ಉಡುಪಿ: ಬ್ರಹ್ಮಾವರದ ಶಿರೂರು ಬಳಿದ ಮೂರುಕೈ-ನೀರ್ಜೆಡ್ಡು ಪ್ರದೇಶದಲ್ಲಿ ಮಾಂಸಕ್ಕಾಗಿ ದನವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಇನ್ನೊಬ್ಬ ಆರೋಪಿಯ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಬಂಧಿತರನ್ನು ಹೈಕಾಡಿಯ ಮುಜಾಫಿರ್ ಮತ್ತು ನೀರ್ಜೆಡ್ಡಿನ ಕೃಷ್ಣ ನಾಯ್ಕ ಎಂದು ಗುರುತಿಸಲಾಗಿದ್ದು, ಮಹಮ್ಮದ್ ಯಾಸಿನ್ ಎಂಬ ಆರೋಪಿ ಪರಾರಿಯಾಗಿದ್ದಾನೆ.
ಪ್ರಕರಣದ ವಿವರ ಈ ರೀತಿ: ಸಂಜೆಯ ವೇಳೆ ಮೂವರು ಆರೋಪಿಗಳು ಇಕೋ ಸ್ಪೋರ್ಟ್ಸ್ ಕಾರಿನಲ್ಲಿ ಬಂದು ರಸ್ತೆಯ ಬದಿಯಲ್ಲಿ ದನವೊಂದಕ್ಕೆ ಹಿಂಸೆ ನೀಡಿ ಹಗ್ಗದಿಂದ ಕಟ್ಟಿ ಕಾರಿಗೆ ತುರುವ ಕಾರ್ಯದಲ್ಲಿ ತೊಡಗಿದ್ದರು. ಆಗ ಅಚ್ಚಾನೈಕೆಗೂ ಬರುವಂತೆ ಬೈಕ್ನಲ್ಲಿ ಬಂದ ಸಾರ್ವಜನಿಕರೊಬ್ಬರು ಈ ದೃಶ್ಯವನ್ನು ನೋಡಿ ಆರೋಪಿಗಳನ್ನು ಪ್ರಶ್ನಿಸಲು ಮುಂದಾದಾಗ, ಮಹಮ್ಮದ್ ಯಾಸಿನ್ ಸ್ಥಳದಿಂದ ಪರಾರಿಯಾಗಿದ್ದಾನೆ. ಮುಜಾಫಿರ್ ಕಾರನ್ನು ಚಾಲನೆ ಮಾಡಿ ಗೋಳಿಯಂಗಡಿ ಕಡೆಗೆ ವೇಗವಾಗಿ ಹೊರಟಿದ್ದಾನೆ.
ವಾಹನದ ನಂಬರ್ ನೋಂದಿಸಿಕೊಂಡ ಸಾರ್ವಜನಿಕರು ಕೂಡಲೇ ಬ್ರಹ್ಮಾವರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಾರು ಮತ್ತು ಕದ್ದ ದನದ ಸಹಿತ ಮುಜಾಫಿರ್ ಹಾಗೂ ಕೃಷ್ಣ ನಾಯ್ಕರನ್ನು ಬಂಧಿಸಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯಿಂದ, ಈ ಆರೋಪಿಗಳು ದನಗಳನ್ನು ಕದಿದು ಮಾಂಸ ಮಾರಾಟಕ್ಕಾಗಿ ಸಾಗಿಸುತ್ತಿದ್ದರು ಎನ್ನುವುದು ಬಹಿರಂಗವಾಗಿದೆ. ಕೃಷ್ಣ ನಾಯ್ಕ ದನ ಖರೀದಿಗೆ ಮಧ್ಯವರ್ತಿ ಪಾತ್ರವಹಿಸಿದ್ದನೆಂದು ತಿಳಿದುಬಂದಿದೆ.
ಬಂಧಿತ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪರಾರಿಯಾಗಿರುವ ಮಹಮ್ಮದ್ ಯಾಸಿನ್ ಪತ್ತೆ ಹಚ್ಚಲು ಬ್ರಹ್ಮಾವರ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…