ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಅತೀವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಯುವತಿಯೊಬ್ಬಳ ಮೇಲೆ ಗಂಡ ದೌರ್ಜನ್ಯ ಎಸಗುತ್ತಿದ್ದಾಗ, ಪತ್ನಿಯೇ ಹೊರಗೆ ಕಾವಲು ಕಾಯುತ್ತಿದ್ದರೆಂಬ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಮಹಿಳೆ, ಆಕೆಯ ಪತಿ ಹಾಗೂ ಮೈದುನನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ವರದಿ ಪ್ರಕಾರ, ಗುಲಾಬಗಂಜ್ ನಿವಾಸಿಯಾದ ಯಾಸ್ಮೀನ್ ಖಾನ್ ಬ್ಯೂಟಿ ಪಾರ್ಲರ್ ತರಬೇತಿ ನೀಡುತ್ತಿದ್ದಳು. ಈ ವೇಳೆ ಆಕೆಯ ಪತಿ ಶರೀಫ್ ಖಾನ್ ಕೂಡ ಅಲ್ಲೇ ಇರುತ್ತಿದ್ದನು. ಸುಮಾರು ನಾಲ್ಕು ತಿಂಗಳ ಹಿಂದೆ ಸಂತ್ರಸ್ತೆಯನ್ನು ತನ್ನ ಮನೆಗೆ ಬರಲು ಯಾಸ್ಮೀನ್ ಹೇಳಿದ್ದಳು. ಆದರೆ ಯುವತಿ ಮನೆಗೆ ಹೋದಾಗ ಯಾಸ್ಮೀನ್ ಬದಲಾಗಿ ಶರೀಫ್ ಇದ್ದನು.
ಯಾಸ್ಮೀನ್ ಬರುವುದಕ್ಕಾಗಿ ಕಾಯುತ್ತಿದ್ದ ವೇಳೆ, ಶರೀಫ್ ಯುವತಿಯ ಮೇಲೆ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ನಂತರ ಈ ವಿಷಯವನ್ನು ಹೊರಗೆ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರಿಂದ, ಸಂತ್ರಸ್ತೆ ಭಯದಿಂದ ಈ ವಿಚಾರವನ್ನು ಯಾರಿಗೂ ಹೇಳಿರಲಿಲ್ಲ.
ಆದರೆ ನಂತರ ಯಾಸ್ಮೀನ್ ಬಳಿ ಈ ವಿಚಾರ ತಿಳಿಸಿದರೂ, ಆಕೆ ಗಂಭೀರವಾಗಿ ಪರಿಗಣಿಸದೇ, ಬದಲಿಗೆ ಯುವತಿಯನ್ನು ಮತ್ತೆ ಮತ್ತೆ ಮನೆಗೆ ಕರೆಸಿ ಗಂಡನೊಂದಿಗೆ ಇರಲು ಒತ್ತಾಯಿಸುತ್ತಿದ್ದಳು ಎನ್ನಲಾಗಿದೆ. ಶರೀಫ್ ಒಳಗೆ ದೌರ್ಜನ್ಯ ನಡೆಸುತ್ತಿದ್ದಾಗ, ಯಾಸ್ಮೀನ್ ಹೊರಗೆ ಕಾವಲು ಕಾಯುತ್ತಿದ್ದಳು ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಇತ್ತೀಚೆಗೆ ಮತ್ತೆ ಮನೆಗೆ ಬರಲು ಒತ್ತಾಯಿಸಿ, ಬಾರದಿದ್ದರೆ ಘಟನೆ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಲಾಗಿದೆ. ಯುವತಿ ಮನೆಗೆ ಹೋದಾಗ, ಯಾಸ್ಮೀನ್, ಶರೀಫ್ ಮತ್ತು ಆಕೆಯ ಮೈದುನ ಮುವೀನ್ ಖಾನ್ ಇದ್ದರು. ಈ ವೇಳೆ ಯುವತಿಯನ್ನು ಕೋಣೆಗೆ ಎಳೆದೊಯ್ದು ಮತ್ತೆ ದೌರ್ಜನ್ಯ ಮಾಡಲು ಯತ್ನಿಸಿದಾಗ, ಆಕೆ ವಿರೋಧ ವ್ಯಕ್ತಪಡಿಸಿದ್ದಾಳೆ. ಈ ವೇಳೆ ಜಗಳ ಉಂಟಾಗಿ, ಶರೀಫ್ ಗಾಯಗೊಂಡಿದ್ದಾನೆ.
ಆತಂಕಗೊಂಡ ಯುವತಿ ತಕ್ಷಣ ಕುಟುಂಬಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಕುಟುಂಬಸ್ಥರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…