Categories: CrimeLatest

ಭ್ರೂಣಲಿಂಗ ಪತ್ತೆ–ಅಕ್ರಮ ಸ್ಕ್ಯಾನಿಂಗ್ ದಂಧೆ ಭಂಡಾಫೋಡ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಬಂಧನ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಇನ್ನೊಬ್ಬ ಮಹಿಳಾ ವೈದ್ಯೆ ನಾಪತ್ತೆಯಾಗಿದ್ದು, ಅವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಬಂಧಿತರನ್ನು ಕೆ.ಆರ್.ಪೇಟೆಯ ಚೇತನ ಮೆಟರ್ನಿಟಿ ಸೆಂಟರ್‌ನ ಡಾ. ದಿವ್ಯಚೇತನಾ, ನಾವಿ ಡಯಾಗ್ನೋಸ್ಟಿಕ್ ಸೆಂಟರ್‌ನ ಡಾ. ವೈ.ಆರ್. ಹರ್ಷಿತ್ ಹಾಗೂ ಕುಶಾಲ್ ಡಯಾಗ್ನೋಸ್ಟಿಕ್ ಸೆಂಟರ್‌ನ ಡಾ. ಹರೀಶ್ ಎಂದು ಗುರುತಿಸಲಾಗಿದೆ. ನಾಪತ್ತೆಯಾಗಿರುವ ವೈದ್ಯೆಯನ್ನು ಡಾ. ಪ್ರಿಯಾಂಕಾ ಎಂದು ತಿಳಿದುಬಂದಿದೆ.

ಸಾರ್ವಜನಿಕರಿಂದ ಬಂದ ದೂರು ಆಧರಿಸಿ ಉಪ ಲೋಕಾಯುಕ್ತ ಬಿ. ವೀರಪ್ಪ ತನಿಖೆಗೆ ಆದೇಶ ನೀಡಿದ ಹಿನ್ನೆಲೆ, ಲೋಕಾಯುಕ್ತ ಪೊಲೀಸರು ಏಪ್ರಿಲ್ 17ರಂದು ಏಕಕಾಲದಲ್ಲಿ ದಾಳಿ ನಡೆಸಿದರು. ಈ ವೇಳೆ ಕೆ.ಆರ್.ಪೇಟೆಯ ಎರಡು ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್‌ಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದವು ಎಂಬುದು ಬಹಿರಂಗವಾಯಿತು.

ತನಿಖೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ಸ್ಕ್ಯಾನಿಂಗ್ ಯಂತ್ರಗಳನ್ನು ಅಕ್ರಮವಾಗಿ ಖಾಸಗಿ ಕೇಂದ್ರಗಳಲ್ಲಿ ಬಳಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಕುಶಾಲ್ ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ ಮಾತ್ರವೇ 7 ಪ್ರಕರಣಗಳಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರಿಗೆ ಸ್ಕ್ಯಾನಿಂಗ್ ಮಾಡಿರುವುದು ಪತ್ತೆಯಾಗಿದೆ. ಜೊತೆಗೆ, 64 ಪ್ರಕರಣಗಳಲ್ಲಿ 18 ರಿಂದ 20 ವರ್ಷ ವಯಸ್ಸಿನ ಮಹಿಳೆಯರ ವಯಸ್ಸಿನ ದೃಢೀಕರಣ ದಾಖಲೆ ಪಡೆಯದೇ ಸ್ಕ್ಯಾನಿಂಗ್ ನಡೆಸಿರುವುದು ಕಂಡುಬಂದಿದೆ.

ಈ ಸಂಬಂಧ ಆರೋಗ್ಯ ಇಲಾಖೆಯ ಅಧಿಕಾರಿಗಳು ದೂರು ದಾಖಲಿಸಿದ್ದು, ಕೆ.ಆರ್.ಪೇಟೆ ಪಟ್ಟಣ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಬಂಧಿತರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ-2023ರ ವಿವಿಧ ಕಲಂಗಳು ಹಾಗೂ ಪೋಕ್ಸೋ ಕಾಯ್ದೆಯಡಿ ಒಟ್ಟು 12 ಪ್ರಕರಣಗಳನ್ನು ದಾಖಲಿಸಲಾಗಿದೆ.

ಪ್ರಸ್ತುತ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದ್ದು, ನಾಪತ್ತೆಯಾಗಿರುವ ಮತ್ತೊಬ್ಬ ವೈದ್ಯೆಯ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಭ್ರಷ್ಟರ ಬೇಟೆ

Recent Posts

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರ ಗೌಡಗೆ ವಿಶೇಷ ಸೌಲಭ್ಯ ಆರೋಪ: ಸಂಧ್ಯಾ ನಾಗರಾಜ್ ಮತ್ತೊಂದು ಆಡಿಯೋ ಬಿಡುಗಡೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೆಲ ಕೈದಿಗಳಿಗೆ ವಿಶೇಷ ಸೌಲಭ್ಯಗಳು ಹಾಗೂ ರಾಜಾತಿಥ್ಯದ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂಬ…

6 hours ago

ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯರ ವಿರುದ್ಧ ಪ್ರಕರಣ

ಕಡೂರು: ತಾಲೂಕಿನ ಹಳ್ಳಿಯೊಂದರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂವರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯರ…

6 hours ago

ರುಕ್ಮಿಣಿ ವಸಂತ್ ಡೀಪ್‌ಫೇಕ್ ಪ್ರಕರಣ: ಹೈಟೆಕ್ ಆರೋಪಿಗಳ ಬಂಧನ, ಹಿನ್ನೆಲೆ ತಿಳಿದು ಪೊಲೀಸರಿಗೂ ಶಾಕ್!

ಬೆಂಗಳೂರು: ನಟಿ ರುಕ್ಮಿಣಿ ವಸಂತ್ ಅವರ ಫೋಟೋಗಳನ್ನು ದುರ್ಬಳಕೆ ಮಾಡಿಕೊಂಡು ಎಐ ತಂತ್ರಜ್ಞಾನದ ಮೂಲಕ ಅಶ್ಲೀಲ ಡೀಪ್‌ಫೇಕ್ ಫೋಟೋ ಹಾಗೂ…

6 hours ago

8 ತಿಂಗಳು ಸೋಲುಗಳ ಸರಮಾಲೆ… ಕೊನೆಗೆ ಆಕ್ಸ್‌ಫರ್ಡ್‌ನಿಂದ ಬಂದ ಒಂದೇ ಇ-ಮೇಲ್ ಬದುಕೇ ಬದಲಿಸಿತು! ₹2 ಕೋಟಿ ಸ್ಕಾಲರ್‌ಶಿಪ್ ಪಡೆದ ಭಾರತದ ಮೊದಲ ಮಹಿಳೆ

ಚೆನ್ನೈ: ಜೀವನದಲ್ಲಿ ಒಂದೆರಡು ಬಾರಿ ಸೋತರೆ ಸಾಕು, "ನನ್ನಿಂದ ಏನೂ ಆಗುವುದಿಲ್ಲ" ಎಂದು ಕನಸುಗಳನ್ನು ಅರ್ಧದಲ್ಲೇ ಕೈಬಿಡುವವರು ನಮ್ಮ ನಡುವೆ…

6 hours ago

₹2 ಕೋಟಿ ವಿಮೆ ಹಣದ ಆಸೆಗೆ ಪತಿಯ ಕೊಲೆ: ಮಗಳ ಕೃತ್ಯದಿಂದ ಮನನೊಂದ ತಾಯಿ ಆತ್ಮಹತ್ಯೆ

ಬೆಳಗಾವಿ: ₹2 ಕೋಟಿ ಜೀವ ವಿಮೆ ಹಣಕ್ಕಾಗಿ ಮಾಜಿ ಸೈನಿಕನನ್ನು ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಕೊಲೆ ಮಾಡಿದ…

8 hours ago

ಪೊಲೀಸ್ ಅಧಿಕಾರಿ ಡಿವೈಎಸ್ಪಿ ಗೀತಾ ಪಾಟೀಲ, ಪಿಐ ಸೀತಾರಾಮ ಅಮಾನತಿಗೆ ಆಗ್ರಹಿಸಿ ಬೀದಿಗಿಳಿದ ಸಾರ್ವಜನಿಕರು

ಸಿದ್ದಾಪುರ: ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ ಹಾಗೂ ಸಿದ್ದಾಪುರ ಪೊಲೀಸ್ ಠಾಣೆಯ ಪಿಐ ಸೀತಾರಾಮ ಅವರನ್ನು ಅಮಾನತುಗೊಳಿಸಿ ಇಲಾಖಾ ತನಿಖೆ…

1 day ago