Latest

ಅನ್ನಭಾಗ್ಯ ಅಕ್ಕಿ ಕೊಡದಿದ್ದರೆ 1967ಕ್ಕೆ ಕರೆ ಮಾಡಿ

ಕಾರವಾರ : 2025ರ ಫೆಬ್ರವರಿ ಹಾಗೂ ಮಾರ್ಚ ತಿಂಗಳ ಅಕ್ಕಿಯನ್ನು ಸರ್ಕಾರ ಒಟ್ಟಿಗೆ ಕೊಡಲು ನಿರ್ಧರಿಸಿದ್ದು, ಪಡಿತರ ಅಂಗಡಿಯಲ್ಲಿ ಅಕ್ಕಿ ಕೊಡದೇ ಇದ್ದರೆ 1967ಗೆ ಫೋನ್ ಮಾಡಿ’ ಎಂದು ಉತ್ತರ ಕನ್ನಡ ಜಿಲ್ಲಾಡಳಿತ ಹೇಳಿದೆ. ಪಡಿತರ ವಿತರಣೆಯಲ್ಲಿ ಯಾವುದೇ ಸಮಸ್ಯೆಯಾದರೂ ದೂರು ನೀಡುವಂತೆ ಫಲಾನುಭವಿಗಳಿಗೆ ಸೂಚಿಸಲಾಗಿದೆ.

ಗಡಿಭಾಗದಲ್ಲಿ ಅಕ್ಕಿ ಅನಧಿಕೃತ ಸಾಗಾಟ, ಅಕ್ರಮ ಮಾರಾಟ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆಯೂ ಗಮನಹರಿಸಿ’ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. `ಪಡಿತರ ಚೀಟಿದಾರರಿಗೆ ವಿತರಿಸಿದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಅನಧಿಕೃತವಾಗಿ ದಾಸ್ತಾನು-ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು’ ಎಂದು ಅವರು ಆದೇಶಿಸಿದರು.

ಅಕ್ಕಿ ವಿತರಣೆ ಕುರಿತಂತೆ ಪಡಿತರ ಅಂಗಡಿಗಳಲ್ಲಿ ಪ್ರತಿ ದಿನದ ವಿತರಣೆಯ ವಿವರ ಮತ್ತು ದಾಸ್ತಾನು ವಿವರಗಳನ್ನು ಪರಿಶೀಲಿಸಬೇಕು. ಪಡಿತರ ವಿತರಣೆಯ ತತ್ರಾಂಶ ಕಾರ್ಯನಿರ್ವಹಣೆಗೆ ಇಂರ್ಟನೆಟ್ ಸಮಸ್ಯೆಯಿದಲ್ಲಿ ಬಿ ಎಸ್ ಎನ್ ಎಲ್ ಮೂಲಕ ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಗಡಿಬಾಗದಲ್ಲಿ ಅನಧಿಕೃವಾಗಿ ಅಕ್ಕಿಯ ಮಾರಾಟ ಮತ್ತು ಸಾಗಾಟದ ಬಗ್ಗೆ ನಿಗಾ ವಹಿಸಬೇಕು’ ಎಂದವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪಡಿತರ ಚೀಟಿಯ ಕೆವೈಸಿಯಲ್ಲಿ ಶೇ 97ರಷ್ಟು ಪ್ರಗತಿಯಾಗಿದ್ದು, ಮಾರ್ಚ್ ತಿಂಗಳ ಕೊನೆಯವರೆಗೆ ಬೆಳಿಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ-ಕೆವೈಸಿ ಮಾಡುವ ಕಾರ್ಯ ನಡೆಯಲಿದೆ. ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡದೇ ಕೆವೈಸಿ ಮಾಡಿಸಿಕೊಳ್ಳಬೇಕು. ಪಡಿತರ ಚೀಟಿದಾರರು ತಮ್ಮ ಬಯೋ ಮೆಟ್ರಿಕ್ ನೀಡಿದ ತಕ್ಷಣವೇ ಪಡಿತರ ಪಡೆಯಬೇಕು’ ಎಂದವರು ಕರೆ ನೀಡಿದರು. ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಮಂಜುನಾಥ ರೇವಣ್‌ಕರ್ ಹಾಗೂ ವಿವಿಧ ತಾಲೂಕಿನ ಆಹಾರ ನಿರೀಕ್ಷಕರು ಸಭೆಯಲ್ಲಿದ್ದರು.

ಭ್ರಷ್ಟರ ಬೇಟೆ

Recent Posts

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

2 hours ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

3 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

1 day ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

1 day ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

1 day ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago