Latest

ನಿಮ್ಮ ಜೇಬಿನಲ್ಲಿ ರೂ.20 ನೋಟು ಇದ್ರೆ, ಈ ಸುದ್ದಿಯನ್ನು ತಪ್ಪದೇ ಓದಿ!

ಹೊಸ ರೂಪದಲ್ಲಿ ಶೀಘ್ರದಲ್ಲೇ ರೂ.20 ನೋಟು ಮಾರುಕಟ್ಟೆಗೆ ಬರುತ್ತಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಸತತವಾಗಿ ನೋಟುಗಳಲ್ಲಿ ಸುಧಾರಣೆಗಳನ್ನು ಮಾಡುತ್ತಾ ಬರುತ್ತಿದ್ದು, ಇದೀಗ ಹೊಸ ರೂ.20 ನೋಟು ಬಿಡುಗಡೆಗೆ ಘೋಷಣೆ ನೀಡಿದೆ. ಈ ನೋಟಿನಲ್ಲಿ ಪ್ರಸ್ತುತ ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ಸಹಿ ಇರುವುದು ಪ್ರಮುಖ ವೈಶಿಷ್ಟ್ಯವಾಗಿದೆ.

RBI ತಿಳಿಸಿದಂತೆ, ಈ ನೋಟು ಹೊಸ ಶ್ರೇಣಿಯ ಭಾಗವಾಗಿದ್ದು, ಹಳೆಯ ವಿನ್ಯಾಸವನ್ನು ಉಳಿಸಿಕೊಂಡಿದ್ದರೂ ಕೆಲವು ನವೀನ ವೈಶಿಷ್ಟ್ಯಗಳೊಂದಿಗೆ ಬರಲಿದೆ. ಜನಸಾಮಾನ್ಯರ ಚಲಾವಣೆಗೆ ಅನುಕೂಲವಾಗುವಂತೆ ಭದ್ರತಾ ಅಂಶಗಳಲ್ಲಿ ಸುಧಾರಣೆ ಮಾಡಲಾಗಿದೆ.

ಹೊಸ ರೂ.20 ನೋಟಿನ ಪ್ರಮುಖ ವೈಶಿಷ್ಟ್ಯಗಳು:

ಬಣ್ಣ: ಹಸಿರು-ಹಳದಿ ಮಿಶ್ರ ಛಾಯೆ

ಗಾತ್ರ: 63 ಮಿ.ಮೀ. x 129 ಮಿ.ಮೀ.

ಹಿಂಬದಿ ಚಿತ್ರ: ಮಹಾರಾಷ್ಟ್ರದ ಪ್ರಸಿದ್ಧ ಎಲ್ಲೋರಾ ಗುಹೆಗಳ ಚಿತ್ರಣ

ಸಂಖ್ಯೆ ಮುದ್ರಣ: “20” ಸಂಖ್ಯೆಯನ್ನು ಹೂವಿನ ವಿನ್ಯಾಸದಲ್ಲಿ ಮುಂಭಾಗ ಮತ್ತು ಹಿಂಭಾಗದಲ್ಲಿಯೂ ಮುದ್ರಿಸಲಾಗಿದೆ

ಲಿಪಿ: “20” ಸಂಖ್ಯೆಯನ್ನು ದೇವನಾಗರಿಯಲ್ಲಿ ಮುದ್ರಿಸಲಾಗಿದೆ

ಸೂಕ್ಷ್ಮ ಲೆಖನಗಳು: RBI, ಭಾರತ, India ಮತ್ತು “20” ಎಂಬ ಬರಹ ಸೂಕ್ಷ್ಮಾಕ್ಷರಗಳಲ್ಲಿ ಅಳವಡಿಸಲಾಗಿದೆ

ಇತರೆ ಅಂಶಗಳು:

ಮಹಾತ್ಮ ಗಾಂಧೀಜಿ ಭಾವಚಿತ್ರ

ಅಶೋಕ ಸ್ತಂಭ ಚಿಹ್ನೆ

ಸ್ವಚ್ಛ ಭಾರತ ಅಭಿಯಾನದ ಲೋಗೋ

ಭಾಷಾ ಫಲಕ

ಭದ್ರತೆಗಾಗಿ ಗವರ್ನರ್ ಸಹಿ, ಗ್ಯಾರಂಟಿ ಘೋಷಣೆ, RBI ಚಿಹ್ನೆ ಮುಂತಾದವು

ಹಳೆಯ ನೋಟುಗಳು ಎಂತು?

ಜನರಲ್ಲಿ ಆತಂಕ ಮೂಡದಂತೆ RBI ಸ್ಪಷ್ಟನೆ ನೀಡಿದ್ದು, ಈಗ ಚಲಾವಣೆಯಲ್ಲಿರುವ ಹಳೆಯ ರೂ.20 ನೋಟುಗಳು ಪೂರ್ಣ ಪ್ರಮಾಣದಲ್ಲಿ ಮಾನ್ಯವಾಗಿರುವುದೇ ಸತ್ಯ. ಹೊಸ ನೋಟು ಪರಿಚಯಿಸುವುದರಿಂದ ಹಳೆಯ ನೋಟು ಅಮಾನ್ಯವಾಗಲ್ಲ. ಎಲ್ಲ ನೋಟುಗಳೂ ಸಹಪ್ರಯೋಗಕ್ಕೆ ಲಭ್ಯವಿರುತ್ತವೆ.

RBIಯ ಉದ್ದೇಶ ಸ್ಪಷ್ಟ – ಜನರಿಗೆ ಗುಣಮಟ್ಟದ, ನಕಲಿ ನೋಟುಗಳಿಂದ ಸುರಕ್ಷಿತ ಹಾಗೂ ಸಾಂಸ್ಕೃತಿಕ ಪಾರದರ್ಶಕತೆ ಹೊಂದಿರುವ ನೋಟುಗಳನ್ನು ಒದಗಿಸುವುದು. ಈ ಹೊಸ ನೋಟು ಆರ್ಥಿಕ ಲೆನದೆನಗಳಲ್ಲಿ ಹೆಚ್ಚಿನ ನಂಬಿಕೆ ಹಾಗೂ ಭದ್ರತೆಯನ್ನು ನೀಡಲಿದ್ದು, ಭಾರತದ ಪರಂಪರೆಯ ವೈಭವವನ್ನೂ ಪ್ರತಿಬಿಂಬಿಸುತ್ತದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago