Latest

ಬೆಂಗಳೂರಿನಲ್ಲಿ ಬದುಕಬೇಕಾದರೆ ಹಿಂದಿ ಕಲಿಯಬೇಕು.!: ಆಟೋ ಚಾಲಕನಿಗೆ ಬೆದರಿಕೆ ಹಾಕಿದ ಹಿಂದಿ ಯುವಕ.

ಬೆಂಗಳೂರು: ನಗರದ ಎಸ್‌ಎಂಎಸ್ ಆರ್ಕೇಡ್ ರಸ್ತೆಯಲ್ಲಿ ಮತ್ತೊಂದು ಭಾಷಾ ವಿವಾದವೇ ಉಲ್ಕಿಯಂತೆ ಸಿಡಿದಿದೆ. ಆಟೋ ಚಾಲಕನೊಬ್ಬ ಹಾಗೂ ಹಿಂದಿ ಮಾತನಾಡುವ ವ್ಯಕ್ತಿಯ ನಡುವೆ ನಡೆದ ಮಾತಿನ ಗಲಾಟೆಯ ದೃಶ್ಯಗಳು ಆಗಿದ್ದು, ಕನ್ನಡಿಗರ ಮನಸಿನಲ್ಲಿ ಆಕ್ರೋಶ ಎಬ್ಬಿಸಿದೆ.

ವೈರಲ್ ವಿಡಿಯೋದಲ್ಲಿ, ಆಟೋ ಚಾಲಕನು “ಇಲ್ಲಿ ಕನ್ನಡ ಮಾತನಾಡಬೇಕು” ಎಂಬ ಧಿಟ್ಟಾದ ಮಾತು ಆಡುತ್ತಾನೆ. ಪ್ರತಿಸ್ಪಂದಿಸಿದ ಹಿಂದಿ ಭಾಷಿಕ ಯುವಕನು, “ಇಲ್ಲಿ ಬದುಕಬೇಕಾದರೆ ಹಿಂದಿ ಕಲಿಯಬೇಕು” ಎಂಬ ಧಮ್ಮಿಗೆ ಇಳಿಯುತ್ತಾನೆ. ಇಬ್ಬರ ನಡುವೆ ಮಾತಿನ ಪಟ್ಟು ತೀವ್ರಗೊಂಡಿದ್ದು, ಸ್ಥಳದಲ್ಲಿದ್ದ ಯುವತಿಯೊಬ್ಬಳು ಹಿಂದಿ ಭಾಷಿಕನನ್ನು ಹಿಡಿದು ಎಳೆದೊಯ್ಯುತ್ತಿರುವ ದೃಶ್ಯವೂ ದಾಖಲಾಗಿದೆ.

ಈ ಘಟನೆ ರಾಜ್ಯಾದ್ಯಂತ ಭಾರೀ ಪ್ರತಿಕ್ರಿಯೆ ಹುಟ್ಟುಹಾಕಿದ್ದು, “ಬೆಂಗಳೂರು ಕನ್ನಡಿಗರ ನಗರ, ಇಲ್ಲಿ ಸ್ಥಳೀಯ ಭಾಷೆಗೆ ಗೌರವವಿರಬೇಕು” ಎಂಬ ಒತ್ತಾಯಗಳು ಕೇಳಿಬರುತ್ತಿವೆ. ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಅಂತಹೆಡೆ, ಕನ್ನಡ ಮಾತಾಡಿದ ಆಟೋ ಚಾಲಕನ ಧೈರ್ಯಕ್ಕೆ ಬಹುತೆಕ ಜನರು ಬೆನ್ನೆಲುಬು ಕೊಟ್ಟಿದ್ದಾರೆ. ಈ ಘಟನೆಯು ನಗರದಲ್ಲಿ ಭಾಷಾ ಸಂವೇದನೆ ಮತ್ತು ಸ್ಥಳೀಯ ಅಸ್ಮಿತೆಯ ಬಗ್ಗೆ ಮತ್ತೆ ಚರ್ಚೆಗೆ ಕಾರಣವಾಗುತ್ತಿದೆ.

nazeer ahamad

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

30 minutes ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

34 minutes ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

37 minutes ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

52 minutes ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

54 minutes ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

6 hours ago