ಬಾಗಲಕೋಟೆ ಜಿಲ್ಲೆ ಇಳಕಲ್ ಪಟ್ಟಣದ ಅಲಂಪೂರಪೇಟೆಯ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕಿ ಅಮೀನಾ ಕೊಳೂರ ಅವರನ್ನು ಕರ್ತವ್ಯ ಲೋಪ ಮತ್ತು ಅನಾದೃತ ವರ್ತನೆಯ ಆರೋಪಗಳ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಜಿ. ಮಿರ್ಜಿ ಅವರು ಅಮಾನತು ಮಾಡಿದ್ದಾರೆ.
ಈಚೆಗೆ ಶಾಲೆಯ ಶಿಕ್ಷಕ ಅಂದಾನಯ್ಯ ವಸ್ತ್ರದ ಅವರಿಗೆ ಚಪ್ಪಲಿಯಿಂದ ಹೊಡೆದು ಅವಮಾನಿಸಿದ್ದರೆಂಬ ಆರೋಪವನ್ನು ಎದುರಿಸುತ್ತಿದ್ದ ಅಮೀನಾ ಕೊಳೂರ ವಿರುದ್ಧ, ಜಂಗಮ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ಬಿಇಒ ಕಚೇರಿ ಮುಂದೆ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಅವರು ಶಿಕ್ಷಕಿಯನ್ನು ಅಮಾನತು ಮಾಡುವಂತೆ ಒತ್ತಾಯಿಸಿದ್ದರು.
ಪ್ರತಿಭಟನೆಯ ನಂತರ ಶಿಕ್ಷಣ ಸಂಯೋಜಕರ ಮೂಲಕ ವರದಿ ಸಂಗ್ರಹಿಸಿದ ಬಿಇಒ ಜಾಸ್ಮೀನ್ ಕಿಲ್ಲೇದಾರ ಅವರು, ಅಮೀನಾ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಡಿಡಿಪಿಐಗೆ ಶಿಫಾರಸು ಸಲ್ಲಿಸಿದ್ದರು.
ಅದಕ್ಕೂ ಮುನ್ನದಿಂದಲೂ ಅಮೀನಾ ಕೊಳೂರ ವಿರುದ್ಧ ಹಲವಾರು ಗಂಭೀರ ಆರೋಪಗಳು ಕೇಳಿಬಂದಿದ್ದವು. ಅವರು ಪ್ರಭಾರ ಮುಖ್ಯ ಶಿಕ್ಷಕಿಯಾಗಿದ್ದಾಗ ಅಕ್ಷರ ದಾಸೋಹ ಯೋಜನೆಯ ಅನುದಾನದ ವೆಚ್ಚಕ್ಕೆ ಸಂಬಂಧಿಸಿದ ರಸೀದಿಗಳನ್ನು ಸಂಗ್ರಹಿಸದೇ ಇರುವುದು, ಶಾಲೆಗೆ ಬಂದಿದ್ದ ಆಹಾರ ಧಾನ್ಯಗಳ ಮಾರಾಟ ಹಾಗೂ ದುರ್ಬಳಕೆ ಆರೋಪಗಳು, 8ನೇ ತರಗತಿಗೆ ದಾಖಲಾತಿ ತಡೆಯುವ ಮೂಲಕ ಶಾಲೆಯ ಅಭಿವೃದ್ಧಿಗೆ ಅಡ್ಡಿಯಾದ ಘಟನೆಗಳು, ಶಾಲಾ ದಾಖಲೆಗಳ ನಿರ್ವಹಣೆಯಲ್ಲಿ ಉಣಣಿ ಮತ್ತು ಇಲಾಖೆಯ ಅನುಮತಿ ಇಲ್ಲದೇ ಗಳಿಕೆ ರಜೆ ಬಳಸಿರುವ ಪ್ರಕರಣಗಳು ದಾಖಲಾಗಿವೆ.
ಇಲ್ಲದೆ, ಇತರ ಶಿಕ್ಷಕರ ಜೊತೆ ಪದೇಪದೆ ಜಗಳವಾಡುವ ಮೂಲಕ ಶಾಲೆಯ ಶೈಕ್ಷಣಿಕ ವಾತಾವರಣವನ್ನು ಹಾಳು ಮಾಡುವಂತ ಕಾರ್ಯಗಳಲ್ಲಿ ತೊಡಗಿದ್ದರೆಂಬ ಆರೋಪಗಳು ಕೂಡಾ ವರದಿಯಾಗಿವೆ. ಇವುಗಳನ್ನೆಲ್ಲಾ ಪರಿಗಣಿಸಿ ಅಮೀನಾ ಕೊಳೂರ ಅವರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ ಎಂದು ಉಪನಿರ್ದೇಶಕರ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…