Latest

ಇಳಕಲ್: ಸಹೋದ್ಯೋಗಿಗೆ ಚಪ್ಪಲಿಯಿಂದ ಹೊಡೆದ ಶಿಕ್ಷಕಿ ಅಮಾನತು

ಬಾಗಲಕೋಟೆ ಜಿಲ್ಲೆ ಇಳಕಲ್ ಪಟ್ಟಣದ ಅಲಂಪೂರಪೇಟೆಯ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕಿ ಅಮೀನಾ ಕೊಳೂರ ಅವರನ್ನು ಕರ್ತವ್ಯ ಲೋಪ ಮತ್ತು ಅನಾದೃತ ವರ್ತನೆಯ ಆರೋಪಗಳ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಜಿ. ಮಿರ್ಜಿ ಅವರು ಅಮಾನತು ಮಾಡಿದ್ದಾರೆ.

ಈಚೆಗೆ ಶಾಲೆಯ ಶಿಕ್ಷಕ ಅಂದಾನಯ್ಯ ವಸ್ತ್ರದ ಅವರಿಗೆ ಚಪ್ಪಲಿಯಿಂದ ಹೊಡೆದು ಅವಮಾನಿಸಿದ್ದರೆಂಬ ಆರೋಪವನ್ನು ಎದುರಿಸುತ್ತಿದ್ದ ಅಮೀನಾ ಕೊಳೂರ ವಿರುದ್ಧ, ಜಂಗಮ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ಬಿಇಒ ಕಚೇರಿ ಮುಂದೆ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಅವರು ಶಿಕ್ಷಕಿಯನ್ನು ಅಮಾನತು ಮಾಡುವಂತೆ ಒತ್ತಾಯಿಸಿದ್ದರು.

ಪ್ರತಿಭಟನೆಯ ನಂತರ ಶಿಕ್ಷಣ ಸಂಯೋಜಕರ ಮೂಲಕ ವರದಿ ಸಂಗ್ರಹಿಸಿದ ಬಿಇಒ ಜಾಸ್ಮೀನ್ ಕಿಲ್ಲೇದಾರ ಅವರು, ಅಮೀನಾ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಡಿಡಿಪಿಐಗೆ ಶಿಫಾರಸು ಸಲ್ಲಿಸಿದ್ದರು.

ಅದಕ್ಕೂ ಮುನ್ನದಿಂದಲೂ ಅಮೀನಾ ಕೊಳೂರ ವಿರುದ್ಧ ಹಲವಾರು ಗಂಭೀರ ಆರೋಪಗಳು ಕೇಳಿಬಂದಿದ್ದವು. ಅವರು ಪ್ರಭಾರ ಮುಖ್ಯ ಶಿಕ್ಷಕಿಯಾಗಿದ್ದಾಗ ಅಕ್ಷರ ದಾಸೋಹ ಯೋಜನೆಯ ಅನುದಾನದ ವೆಚ್ಚಕ್ಕೆ ಸಂಬಂಧಿಸಿದ ರಸೀದಿಗಳನ್ನು ಸಂಗ್ರಹಿಸದೇ ಇರುವುದು, ಶಾಲೆಗೆ ಬಂದಿದ್ದ ಆಹಾರ ಧಾನ್ಯಗಳ ಮಾರಾಟ ಹಾಗೂ ದುರ್ಬಳಕೆ ಆರೋಪಗಳು, 8ನೇ ತರಗತಿಗೆ ದಾಖಲಾತಿ ತಡೆಯುವ ಮೂಲಕ ಶಾಲೆಯ ಅಭಿವೃದ್ಧಿಗೆ ಅಡ್ಡಿಯಾದ ಘಟನೆಗಳು, ಶಾಲಾ ದಾಖಲೆಗಳ ನಿರ್ವಹಣೆಯಲ್ಲಿ ಉಣಣಿ ಮತ್ತು ಇಲಾಖೆಯ ಅನುಮತಿ ಇಲ್ಲದೇ ಗಳಿಕೆ ರಜೆ ಬಳಸಿರುವ ಪ್ರಕರಣಗಳು ದಾಖಲಾಗಿವೆ.

ಇಲ್ಲದೆ, ಇತರ ಶಿಕ್ಷಕರ ಜೊತೆ ಪದೇಪದೆ ಜಗಳವಾಡುವ ಮೂಲಕ ಶಾಲೆಯ ಶೈಕ್ಷಣಿಕ ವಾತಾವರಣವನ್ನು ಹಾಳು ಮಾಡುವಂತ ಕಾರ್ಯಗಳಲ್ಲಿ ತೊಡಗಿದ್ದರೆಂಬ ಆರೋಪಗಳು ಕೂಡಾ ವರದಿಯಾಗಿವೆ. ಇವುಗಳನ್ನೆಲ್ಲಾ ಪರಿಗಣಿಸಿ ಅಮೀನಾ ಕೊಳೂರ ಅವರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ ಎಂದು ಉಪನಿರ್ದೇಶಕರ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

13 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

13 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

13 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

13 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago