Latest

ಇಳಕಲ್: ಸಹೋದ್ಯೋಗಿಗೆ ಚಪ್ಪಲಿಯಿಂದ ಹೊಡೆದ ಶಿಕ್ಷಕಿ ಅಮಾನತು

ಬಾಗಲಕೋಟೆ ಜಿಲ್ಲೆ ಇಳಕಲ್ ಪಟ್ಟಣದ ಅಲಂಪೂರಪೇಟೆಯ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕಿ ಅಮೀನಾ ಕೊಳೂರ ಅವರನ್ನು ಕರ್ತವ್ಯ ಲೋಪ ಮತ್ತು ಅನಾದೃತ ವರ್ತನೆಯ ಆರೋಪಗಳ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಜಿ. ಮಿರ್ಜಿ ಅವರು ಅಮಾನತು ಮಾಡಿದ್ದಾರೆ.

ಈಚೆಗೆ ಶಾಲೆಯ ಶಿಕ್ಷಕ ಅಂದಾನಯ್ಯ ವಸ್ತ್ರದ ಅವರಿಗೆ ಚಪ್ಪಲಿಯಿಂದ ಹೊಡೆದು ಅವಮಾನಿಸಿದ್ದರೆಂಬ ಆರೋಪವನ್ನು ಎದುರಿಸುತ್ತಿದ್ದ ಅಮೀನಾ ಕೊಳೂರ ವಿರುದ್ಧ, ಜಂಗಮ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ಬಿಇಒ ಕಚೇರಿ ಮುಂದೆ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಅವರು ಶಿಕ್ಷಕಿಯನ್ನು ಅಮಾನತು ಮಾಡುವಂತೆ ಒತ್ತಾಯಿಸಿದ್ದರು.

ಪ್ರತಿಭಟನೆಯ ನಂತರ ಶಿಕ್ಷಣ ಸಂಯೋಜಕರ ಮೂಲಕ ವರದಿ ಸಂಗ್ರಹಿಸಿದ ಬಿಇಒ ಜಾಸ್ಮೀನ್ ಕಿಲ್ಲೇದಾರ ಅವರು, ಅಮೀನಾ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಡಿಡಿಪಿಐಗೆ ಶಿಫಾರಸು ಸಲ್ಲಿಸಿದ್ದರು.

ಅದಕ್ಕೂ ಮುನ್ನದಿಂದಲೂ ಅಮೀನಾ ಕೊಳೂರ ವಿರುದ್ಧ ಹಲವಾರು ಗಂಭೀರ ಆರೋಪಗಳು ಕೇಳಿಬಂದಿದ್ದವು. ಅವರು ಪ್ರಭಾರ ಮುಖ್ಯ ಶಿಕ್ಷಕಿಯಾಗಿದ್ದಾಗ ಅಕ್ಷರ ದಾಸೋಹ ಯೋಜನೆಯ ಅನುದಾನದ ವೆಚ್ಚಕ್ಕೆ ಸಂಬಂಧಿಸಿದ ರಸೀದಿಗಳನ್ನು ಸಂಗ್ರಹಿಸದೇ ಇರುವುದು, ಶಾಲೆಗೆ ಬಂದಿದ್ದ ಆಹಾರ ಧಾನ್ಯಗಳ ಮಾರಾಟ ಹಾಗೂ ದುರ್ಬಳಕೆ ಆರೋಪಗಳು, 8ನೇ ತರಗತಿಗೆ ದಾಖಲಾತಿ ತಡೆಯುವ ಮೂಲಕ ಶಾಲೆಯ ಅಭಿವೃದ್ಧಿಗೆ ಅಡ್ಡಿಯಾದ ಘಟನೆಗಳು, ಶಾಲಾ ದಾಖಲೆಗಳ ನಿರ್ವಹಣೆಯಲ್ಲಿ ಉಣಣಿ ಮತ್ತು ಇಲಾಖೆಯ ಅನುಮತಿ ಇಲ್ಲದೇ ಗಳಿಕೆ ರಜೆ ಬಳಸಿರುವ ಪ್ರಕರಣಗಳು ದಾಖಲಾಗಿವೆ.

ಇಲ್ಲದೆ, ಇತರ ಶಿಕ್ಷಕರ ಜೊತೆ ಪದೇಪದೆ ಜಗಳವಾಡುವ ಮೂಲಕ ಶಾಲೆಯ ಶೈಕ್ಷಣಿಕ ವಾತಾವರಣವನ್ನು ಹಾಳು ಮಾಡುವಂತ ಕಾರ್ಯಗಳಲ್ಲಿ ತೊಡಗಿದ್ದರೆಂಬ ಆರೋಪಗಳು ಕೂಡಾ ವರದಿಯಾಗಿವೆ. ಇವುಗಳನ್ನೆಲ್ಲಾ ಪರಿಗಣಿಸಿ ಅಮೀನಾ ಕೊಳೂರ ಅವರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ ಎಂದು ಉಪನಿರ್ದೇಶಕರ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

nazeer ahamad

Recent Posts

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

5 minutes ago

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

10 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

10 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

13 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

15 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

15 hours ago