Categories: CrimeLatest

ನಂದಿಕಟ್ಟದಲ್ಲಿ ಅಕ್ರಮ ಜಿಂಕೆ ಮಾಂಸ ವಶ: ಓರ್ವ ಬಂಧನ, ಪರಾರಿಯಾದ ಮತ್ತೋರ್ವ ಆರೋಪಿಗಾಗಿ ಶೋಧ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ನಂದಿಕಟ್ಟ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜಿಂಕೆ ಮಾಂಸವನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಓರ್ವ ಆರೋಪಿಯನ್ನು ಬಂಧಿಸಿ, ಮತ್ತೋರ್ವ ಆರೋಪಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಮುಂಡಗೋಡ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಈರೇಶ್ ಕಬ್ಬಿನ ಹಾಗೂ ಮುಂಡಗೋಡ ವಲಯ ಅರಣ್ಯಾಧಿಕಾರಿ ಅಪ್ಪಾರಾವ್ ಕಲಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಂದಿಕಟ್ಟ ಗ್ರಾಮದಲ್ಲಿ ದಾಳಿ ನಡೆಸಿದರು.

ದಾಳಿಯ ವೇಳೆ ರಮೇಶ್ ಚವ್ವಾಣ್ ಎಂಬುವರ ಮನೆಯಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು, ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಸುಮಾರು 9 ಕೆಜಿ ಜಿಂಕೆ ಮಾಂಸವನ್ನು ವಶಪಡಿಸಿಕೊಂಡರು. ಈ ಸಂಬಂಧ ರಮೇಶ್ ಚವ್ವಾಣ್ ಅವರನ್ನು ಬಂಧಿಸಿ, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಪರಾರಿಯಾದ ಮತ್ತೋರ್ವ ಆರೋಪಿಗಾಗಿ ಹುಡುಕಾಟ

ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿತ ವಸಂತ್ ಕೊರವರ್ (ಮುಂಡಗೋಡ) ದಾಳಿ ವೇಳೆ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಅರಣ್ಯ ಇಲಾಖೆ ವಿಶೇಷ ತಂಡವನ್ನು ರಚಿಸಿ ಶೋಧ ಕಾರ್ಯ ಮುಂದುವರೆಸಿದೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.

ವನ್ಯಜೀವಿ ಅಪರಾಧಗಳಿಗೆ ಕಠಿಣ ಕ್ರಮ

ವನ್ಯಜೀವಿಗಳ ಬೇಟೆ, ಮಾಂಸ ಸಾಗಣೆ ಹಾಗೂ ಮಾರಾಟ ಗಂಭೀರ ಅಪರಾಧವಾಗಿದ್ದು, ಇಂತಹ ಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ. ವನ್ಯಜೀವಿ ಸಂಬಂಧಿತ ಯಾವುದೇ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಡಿಆರ್‌ಎಫ್‌ಒಗಳಾದ ಸುನೀತಾ ಬಿ.ಎಂ., ಮುತ್ತಣ್ಣ ಹುಂದ್ರಾಳ, ಬೀಟ್ ಫಾರೆಸ್ಟರ್‌ಗಳಾದ ಅಮಿತ್ ಸಣ್ಣಕ್ಕಿ, ಹೇಮಾ ಕೂಸನೂರ್, ಮುಸ್ತಾಕ್ ಅಲಿ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು. ಯಶಸ್ವಿ ಕಾರ್ಯಾಚರಣೆ ನಡೆಸಿದ ತಂಡವನ್ನು ಹಿರಿಯ ಅಧಿಕಾರಿಗಳು ಅಭಿನಂದಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಹೊಸ ತಿರುವು: ಎರಡನೇ ಬಾರಿ ಗರ್ಭಿಣಿ, ಪೋಷಕರ ವಿರುದ್ಧವೂ ಪ್ರಕರಣ

ಹುಬ್ಬಳ್ಳಿ: ನಗರದ ಉಣಕಲ್ ಪ್ರದೇಶದಲ್ಲಿ 15 ವರ್ಷ 6 ತಿಂಗಳ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವು ಹೊಸ…

15 hours ago

ಪ್ರೇಮಿಯೊಂದಿಗೆ ಹೋಟೆಲ್‌ನಲ್ಲಿ ಪತ್ನಿ; ದಿಢೀರ್ ದಾಳಿ ನಡೆಸಿದ ಪತಿ, ರಸ್ತೆಯಲ್ಲೇ ಹೈಡ್ರಾಮಾ

ಘಾಜಿಯಾಬಾದ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಘಾಜಿಯಾಬಾದ್‌ನ ಬಜ್ರಿಯಾ ಪ್ರದೇಶದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ನಡೆದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ…

15 hours ago

ಪ್ರಿಯಕರನಿಗಾಗಿ ಪತಿಗೆ ₹4 ಲಕ್ಷ ಸುಪಾರಿ..! ಕೊಲೆ ಬಳಿಕ ಶವವನ್ನು ಆಸಿಡ್‌ನಲ್ಲಿ ಕರಗಿಸಿದ ಪತ್ನಿ; ತನಿಖೆಯಲ್ಲಿ ಬೆಚ್ಚಿಬೀಳಿಸಿದ ಸತ್ಯ ಬಯಲು

ವೈವಾಹಿಕ ಜೀವನದಲ್ಲಿ ನಂಬಿಕೆ ಮತ್ತು ಪ್ರೀತಿಯೇ ಸಂಬಂಧದ ಅಡಿಪಾಯ. ಆದರೆ, ಅಕ್ರಮ ಸಂಬಂಧದ ಮೋಹಕ್ಕೆ ಬಿದ್ದ ಮಹಿಳೆಯೊಬ್ಬಳು ತನ್ನ ಪತಿಯನ್ನೇ…

15 hours ago

ಎರಡನೇ ಪತ್ನಿಗೆ ವರದಕ್ಷಿಣೆ ಕಿರುಕುಳ ಆರೋಪ: ಕೊಲೆ ಯತ್ನ ಪ್ರಕರಣದಲ್ಲಿ ಪ್ರೊಬೇಷನರಿ PSI ಬಂಧನ

ಬಳ್ಳಾರಿ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರೊಬೇಷನರಿ ಪಿಎಸ್‌ಐ (PSI) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೊರೆ ನಾಯಕ್ ಅವರನ್ನು ತಮ್ಮ ಎರಡನೇ…

15 hours ago

55 ದಿನಗಳಲ್ಲಿ 900 ದಾಳಿ, 235 ಎಫ್‌ಐಆರ್: ಆಹಾರ ಕಲಬೆರಕೆ ವಿರುದ್ಧ ಐಎಎಸ್ ತುಕಾರಾಮ್ ಮುಂಡೆ ಅಬ್ಬರ!

ಮಹಾರಾಷ್ಟ್ರದಲ್ಲಿ ಆಹಾರ ಕಲಬೆರಕೆ ವಿರುದ್ಧ ಕಠಿಣ ಕ್ರಮಗಳ ಮೂಲಕ ಐಎಎಸ್ ಅಧಿಕಾರಿ ತುಕಾರಾಮ್ ಮುಂಡೆ ಸದ್ಯ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.…

15 hours ago

ಒಯೋ ಹೋಟೆಲ್‌ನಲ್ಲಿ ಪ್ರೇಮ ದುರಂತ: ಮಾಜಿ ಪ್ರೇಯಸಿಯ ಕರೆ ಬಳಿಕ ಗಲಾಟೆ; 19 ವರ್ಷದ ಯುವಕ ಆತ್ಮಹತ್ಯೆ, ಯುವತಿ ಗಂಭೀರ

ಛತ್ತೀಸ್‌ಗಢದ ಭಿಲಾಯ್ ನಗರದಲ್ಲಿ ಪ್ರೇಮ ಸಂಬಂಧಕ್ಕೆ ಸಂಬಂಧಿಸಿದ ದುರ್ಘಟನೆಯೊಂದು ಬೆಳಕಿಗೆ ಬಂದಿದೆ. ಒಯೋ ಹೋಟೆಲ್‌ನಲ್ಲಿ ತಂಗಿದ್ದ ವೇಳೆ 19 ವರ್ಷದ…

15 hours ago