Categories: CrimeLatest

ಭ್ರೂಣಲಿಂಗ ಪತ್ತೆ–ಅಕ್ರಮ ಸ್ಕ್ಯಾನಿಂಗ್ ದಂಧೆ ಭಂಡಾಫೋಡ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಬಂಧನ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಇನ್ನೊಬ್ಬ ಮಹಿಳಾ ವೈದ್ಯೆ ನಾಪತ್ತೆಯಾಗಿದ್ದು, ಅವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಬಂಧಿತರನ್ನು ಕೆ.ಆರ್.ಪೇಟೆಯ ಚೇತನ ಮೆಟರ್ನಿಟಿ ಸೆಂಟರ್‌ನ ಡಾ. ದಿವ್ಯಚೇತನಾ, ನಾವಿ ಡಯಾಗ್ನೋಸ್ಟಿಕ್ ಸೆಂಟರ್‌ನ ಡಾ. ವೈ.ಆರ್. ಹರ್ಷಿತ್ ಹಾಗೂ ಕುಶಾಲ್ ಡಯಾಗ್ನೋಸ್ಟಿಕ್ ಸೆಂಟರ್‌ನ ಡಾ. ಹರೀಶ್ ಎಂದು ಗುರುತಿಸಲಾಗಿದೆ. ನಾಪತ್ತೆಯಾಗಿರುವ ವೈದ್ಯೆಯನ್ನು ಡಾ. ಪ್ರಿಯಾಂಕಾ ಎಂದು ತಿಳಿದುಬಂದಿದೆ.

ಸಾರ್ವಜನಿಕರಿಂದ ಬಂದ ದೂರು ಆಧರಿಸಿ ಉಪ ಲೋಕಾಯುಕ್ತ ಬಿ. ವೀರಪ್ಪ ತನಿಖೆಗೆ ಆದೇಶ ನೀಡಿದ ಹಿನ್ನೆಲೆ, ಲೋಕಾಯುಕ್ತ ಪೊಲೀಸರು ಏಪ್ರಿಲ್ 17ರಂದು ಏಕಕಾಲದಲ್ಲಿ ದಾಳಿ ನಡೆಸಿದರು. ಈ ವೇಳೆ ಕೆ.ಆರ್.ಪೇಟೆಯ ಎರಡು ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್‌ಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದವು ಎಂಬುದು ಬಹಿರಂಗವಾಯಿತು.

ತನಿಖೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ಸ್ಕ್ಯಾನಿಂಗ್ ಯಂತ್ರಗಳನ್ನು ಅಕ್ರಮವಾಗಿ ಖಾಸಗಿ ಕೇಂದ್ರಗಳಲ್ಲಿ ಬಳಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಕುಶಾಲ್ ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ ಮಾತ್ರವೇ 7 ಪ್ರಕರಣಗಳಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರಿಗೆ ಸ್ಕ್ಯಾನಿಂಗ್ ಮಾಡಿರುವುದು ಪತ್ತೆಯಾಗಿದೆ. ಜೊತೆಗೆ, 64 ಪ್ರಕರಣಗಳಲ್ಲಿ 18 ರಿಂದ 20 ವರ್ಷ ವಯಸ್ಸಿನ ಮಹಿಳೆಯರ ವಯಸ್ಸಿನ ದೃಢೀಕರಣ ದಾಖಲೆ ಪಡೆಯದೇ ಸ್ಕ್ಯಾನಿಂಗ್ ನಡೆಸಿರುವುದು ಕಂಡುಬಂದಿದೆ.

ಈ ಸಂಬಂಧ ಆರೋಗ್ಯ ಇಲಾಖೆಯ ಅಧಿಕಾರಿಗಳು ದೂರು ದಾಖಲಿಸಿದ್ದು, ಕೆ.ಆರ್.ಪೇಟೆ ಪಟ್ಟಣ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಬಂಧಿತರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ-2023ರ ವಿವಿಧ ಕಲಂಗಳು ಹಾಗೂ ಪೋಕ್ಸೋ ಕಾಯ್ದೆಯಡಿ ಒಟ್ಟು 12 ಪ್ರಕರಣಗಳನ್ನು ದಾಖಲಿಸಲಾಗಿದೆ.

ಪ್ರಸ್ತುತ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದ್ದು, ನಾಪತ್ತೆಯಾಗಿರುವ ಮತ್ತೊಬ್ಬ ವೈದ್ಯೆಯ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

15 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

15 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

15 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

15 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

15 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

15 hours ago