Latest

ಬೆಂಗಳೂರಿನಲ್ಲಿ ಬದುಕಬೇಕಾದರೆ ಹಿಂದಿ ಕಲಿಯಬೇಕು.!: ಆಟೋ ಚಾಲಕನಿಗೆ ಬೆದರಿಕೆ ಹಾಕಿದ ಹಿಂದಿ ಯುವಕ.

ಬೆಂಗಳೂರು: ನಗರದ ಎಸ್‌ಎಂಎಸ್ ಆರ್ಕೇಡ್ ರಸ್ತೆಯಲ್ಲಿ ಮತ್ತೊಂದು ಭಾಷಾ ವಿವಾದವೇ ಉಲ್ಕಿಯಂತೆ ಸಿಡಿದಿದೆ. ಆಟೋ ಚಾಲಕನೊಬ್ಬ ಹಾಗೂ ಹಿಂದಿ ಮಾತನಾಡುವ ವ್ಯಕ್ತಿಯ ನಡುವೆ ನಡೆದ ಮಾತಿನ ಗಲಾಟೆಯ ದೃಶ್ಯಗಳು ಆಗಿದ್ದು, ಕನ್ನಡಿಗರ ಮನಸಿನಲ್ಲಿ ಆಕ್ರೋಶ ಎಬ್ಬಿಸಿದೆ.

ವೈರಲ್ ವಿಡಿಯೋದಲ್ಲಿ, ಆಟೋ ಚಾಲಕನು “ಇಲ್ಲಿ ಕನ್ನಡ ಮಾತನಾಡಬೇಕು” ಎಂಬ ಧಿಟ್ಟಾದ ಮಾತು ಆಡುತ್ತಾನೆ. ಪ್ರತಿಸ್ಪಂದಿಸಿದ ಹಿಂದಿ ಭಾಷಿಕ ಯುವಕನು, “ಇಲ್ಲಿ ಬದುಕಬೇಕಾದರೆ ಹಿಂದಿ ಕಲಿಯಬೇಕು” ಎಂಬ ಧಮ್ಮಿಗೆ ಇಳಿಯುತ್ತಾನೆ. ಇಬ್ಬರ ನಡುವೆ ಮಾತಿನ ಪಟ್ಟು ತೀವ್ರಗೊಂಡಿದ್ದು, ಸ್ಥಳದಲ್ಲಿದ್ದ ಯುವತಿಯೊಬ್ಬಳು ಹಿಂದಿ ಭಾಷಿಕನನ್ನು ಹಿಡಿದು ಎಳೆದೊಯ್ಯುತ್ತಿರುವ ದೃಶ್ಯವೂ ದಾಖಲಾಗಿದೆ.

ಈ ಘಟನೆ ರಾಜ್ಯಾದ್ಯಂತ ಭಾರೀ ಪ್ರತಿಕ್ರಿಯೆ ಹುಟ್ಟುಹಾಕಿದ್ದು, “ಬೆಂಗಳೂರು ಕನ್ನಡಿಗರ ನಗರ, ಇಲ್ಲಿ ಸ್ಥಳೀಯ ಭಾಷೆಗೆ ಗೌರವವಿರಬೇಕು” ಎಂಬ ಒತ್ತಾಯಗಳು ಕೇಳಿಬರುತ್ತಿವೆ. ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಅಂತಹೆಡೆ, ಕನ್ನಡ ಮಾತಾಡಿದ ಆಟೋ ಚಾಲಕನ ಧೈರ್ಯಕ್ಕೆ ಬಹುತೆಕ ಜನರು ಬೆನ್ನೆಲುಬು ಕೊಟ್ಟಿದ್ದಾರೆ. ಈ ಘಟನೆಯು ನಗರದಲ್ಲಿ ಭಾಷಾ ಸಂವೇದನೆ ಮತ್ತು ಸ್ಥಳೀಯ ಅಸ್ಮಿತೆಯ ಬಗ್ಗೆ ಮತ್ತೆ ಚರ್ಚೆಗೆ ಕಾರಣವಾಗುತ್ತಿದೆ.

nazeer ahamad

Recent Posts

ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳ್ಳತನ

ತುಮಕೂರು ಜಿಲ್ಲೆ, ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ವಡ್ಡಗೆರೆ ವೀರನಾಗಮ್ಮ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ…

5 hours ago

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

6 days ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

3 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

4 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

1 month ago