ಭಟ್ಕಳದಲ್ಲಿ ಅಕ್ರಮ ಜಾನುವಾರು ಸಾಗಾಟವನ್ನು ತಡೆದು, ಭಟ್ಕಳ ಪೊಲೀಸರು 17 ಕೋಣಗಳನ್ನು ರಕ್ಷಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಅರೆಸ್ಟ್ ಆಗಿದ ಇಬ್ಬರು ಆರೋಪಿಗಳು
ಅಕ್ರಮದಲ್ಲಿ ಭಾಗಿಯಾಗಿದ್ದ ಹಾವೇರಿ ಜಿಲ್ಲೆಯ ಅಕ್ಕಿಹಾಲೂರಿನ ಜೈನುಲ್ಲಾ ಚಮನ್ ಶಾಬ್ (28) ಮತ್ತು ಇಮಾಮ್ ಹುಸೇನ್ ಮೌಲಾಲಿ ಶಾಬ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಯಾವುದೇ ಪರವಾನಿಗೆ ಇಲ್ಲದೇ 17 ಕೋಣಗಳನ್ನು ಲಾರಿಯಲ್ಲಿ ಸಾಗಿಸುತ್ತಿದ್ದ ಇಬ್ಬರು, ಶಿರಾಲಿ ಬಳಿ ಅರೆಸ್ಟ್ ಆಗಿದ್ದಾರೆ.
ಕಾರ್ಯಾಚರಣೆಯ ವೇಳೆ ಎರಡು ಕೋಣಗಳ ದುರ್ಮರಣ
ಪೊಲೀಸರು 15 ಕೋಣಗಳನ್ನು ಸುರಕ್ಷಿತವಾಗಿ ರಕ್ಷಿಸಿದರೂ, ಅಕ್ರಮ ಸಾಗಣೆಯಲ್ಲಿ ಎರಡು ಕೋಣಗಳು ಉಸಿರುಗಟ್ಟಿ ಸಾವನ್ನಪ್ಪಿದವು. ಈ ದೃಶ್ಯ ಸ್ಥಳದಲ್ಲಿದ್ದವರನ್ನು ಕಳವಳಗೊಳಿಸಿತು. ಉಳಿದ ಜಾನುವಾರುಗಳಿಗೆ ಮೇವು ಮತ್ತು ನೀರು ನೀಡಿ, ಸೂಕ್ತ ಆರೈಕೆ ಮಾಡಲಾಗಿದೆ.
ಹಿಂದು ಜಾಗರಣ ವೇದಿಕೆಯ ಮಾಹಿತಿ
ಹಿಂದು ಜಾಗರಣ ವೇದಿಕೆ ಅಧ್ಯಕ್ಷರಿಗೆ ಈ ಕುರಿತು ಮಾಹಿತಿ ಬಂದಿತ್ತು. ಸಂಘಟನೆಯ ಸಂಚಾಲಕ, ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಸೇರಿ ವಾಹನ ತಡೆದು, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಗೆ ಒಪ್ಪಿಸಿದರು.
ಪೊಲೀಸರ ಕಾರ್ಯಾಚರಣೆ
ಈ ಕಾರ್ಯಾಚರಣೆಯಲ್ಲಿ ಪಿಎಸೈ ರನ್ನ ಗೌಡ ಪಾಟೀಲ ಮತ್ತು ಭರ್ಮಪ್ಪ ಬೆಳಗಲಿ ಪ್ರಮುಖ ಪಾತ್ರವಹಿಸಿದರು.
ಪೊಲೀಸ್ ಸಿಬ್ಬಂದಿ ವಿನೋದ ಕುಮಾರ ರೆಡ್ಡಿ, ಮಂಜು ಖಾರ್ವಿ, ವೀರಣ್ಣ ಬಳ್ಳಾರಿ, ಕಿರಣ ತಿಲಗಂಜಿ ಮತ್ತು ಚಾಲಕ ದೇವರಾಜ ಮೊಗೇರ ಸಹ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು.
ಈ ಪ್ರಕರಣದ ತನಿಖೆ ಮುಂದುವರಿದಿದ್ದು, ಅಕ್ರಮ ಜಾನುವಾರು ಸಾಗಾಟಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…