೇರಿದ್ದು, ತನ್ನ ಅರ್ಜಿಯಲ್ಲಿ ನಟ ದರ್ಶನ್ ಉದಾಹರಣೆ ನೀಡಿರುವುದು ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ.
ಫಯಾಜ್ ಜಾಮೀನು ಅರ್ಜಿ ಸಲ್ಲಿಸುತ್ತಾ, “ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ಗೆ ಜಾಮೀನು ಸಿಕ್ಕಿದೆ. ಅತೀವ ಪಾಪ ಮಾಡಿಕೊಂಡ ಅವನಿಗೆ ಜಾಮೀನು ಸಿಗಬಹುದಾದರೆ ನನಗೂ ಸಹ ಜಾಮೀನು ನೀಡಬೇಕು” ಎಂಬ ವ್ಯಾಖ್ಯಾನವನ್ನು ಅರ್ಜಿಯಲ್ಲಿ ಮುಂದಿಟ್ಟಿದ್ದಾನೆ. ಈ ಅರ್ಜಿ ಈಗ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಂದೆ ವಿಚಾರಣೆಯಲ್ಲಿದ್ದು, ಆಗಸ್ಟ್ 4ರಂದು ಅಂತಿಮ ಆದೇಶ ಹೊರಬೀಳಲಿದೆ.
ಆರೋಪಿಯ ಈ ಬೇಡಿಕೆ ಕೇಳಿದ ನೇಹಾ ತಂದೆ ನಿರಂಜನ್ ಭಾರೀ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನಟರು ಸಮಾಜಕ್ಕೆ ಮಾದರಿಯಾಗಬೇಕಾದವರು. ಆದರೆ ದರ್ಶನ್ ತನ್ನ ನಟನೆಯಿಂದ ಇಲ್ಲ, ಹತ್ಯೆ ಪ್ರಕರಣದಲ್ಲಿ ಹೆಸರು ಬರುತ್ತಿರುವ ರೀತಿಯಿಂದ ಮಾತ್ರ ಮಾದರಿಯಾಗಿದ್ದಾರೆ. ಇಂಥ ದುಷ್ಟರಿಗೆ ಜಾಮೀನು ಸಿಗೋದು ನೋವು ತಂದಿದೆ. ನನ್ನ ಮಗಳಂತೆ ಯಾರಿಗೂ ಅನ್ಯಾಯ ಆಗಬಾರದು. ಮಗಳಿಗೆ ನ್ಯಾಯ ಸಿಗಬೇಕು” ಎಂದು ಅವರು ಕಣ್ಣೀರಿನಿಂದ ಪ್ರತಿಕ್ರಿಯಿಸಿದ್ದಾರೆ.
ಘಟನೆ ಹಿನ್ನಲೆ:
ಹುಬ್ಬಳ್ಳಿಯ ಈ ಹೃದಯವಿದ್ರಾವಕ ಘಟನೆ 2024ರ ಏಪ್ರಿಲ್ 18ರಂದು ಸಂಜೆ 4:45ರ ಹೊತ್ತಿಗೆ ನಡೆದಿತ್ತು. ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದಾಗ, ಆರೋಪಿ ಫಯಾಜ್ ಆಕೆಯ ಮೇಲೆ ಚಾಕುವಿನಿಂದ ದಾಳಿ ನಡೆಸಿದ. ಆಕೆಯ ಕುತ್ತಿಗೆ, ಹೊಟ್ಟೆ ಮತ್ತು ಬೆನ್ನಿನ ಭಾಗಕ್ಕೆ ನಿರ್ದಯವಾಗಿ ಇರಿದು ಹತ್ಯೆಗೈದಿದ್ದನು. ನಂತರ, ಆಸ್ಪತ್ರೆಯ ಹಿಂಭಾಗದಲ್ಲಿ ತಾವೆಯಾಗಿ ಕುಳಿತಿದ್ದ ಆರೋಪಿ, ಪೊಲೀಸರ ಕೈಯಲ್ಲಿ ಬಿದ್ದನು.
ಈ ಪ್ರಕರಣ ರಾಜ್ಯದಾದ್ಯಂತ ಆಕ್ರೋಶದ ಅಲೆ ಎಬ್ಬಿಸಿದ್ದರೂ, ಈಗ ಆರೋಪಿಯ ಜಾಮೀನು ಅರ್ಜಿಯಲ್ಲಿ ನಟ ದರ್ಶನ್ ಉಲ್ಲೇಖವಾಗಿರುವುದು ಇನ್ನಷ್ಟು ಭಿನ್ನಮತ ಹುಟ್ಟುಹಾಕಿದೆ. ನ್ಯಾಯಾಲಯ ಈ ಪ್ರಕರಣಕ್ಕೆ ಏನೆಂದು ತೀರ್ಪು ನೀಡುತ್ತದೆ ಎಂಬುದು ಇದೀಗ ಎಲ್ಲರ ಗಮನ ಸೆಳೆದಿದೆ.
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…
ಚಿತ್ರದುರ್ಗ: ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಗ್ರಾಮದ ಹತ್ತಿರ ನಡೆದ ವಿಶಿಷ್ಟ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಸಾಧುಗಳ ವೇಷ ತಾಳಿ ರೈತರ…
ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…