ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಆತನಿಗೆ ಬಾಡಿಗೆಗೆ ಮನೆ ನೀಡಿದ್ದ ದಾವಣಗೆರೆ ಜಿಲ್ಲೆಯ ಬನ್ನಿಕೋಡು ಗ್ರಾಮದ ಕುಟುಂಬ ಇದೀಗ ತೀವ್ರ ಆಘಾತ ವ್ಯಕ್ತಪಡಿಸಿದೆ.
ಮನೆ ಮಾಲೀಕರಾದ ರೇಣುಕಮ್ಮ ಮತ್ತು ಗುತ್ಯಪ್ಪ ಮಾಧ್ಯಮಗಳೊಂದಿಗೆ ಮಾತನಾಡಿ, “ಸುಮಾರು 15 ದಿನಗಳ ಹಿಂದೆ ಸುಹೇಲ್ ನಮ್ಮ ಮನೆಗೆ ಬಾಡಿಗೆಗೆ ಬಂದಿದ್ದ. ಆತನೊಂದಿಗೆ ಸುಮಾರು ಹತ್ತು ಮಂದಿ ಯುವಕರು ಕೂಡ ಇದ್ದರು. ತಿಂಗಳಿಗೆ ₹6,000 ಬಾಡಿಗೆ ನೀಡುವುದಾಗಿ ಹೇಳಿದ್ದರು” ಎಂದು ತಿಳಿಸಿದ್ದಾರೆ.
ಅವರ ಪ್ರಕಾರ, ಸುಹೇಲ್ ಮತ್ತು ಆತನ ಜೊತೆಗಿದ್ದವರು ಹಿಂದಿಯಲ್ಲೇ ಮಾತನಾಡುತ್ತಿದ್ದು, ಹಾಲು ಹಾಗೂ ಮಜ್ಜಿಗೆಯನ್ನು ಖರೀದಿಸುತ್ತಿದ್ದರು. ಸ್ಥಳೀಯರೊಂದಿಗೆ ಹೆಚ್ಚು ಬೆರೆಯದೇ ತಮ್ಮಷ್ಟಕ್ಕೆ ತಾವು ಇರುತ್ತಿದ್ದ ಕಾರಣ ಯಾವುದೇ ಅನುಮಾನ ಮೂಡಿರಲಿಲ್ಲ ಎಂದು ಹೇಳಿದ್ದಾರೆ.
ಜೂನ್ 23ರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ 20ಕ್ಕೂ ಹೆಚ್ಚು ಪೊಲೀಸರು ಮನೆಗೆ ಆಗಮಿಸಿ ಬಾಗಿಲು ತೆರೆಯುವಂತೆ ಸೂಚಿಸಿದರು. ಬಾಗಿಲು ತೆರೆದ ತಕ್ಷಣ ಪೊಲೀಸರು ಒಳನುಗ್ಗಿ ಮನೆಯಲ್ಲಿದ್ದವರನ್ನು ವಶಕ್ಕೆ ಪಡೆದರು. ತನಿಖೆಗಾಗಿ ಕರೆದುಕೊಂಡು ಹೋಗುತ್ತಿದ್ದೇವೆ ಎಂದು ಮಾತ್ರ ತಿಳಿಸಿದ್ದು, ಬಳಿಕ ಟಿವಿ ಸುದ್ದಿಗಳ ಮೂಲಕವೇ ಸುಹೇಲ್ ಉಗ್ರ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತನಾಗಿರುವುದು ತಿಳಿಯಿತು ಎಂದು ಅವರು ವಿವರಿಸಿದ್ದಾರೆ.
ಸುಹೇಲ್ ಬಗ್ಗೆ ಮಾತನಾಡಿದ ಮನೆ ಮಾಲೀಕರು, “ಆತ ಆಗಾಗ ನಮ್ಮ ಬೈಕ್ ಕೇಳುತ್ತಿದ್ದ. ಪ್ರತಿ ಶುಕ್ರವಾರ ನಮಾಜ್ಗೆ ತೆರಳುತ್ತಿದ್ದ. ಉಳಿದವರಿಗಿಂತ ಹೆಚ್ಚು ಚುರುಕಾಗಿ ಕಾಣಿಸುತ್ತಿದ್ದ. ಆದರೆ ಆತ ಇಂತಹ ಗಂಭೀರ ಚಟುವಟಿಕೆಗಳಲ್ಲಿ ತೊಡಗಿರಬಹುದು ಎಂದು ಎಂದಿಗೂ ಊಹಿಸಿರಲಿಲ್ಲ” ಎಂದು ಹೇಳಿದ್ದಾರೆ.
“ಅವನ ಹಾಗೂ ಆತನ ಸಹಚರರ ನಿಜವಾದ ಹಿನ್ನೆಲೆ ಮೊದಲೇ ಗೊತ್ತಿದ್ದರೆ ಯಾವುದೇ ಕಾರಣಕ್ಕೂ ಮನೆ ಬಾಡಿಗೆಗೆ ನೀಡುತ್ತಿರಲಿಲ್ಲ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ, ಸುಹೇಲ್ನ ವಿಚಾರಣೆ ಮುಂದುವರಿದಿದ್ದು, ಆತನ ಸಂಪರ್ಕ ಜಾಲ, ಚಟುವಟಿಕೆಗಳು ಹಾಗೂ ಆರೋಪಿತ ಸಂಚುಗಳ ಕುರಿತು ತನಿಖಾ ಸಂಸ್ಥೆಗಳು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿವೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…