Categories: CrimeLatest

ಗಂಡ ರೇಪ್ ಮಾಡುತ್ತಿದ್ದರೆ ಪತ್ನಿಯೇ ಕಾವಲು: ಮಧ್ಯಪ್ರದೇಶದಲ್ಲಿ ಬೆಚ್ಚಿಬೀಳಿಸುವ ಪ್ರಕರಣ

ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಅತೀವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಯುವತಿಯೊಬ್ಬಳ ಮೇಲೆ ಗಂಡ ದೌರ್ಜನ್ಯ ಎಸಗುತ್ತಿದ್ದಾಗ, ಪತ್ನಿಯೇ ಹೊರಗೆ ಕಾವಲು ಕಾಯುತ್ತಿದ್ದರೆಂಬ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಮಹಿಳೆ, ಆಕೆಯ ಪತಿ ಹಾಗೂ ಮೈದುನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ವರದಿ ಪ್ರಕಾರ, ಗುಲಾಬಗಂಜ್ ನಿವಾಸಿಯಾದ ಯಾಸ್ಮೀನ್ ಖಾನ್ ಬ್ಯೂಟಿ ಪಾರ್ಲರ್ ತರಬೇತಿ ನೀಡುತ್ತಿದ್ದಳು. ಈ ವೇಳೆ ಆಕೆಯ ಪತಿ ಶರೀಫ್ ಖಾನ್ ಕೂಡ ಅಲ್ಲೇ ಇರುತ್ತಿದ್ದನು. ಸುಮಾರು ನಾಲ್ಕು ತಿಂಗಳ ಹಿಂದೆ ಸಂತ್ರಸ್ತೆಯನ್ನು ತನ್ನ ಮನೆಗೆ ಬರಲು ಯಾಸ್ಮೀನ್ ಹೇಳಿದ್ದಳು. ಆದರೆ ಯುವತಿ ಮನೆಗೆ ಹೋದಾಗ ಯಾಸ್ಮೀನ್ ಬದಲಾಗಿ ಶರೀಫ್ ಇದ್ದನು.

ಯಾಸ್ಮೀನ್ ಬರುವುದಕ್ಕಾಗಿ ಕಾಯುತ್ತಿದ್ದ ವೇಳೆ, ಶರೀಫ್ ಯುವತಿಯ ಮೇಲೆ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ನಂತರ ಈ ವಿಷಯವನ್ನು ಹೊರಗೆ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರಿಂದ, ಸಂತ್ರಸ್ತೆ ಭಯದಿಂದ ಈ ವಿಚಾರವನ್ನು ಯಾರಿಗೂ ಹೇಳಿರಲಿಲ್ಲ.

ಆದರೆ ನಂತರ ಯಾಸ್ಮೀನ್ ಬಳಿ ಈ ವಿಚಾರ ತಿಳಿಸಿದರೂ, ಆಕೆ ಗಂಭೀರವಾಗಿ ಪರಿಗಣಿಸದೇ, ಬದಲಿಗೆ ಯುವತಿಯನ್ನು ಮತ್ತೆ ಮತ್ತೆ ಮನೆಗೆ ಕರೆಸಿ ಗಂಡನೊಂದಿಗೆ ಇರಲು ಒತ್ತಾಯಿಸುತ್ತಿದ್ದಳು ಎನ್ನಲಾಗಿದೆ. ಶರೀಫ್ ಒಳಗೆ ದೌರ್ಜನ್ಯ ನಡೆಸುತ್ತಿದ್ದಾಗ, ಯಾಸ್ಮೀನ್ ಹೊರಗೆ ಕಾವಲು ಕಾಯುತ್ತಿದ್ದಳು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಇತ್ತೀಚೆಗೆ ಮತ್ತೆ ಮನೆಗೆ ಬರಲು ಒತ್ತಾಯಿಸಿ, ಬಾರದಿದ್ದರೆ ಘಟನೆ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಲಾಗಿದೆ. ಯುವತಿ ಮನೆಗೆ ಹೋದಾಗ, ಯಾಸ್ಮೀನ್, ಶರೀಫ್ ಮತ್ತು ಆಕೆಯ ಮೈದುನ ಮುವೀನ್ ಖಾನ್ ಇದ್ದರು. ಈ ವೇಳೆ ಯುವತಿಯನ್ನು ಕೋಣೆಗೆ ಎಳೆದೊಯ್ದು ಮತ್ತೆ ದೌರ್ಜನ್ಯ ಮಾಡಲು ಯತ್ನಿಸಿದಾಗ, ಆಕೆ ವಿರೋಧ ವ್ಯಕ್ತಪಡಿಸಿದ್ದಾಳೆ. ಈ ವೇಳೆ ಜಗಳ ಉಂಟಾಗಿ, ಶರೀಫ್ ಗಾಯಗೊಂಡಿದ್ದಾನೆ.

ಆತಂಕಗೊಂಡ ಯುವತಿ ತಕ್ಷಣ ಕುಟುಂಬಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಕುಟುಂಬಸ್ಥರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಕ್ರಿಕೆಟ್‌ನ ಕರಾಳ ಮುಖ ಬಯಲು? ಆಯ್ಕೆಗೆ ಲೈಂಗಿಕ ಆಮಿಷ, ದುಬಾರಿ ಗಿಫ್ಟ್ ಆರೋಪ!

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಒಂದು ಪಾಡ್‌ಕಾಸ್ಟ್ ವಿಡಿಯೋ ಇದೀಗ ಭಾರತೀಯ ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮಾಜಿ…

4 hours ago

ಸುಜಾತ ಭೂಮಿ ವಿವಾದಕ್ಕೆ ಹೊಸ ತಿರುವು: ರೈತರ ಪರ ನಿಂತ ಹರತಾಳು ಹಾಲಪ್ಪ, ಡಿಎಫ್‌ಒಗೆ ಮನವಿ

ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ರೈತ ಮಹಿಳೆ ಸುಜಾತ ಅವರ ಭೂಮಿ ವಿವಾದ ಇದೀಗ ಹೊಸ ಹಂತ ತಲುಪಿದ್ದು, ಮಾಜಿ…

1 day ago

ಕಚೇರಿಯನ್ನೇ ಮದ್ಯಪಾನದ ಅಡ್ಡೆಯನ್ನಾಗಿಸಿದ ಅಧಿಕಾರಿಗಳು; ಎಇಇ ಸೇರಿ ಮೂವರು ಸಸ್ಪೆಂಡ್

ರಾಯಚೂರಿನಲ್ಲಿ ಸರ್ಕಾರಿ ಕಚೇರಿಯಲ್ಲೇ ಗುಂಡು-ತುಂಡಿನ ಪಾರ್ಟಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಮೂವರು ಸಿಬ್ಬಂದಿಯನ್ನು…

1 day ago

ಕಳ್ಳತನ ನಡೆದ 8 ಗಂಟೆಯೊಳಗೆ ಇಬ್ಬರು ಆರೋಪಿಗಳ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನ-ನಗದು ವಶ

ಭಟ್ಕಳ: ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ನಗದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಕೇವಲ…

2 days ago

ಕಾರವಾರದಲ್ಲಿ 100 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಂಪುಟ ಅಸ್ತು!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುದಿನಗಳ ಕನಸಿಗೆ ಕೊನೆಗೂ ಜಯ ಸಿಕ್ಕಿದೆ. ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ…

2 days ago

3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಅರೆಸ್ಟ್!

ಹಳಿಯಾಳ: ಸುಲಿಗೆ ಹಾಗೂ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಕಳೆದ ಮೂರು ವರ್ಷಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್‌ನ್ನು…

2 days ago