Latest

ಅನ್ನಭಾಗ್ಯ ಅಕ್ಕಿ ಕೊಡದಿದ್ದರೆ 1967ಕ್ಕೆ ಕರೆ ಮಾಡಿ

ಕಾರವಾರ : 2025ರ ಫೆಬ್ರವರಿ ಹಾಗೂ ಮಾರ್ಚ ತಿಂಗಳ ಅಕ್ಕಿಯನ್ನು ಸರ್ಕಾರ ಒಟ್ಟಿಗೆ ಕೊಡಲು ನಿರ್ಧರಿಸಿದ್ದು, ಪಡಿತರ ಅಂಗಡಿಯಲ್ಲಿ ಅಕ್ಕಿ ಕೊಡದೇ ಇದ್ದರೆ 1967ಗೆ ಫೋನ್ ಮಾಡಿ’ ಎಂದು ಉತ್ತರ ಕನ್ನಡ ಜಿಲ್ಲಾಡಳಿತ ಹೇಳಿದೆ. ಪಡಿತರ ವಿತರಣೆಯಲ್ಲಿ ಯಾವುದೇ ಸಮಸ್ಯೆಯಾದರೂ ದೂರು ನೀಡುವಂತೆ ಫಲಾನುಭವಿಗಳಿಗೆ ಸೂಚಿಸಲಾಗಿದೆ.

ಗಡಿಭಾಗದಲ್ಲಿ ಅಕ್ಕಿ ಅನಧಿಕೃತ ಸಾಗಾಟ, ಅಕ್ರಮ ಮಾರಾಟ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆಯೂ ಗಮನಹರಿಸಿ’ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. `ಪಡಿತರ ಚೀಟಿದಾರರಿಗೆ ವಿತರಿಸಿದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಅನಧಿಕೃತವಾಗಿ ದಾಸ್ತಾನು-ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು’ ಎಂದು ಅವರು ಆದೇಶಿಸಿದರು.

ಅಕ್ಕಿ ವಿತರಣೆ ಕುರಿತಂತೆ ಪಡಿತರ ಅಂಗಡಿಗಳಲ್ಲಿ ಪ್ರತಿ ದಿನದ ವಿತರಣೆಯ ವಿವರ ಮತ್ತು ದಾಸ್ತಾನು ವಿವರಗಳನ್ನು ಪರಿಶೀಲಿಸಬೇಕು. ಪಡಿತರ ವಿತರಣೆಯ ತತ್ರಾಂಶ ಕಾರ್ಯನಿರ್ವಹಣೆಗೆ ಇಂರ್ಟನೆಟ್ ಸಮಸ್ಯೆಯಿದಲ್ಲಿ ಬಿ ಎಸ್ ಎನ್ ಎಲ್ ಮೂಲಕ ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಗಡಿಬಾಗದಲ್ಲಿ ಅನಧಿಕೃವಾಗಿ ಅಕ್ಕಿಯ ಮಾರಾಟ ಮತ್ತು ಸಾಗಾಟದ ಬಗ್ಗೆ ನಿಗಾ ವಹಿಸಬೇಕು’ ಎಂದವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪಡಿತರ ಚೀಟಿಯ ಕೆವೈಸಿಯಲ್ಲಿ ಶೇ 97ರಷ್ಟು ಪ್ರಗತಿಯಾಗಿದ್ದು, ಮಾರ್ಚ್ ತಿಂಗಳ ಕೊನೆಯವರೆಗೆ ಬೆಳಿಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ-ಕೆವೈಸಿ ಮಾಡುವ ಕಾರ್ಯ ನಡೆಯಲಿದೆ. ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡದೇ ಕೆವೈಸಿ ಮಾಡಿಸಿಕೊಳ್ಳಬೇಕು. ಪಡಿತರ ಚೀಟಿದಾರರು ತಮ್ಮ ಬಯೋ ಮೆಟ್ರಿಕ್ ನೀಡಿದ ತಕ್ಷಣವೇ ಪಡಿತರ ಪಡೆಯಬೇಕು’ ಎಂದವರು ಕರೆ ನೀಡಿದರು. ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಮಂಜುನಾಥ ರೇವಣ್‌ಕರ್ ಹಾಗೂ ವಿವಿಧ ತಾಲೂಕಿನ ಆಹಾರ ನಿರೀಕ್ಷಕರು ಸಭೆಯಲ್ಲಿದ್ದರು.

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

4 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

4 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

4 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

4 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

19 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

19 hours ago