ಹುಬ್ಬಳ್ಳಿ (ಆ.4): ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿನ ನೇಹಾ ಹತ್ಯೆ ಪ್ರಕರಣದಲ್ಲಿ ಮತ್ತೊಂದು ವಿವಾದಾತ್ಮಕ ಬೆಳವಣಿಗೆ ನಡೆದಿದೆ. ಈ ಕೃತ್ಯದಲ್ಲಿ ಅರೆಸ್ಟ್ ಆಗಿರುವ ಆರೋಪಿ ಫಯಾಜ್ ಇದೀಗ ಜಾಮೀನಿಗಾಗಿ ಕೋರ್ಟ್ ಮೆಟ್ಟಿಲೇರಿದ್ದು, ತನ್ನ ಅರ್ಜಿಯಲ್ಲಿ ನಟ ದರ್ಶನ್ ಉದಾಹರಣೆ ನೀಡಿರುವುದು ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ.
ಫಯಾಜ್ ಜಾಮೀನು ಅರ್ಜಿ ಸಲ್ಲಿಸುತ್ತಾ, “ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ಗೆ ಜಾಮೀನು ಸಿಕ್ಕಿದೆ. ಅತೀವ ಪಾಪ ಮಾಡಿಕೊಂಡ ಅವನಿಗೆ ಜಾಮೀನು ಸಿಗಬಹುದಾದರೆ ನನಗೂ ಸಹ ಜಾಮೀನು ನೀಡಬೇಕು” ಎಂಬ ವ್ಯಾಖ್ಯಾನವನ್ನು ಅರ್ಜಿಯಲ್ಲಿ ಮುಂದಿಟ್ಟಿದ್ದಾನೆ. ಈ ಅರ್ಜಿ ಈಗ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಂದೆ ವಿಚಾರಣೆಯಲ್ಲಿದ್ದು, ಆಗಸ್ಟ್ 4ರಂದು ಅಂತಿಮ ಆದೇಶ ಹೊರಬೀಳಲಿದೆ.
ಆರೋಪಿಯ ಈ ಬೇಡಿಕೆ ಕೇಳಿದ ನೇಹಾ ತಂದೆ ನಿರಂಜನ್ ಭಾರೀ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನಟರು ಸಮಾಜಕ್ಕೆ ಮಾದರಿಯಾಗಬೇಕಾದವರು. ಆದರೆ ದರ್ಶನ್ ತನ್ನ ನಟನೆಯಿಂದ ಇಲ್ಲ, ಹತ್ಯೆ ಪ್ರಕರಣದಲ್ಲಿ ಹೆಸರು ಬರುತ್ತಿರುವ ರೀತಿಯಿಂದ ಮಾತ್ರ ಮಾದರಿಯಾಗಿದ್ದಾರೆ. ಇಂಥ ದುಷ್ಟರಿಗೆ ಜಾಮೀನು ಸಿಗೋದು ನೋವು ತಂದಿದೆ. ನನ್ನ ಮಗಳಂತೆ ಯಾರಿಗೂ ಅನ್ಯಾಯ ಆಗಬಾರದು. ಮಗಳಿಗೆ ನ್ಯಾಯ ಸಿಗಬೇಕು” ಎಂದು ಅವರು ಕಣ್ಣೀರಿನಿಂದ ಪ್ರತಿಕ್ರಿಯಿಸಿದ್ದಾರೆ.
ಘಟನೆ ಹಿನ್ನಲೆ:
ಹುಬ್ಬಳ್ಳಿಯ ಈ ಹೃದಯವಿದ್ರಾವಕ ಘಟನೆ 2024ರ ಏಪ್ರಿಲ್ 18ರಂದು ಸಂಜೆ 4:45ರ ಹೊತ್ತಿಗೆ ನಡೆದಿತ್ತು. ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದಾಗ, ಆರೋಪಿ ಫಯಾಜ್ ಆಕೆಯ ಮೇಲೆ ಚಾಕುವಿನಿಂದ ದಾಳಿ ನಡೆಸಿದ. ಆಕೆಯ ಕುತ್ತಿಗೆ, ಹೊಟ್ಟೆ ಮತ್ತು ಬೆನ್ನಿನ ಭಾಗಕ್ಕೆ ನಿರ್ದಯವಾಗಿ ಇರಿದು ಹತ್ಯೆಗೈದಿದ್ದನು. ನಂತರ, ಆಸ್ಪತ್ರೆಯ ಹಿಂಭಾಗದಲ್ಲಿ ತಾವೆಯಾಗಿ ಕುಳಿತಿದ್ದ ಆರೋಪಿ, ಪೊಲೀಸರ ಕೈಯಲ್ಲಿ ಬಿದ್ದನು.
ಈ ಪ್ರಕರಣ ರಾಜ್ಯದಾದ್ಯಂತ ಆಕ್ರೋಶದ ಅಲೆ ಎಬ್ಬಿಸಿದ್ದರೂ, ಈಗ ಆರೋಪಿಯ ಜಾಮೀನು ಅರ್ಜಿಯಲ್ಲಿ ನಟ ದರ್ಶನ್ ಉಲ್ಲೇಖವಾಗಿರುವುದು ಇನ್ನಷ್ಟು ಭಿನ್ನಮತ ಹುಟ್ಟುಹಾಕಿದೆ. ನ್ಯಾಯಾಲಯ ಈ ಪ್ರಕರಣಕ್ಕೆ ಏನೆಂದು ತೀರ್ಪು ನೀಡುತ್ತದೆ ಎಂಬುದು ಇದೀಗ ಎಲ್ಲರ ಗಮನ ಸೆಳೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…