Latest

ಅನ್ನಭಾಗ್ಯ ಅಕ್ಕಿ ಕೊಡದಿದ್ದರೆ 1967ಕ್ಕೆ ಕರೆ ಮಾಡಿ

ಕಾರವಾರ : 2025ರ ಫೆಬ್ರವರಿ ಹಾಗೂ ಮಾರ್ಚ ತಿಂಗಳ ಅಕ್ಕಿಯನ್ನು ಸರ್ಕಾರ ಒಟ್ಟಿಗೆ ಕೊಡಲು ನಿರ್ಧರಿಸಿದ್ದು, ಪಡಿತರ ಅಂಗಡಿಯಲ್ಲಿ ಅಕ್ಕಿ ಕೊಡದೇ ಇದ್ದರೆ 1967ಗೆ ಫೋನ್ ಮಾಡಿ’ ಎಂದು ಉತ್ತರ ಕನ್ನಡ ಜಿಲ್ಲಾಡಳಿತ ಹೇಳಿದೆ. ಪಡಿತರ ವಿತರಣೆಯಲ್ಲಿ ಯಾವುದೇ ಸಮಸ್ಯೆಯಾದರೂ ದೂರು ನೀಡುವಂತೆ ಫಲಾನುಭವಿಗಳಿಗೆ ಸೂಚಿಸಲಾಗಿದೆ.

ಗಡಿಭಾಗದಲ್ಲಿ ಅಕ್ಕಿ ಅನಧಿಕೃತ ಸಾಗಾಟ, ಅಕ್ರಮ ಮಾರಾಟ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆಯೂ ಗಮನಹರಿಸಿ’ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. `ಪಡಿತರ ಚೀಟಿದಾರರಿಗೆ ವಿತರಿಸಿದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಅನಧಿಕೃತವಾಗಿ ದಾಸ್ತಾನು-ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು’ ಎಂದು ಅವರು ಆದೇಶಿಸಿದರು.

ಅಕ್ಕಿ ವಿತರಣೆ ಕುರಿತಂತೆ ಪಡಿತರ ಅಂಗಡಿಗಳಲ್ಲಿ ಪ್ರತಿ ದಿನದ ವಿತರಣೆಯ ವಿವರ ಮತ್ತು ದಾಸ್ತಾನು ವಿವರಗಳನ್ನು ಪರಿಶೀಲಿಸಬೇಕು. ಪಡಿತರ ವಿತರಣೆಯ ತತ್ರಾಂಶ ಕಾರ್ಯನಿರ್ವಹಣೆಗೆ ಇಂರ್ಟನೆಟ್ ಸಮಸ್ಯೆಯಿದಲ್ಲಿ ಬಿ ಎಸ್ ಎನ್ ಎಲ್ ಮೂಲಕ ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಗಡಿಬಾಗದಲ್ಲಿ ಅನಧಿಕೃವಾಗಿ ಅಕ್ಕಿಯ ಮಾರಾಟ ಮತ್ತು ಸಾಗಾಟದ ಬಗ್ಗೆ ನಿಗಾ ವಹಿಸಬೇಕು’ ಎಂದವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪಡಿತರ ಚೀಟಿಯ ಕೆವೈಸಿಯಲ್ಲಿ ಶೇ 97ರಷ್ಟು ಪ್ರಗತಿಯಾಗಿದ್ದು, ಮಾರ್ಚ್ ತಿಂಗಳ ಕೊನೆಯವರೆಗೆ ಬೆಳಿಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ-ಕೆವೈಸಿ ಮಾಡುವ ಕಾರ್ಯ ನಡೆಯಲಿದೆ. ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡದೇ ಕೆವೈಸಿ ಮಾಡಿಸಿಕೊಳ್ಳಬೇಕು. ಪಡಿತರ ಚೀಟಿದಾರರು ತಮ್ಮ ಬಯೋ ಮೆಟ್ರಿಕ್ ನೀಡಿದ ತಕ್ಷಣವೇ ಪಡಿತರ ಪಡೆಯಬೇಕು’ ಎಂದವರು ಕರೆ ನೀಡಿದರು. ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಮಂಜುನಾಥ ರೇವಣ್‌ಕರ್ ಹಾಗೂ ವಿವಿಧ ತಾಲೂಕಿನ ಆಹಾರ ನಿರೀಕ್ಷಕರು ಸಭೆಯಲ್ಲಿದ್ದರು.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

7 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

13 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

13 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago