ಬಾಗಲಕೋಟೆ ಜಿಲ್ಲೆ ಇಳಕಲ್ ಪಟ್ಟಣದ ಅಲಂಪೂರಪೇಟೆಯ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕಿ ಅಮೀನಾ ಕೊಳೂರ ಅವರನ್ನು ಕರ್ತವ್ಯ ಲೋಪ ಮತ್ತು ಅನಾದೃತ ವರ್ತನೆಯ ಆರೋಪಗಳ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಜಿ. ಮಿರ್ಜಿ ಅವರು ಅಮಾನತು ಮಾಡಿದ್ದಾರೆ.
ಈಚೆಗೆ ಶಾಲೆಯ ಶಿಕ್ಷಕ ಅಂದಾನಯ್ಯ ವಸ್ತ್ರದ ಅವರಿಗೆ ಚಪ್ಪಲಿಯಿಂದ ಹೊಡೆದು ಅವಮಾನಿಸಿದ್ದರೆಂಬ ಆರೋಪವನ್ನು ಎದುರಿಸುತ್ತಿದ್ದ ಅಮೀನಾ ಕೊಳೂರ ವಿರುದ್ಧ, ಜಂಗಮ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ಬಿಇಒ ಕಚೇರಿ ಮುಂದೆ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಅವರು ಶಿಕ್ಷಕಿಯನ್ನು ಅಮಾನತು ಮಾಡುವಂತೆ ಒತ್ತಾಯಿಸಿದ್ದರು.
ಪ್ರತಿಭಟನೆಯ ನಂತರ ಶಿಕ್ಷಣ ಸಂಯೋಜಕರ ಮೂಲಕ ವರದಿ ಸಂಗ್ರಹಿಸಿದ ಬಿಇಒ ಜಾಸ್ಮೀನ್ ಕಿಲ್ಲೇದಾರ ಅವರು, ಅಮೀನಾ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಡಿಡಿಪಿಐಗೆ ಶಿಫಾರಸು ಸಲ್ಲಿಸಿದ್ದರು.
ಅದಕ್ಕೂ ಮುನ್ನದಿಂದಲೂ ಅಮೀನಾ ಕೊಳೂರ ವಿರುದ್ಧ ಹಲವಾರು ಗಂಭೀರ ಆರೋಪಗಳು ಕೇಳಿಬಂದಿದ್ದವು. ಅವರು ಪ್ರಭಾರ ಮುಖ್ಯ ಶಿಕ್ಷಕಿಯಾಗಿದ್ದಾಗ ಅಕ್ಷರ ದಾಸೋಹ ಯೋಜನೆಯ ಅನುದಾನದ ವೆಚ್ಚಕ್ಕೆ ಸಂಬಂಧಿಸಿದ ರಸೀದಿಗಳನ್ನು ಸಂಗ್ರಹಿಸದೇ ಇರುವುದು, ಶಾಲೆಗೆ ಬಂದಿದ್ದ ಆಹಾರ ಧಾನ್ಯಗಳ ಮಾರಾಟ ಹಾಗೂ ದುರ್ಬಳಕೆ ಆರೋಪಗಳು, 8ನೇ ತರಗತಿಗೆ ದಾಖಲಾತಿ ತಡೆಯುವ ಮೂಲಕ ಶಾಲೆಯ ಅಭಿವೃದ್ಧಿಗೆ ಅಡ್ಡಿಯಾದ ಘಟನೆಗಳು, ಶಾಲಾ ದಾಖಲೆಗಳ ನಿರ್ವಹಣೆಯಲ್ಲಿ ಉಣಣಿ ಮತ್ತು ಇಲಾಖೆಯ ಅನುಮತಿ ಇಲ್ಲದೇ ಗಳಿಕೆ ರಜೆ ಬಳಸಿರುವ ಪ್ರಕರಣಗಳು ದಾಖಲಾಗಿವೆ.
ಇಲ್ಲದೆ, ಇತರ ಶಿಕ್ಷಕರ ಜೊತೆ ಪದೇಪದೆ ಜಗಳವಾಡುವ ಮೂಲಕ ಶಾಲೆಯ ಶೈಕ್ಷಣಿಕ ವಾತಾವರಣವನ್ನು ಹಾಳು ಮಾಡುವಂತ ಕಾರ್ಯಗಳಲ್ಲಿ ತೊಡಗಿದ್ದರೆಂಬ ಆರೋಪಗಳು ಕೂಡಾ ವರದಿಯಾಗಿವೆ. ಇವುಗಳನ್ನೆಲ್ಲಾ ಪರಿಗಣಿಸಿ ಅಮೀನಾ ಕೊಳೂರ ಅವರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ ಎಂದು ಉಪನಿರ್ದೇಶಕರ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…