ಕಾರವಾರ, ಜುಲೈ 8: ಬೆಳಗಾವಿಯಿಂದ ಗೋವಾ ಕಡೆಗೆ ಅಕ್ರಮವಾಗಿ ದನದ ಮಾಂಸ ಸಾಗಿಸುತ್ತಿದ್ದ ಇಬ್ಬರನ್ನು ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ರಾಮನಗರ ಪೊಲೀಸರು ಬಂಧಿಸಿದ್ದು, ಲಕ್ಷಾಂತರ ಮೌಲ್ಯದ ಮಾಂಸ ಹಾಗೂ ವಾಹನ ವಶಪಡಿಸಿಕೊಳ್ಳಲಾಗಿದೆ.
ಬಂಧಿತರು ಸಿದ್ದಪ್ಪ ಬಾಳಪ್ಪ ಬೂದ್ನೂರು ಹಾಗೂ ರಾಜು ಬಾಳ ನಾಯ್ಕ ಎಂದು ಗುರುತಿಸಲಾಗಿದ್ದು, ಈ ಅಕ್ರಮ ಸಾಗಣೆಗಾಗಿ ಟಾಟಾ ಕಂಪನಿಯ ವಾಹನವನ್ನು ಬಳಸುತ್ತಿದ್ದರು. ಪೊಲೀಸರು ನಡೆಸಿದ ತಪಾಸಣೆಯಲ್ಲಿ, ವಾಹನದಿಂದ ಸುಮಾರು 1930 ಕೆ.ಜಿ. ದನದ ಮಾಂಸ ಮತ್ತು 8 ಲಕ್ಷ ರೂ. ಮೌಲ್ಯದ ವಾಹನ ವಶಕ್ಕೊಳ್ಳಲಾಗಿದೆ. ಮಾಂಸದ ಮೌಲ್ಯವನ್ನು ಪೊಲೀಸರು ಸುಮಾರು 6.75 ಲಕ್ಷ ರೂ. ಎಂದು ಅಂದಾಜಿಸಿದ್ದಾರೆ.
ಆರೋಪಿಗಳು ಬೆಳಗಾವಿಯ ಅಮೂಲ್ ಮೋಹನ್ದಾಸ್ ಎಂಬ ವ್ಯಕ್ತಿಯ ಸೂಚನೆಯಂತೆ ಮಾಂಸವನ್ನು ರಾಮನಗರದ ಮೂಲಕ ಗೋವಾಕ್ಕೆ ಕಳುಹಿಸುತ್ತಿದ್ದಂತೆ ತನಿಖೆಯಿಂದ ತಿಳಿದು ಬಂದಿದೆ. ಈ ಮಾರ್ಗವು ಮಾಂಸ ಸಾಗಣೆಗೆ ಅನುಮತಿ ಇಲ್ಲದ ಅನಧಿಕೃತ ದಾರಿ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರೆಸಿದ್ದು, ಅಕ್ರಮ ಮಾಂಸ ಸಾಗಣೆಯ ಹಿಂದಿರುವ ನಂಟುಗಳನ್ನು ಬಯಲು ಮಾಡುವ ಕಾರ್ಯ ನಡೆಯುತ್ತಿದೆ.
ಅಕ್ರಮ ಮಾಂಸ ಸಾಗಣೆ ವಿರುದ್ಧ ಕಠಿಣ ಕ್ರಮ
ಪಶು ಸಂರಕ್ಷಣಾ ಕಾನೂನು ಉಲ್ಲಂಘನೆಯಾಗಿ ಪರಿಗಣಿಸಿರುವ ಪೊಲೀಸರು, ಇಂತಹ ಅಕ್ರಮ ಕೃತ್ಯಗಳಿಗೆ ಶರಣು ನೀಡದ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಇಂತಹ ಅಕ್ರಮ ಚಟುವಟಿಕೆಗಳ ಬಗ್ಗೆ ಕಣ್ಣಿಟ್ಟಿರುವ ಪೊಲೀಸರು, ಇನ್ನಷ್ಟು ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆಯೆಂದು ಭಾವಿಸಲಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…