ಬೆಳಗಾವಿ, ಜುಲೈ 1: ಅಕ್ರಮ ಗೋ ಸಾಗಣೆ ಪ್ರಕರಣದಲ್ಲಿ ಸಂಬಂಧಪಟ್ಟವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಕಾರಣಕ್ಕೆ ಹುಕ್ಕೇರಿ ಪೊಲೀಸ್ ಠಾಣೆಯ ಉಪನಿರೀಕ್ಷಕ (ಪಿಎಸ್ಐ) ನಿಖಿಲ್ ಕಾಂಬ್ಳೆ ಅವರನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಜಿಲ್ಲಾ ಪೊಲೀಸ್ ಅಧೀಕ್ಷಕ ಭೀಮಾಶಂಕರ ಗುಳೇದ್ ಆದೇಶ ಹೊರಡಿಸಿದ್ದಾರೆ.
ಜೂನ್ 26ರಂದು ಶ್ರೀರಾಮ ಸೇನೆಯ ಕಾರ್ಯಕರ್ತರು ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವೊಂದನ್ನು ತಡೆದು ಹುಕ್ಕೇರಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಆದರೆ, ಈ ಕುರಿತು ಪಿಎಸ್ಐ ನಿಖಿಲ್ ಕಾಂಬ್ಳೆ ಯಾವುದೇ ಎಫ್ಐಆರ್ ದಾಖಲಿಸದೇ, ಆರೋಪಿಗಳನ್ನು ಬಿಟ್ಟುಕೊಟ್ಟಿದ್ದರು. ಇದಲ್ಲದೆ, ಘಟನೆಯ ಕುರಿತು ತನ್ನ ಮೇಲಧಿಕಾರಿಗಳಿಗೆ ಮಾಹಿತಿಯನ್ನೂ ನೀಡಿದ್ದಿಲ್ಲ.
ಪೊಲೀಸ್ ಠಾಣೆಗೆ ಆಗಮಿಸಿದ್ದವರಲ್ಲಿ ಗಡಿಪಾರ ಆದೇಶ ಪಡೆದಿರುವ ರೌಡಿಶೀಟರ್ ಮಹಾವೀರ ಸೊಲ್ಲಾಪುರೆ ಕೂಡ ಇದ್ದಂತೆ ತಿಳಿದುಬಂದಿದೆ. ಈ ಎಲ್ಲ ಅಂಶಗಳನ್ನು ಆಧರಿಸಿ ಎಸ್ಪಿ ಗುಳೇದ್ ತೀವ್ರ ನಡವಳಿಕೆ ಕೈಗೊಂಡು ಪಿಎಸ್ಐ ನಿಖಿಲ್ ಕಾಂಬ್ಳೆ ಅಮಾನತು ಆದೇಶ ಹೊರಡಿಸಿದ್ದಾರೆ.
ಇದರೊಂದಿಗೆ ಪೊಲೀಸ್ ಇಲಾಖೆಯಲ್ಲಿ ಜವಾಬ್ದಾರಿ ನಿರ್ವಹಣೆಯ ಕುರಿತು ಮತ್ತೊಮ್ಮೆ ಚರ್ಚೆ ಹುಟ್ಟಿದ್ದು, ಉನ್ನತ ಅಧಿಕಾರಿಗಳ ಗಮನ ಸೆಳೆದಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…