ಕೊರಟಗೆರೆ ತಾಲೂಕಿನ ಸಿ.ಎನ್.ದುರ್ಗ ಹೋಬಳಿಯ ಬುಕ್ಕಾಪಟ್ಟಣ ಸಮೀಪ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ಗಳನ್ನು ಭರ್ತಿ ಮಾಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಶನಿವಾರ ತಡರಾತ್ರಿ ಪಿಎಸ್ಐ ಚೇತನ್ ಕುಮಾರ್ ನೇತೃತ್ವದ ಪೊಲೀಸರು ಕಾರ್ಯಾಚರಣೆ ನಡೆಸಿ, 137 ಸಿಲಿಂಡರ್ಗಳು, ಒಂದು ಟಾಟಾ ಇಂಟ್ರಾ ಗೂಡ್ಸ್ ವಾಹನ ಹಾಗೂ ಆಕ್ಟೀವಾ ಬೈಕ್ ಸಹಿತ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಕೋಳಿ ಶೆಡ್ನಲ್ಲಿ ಅಕ್ರಮ ಸಿಲಿಂಡರ್ ಭರ್ತಿ
ಬುಕ್ಕಾಪಟ್ಟಣ ಸರ್ವೆ ನಂ.98 ರಲ್ಲಿರುವ ಫಾತಿಮಾ ಬಿನ್ ಸೈಯದ್ ಜಮೀಲ್ ಬಾಷ ಅವರ ಮಾಲೀಕತ್ವದ ಕೋಳಿ ಫಾರಂ ಶೆಡ್ನಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರಿಗೆ, ಸರ್ಕಾರದ ಉಜ್ವಲ ಯೋಜನೆಯಡಿ ಬಡವರಿಗೆ ನೀಡುವ 75 ಗೃಹಬಳಕೆಯ ಸಿಲಿಂಡರ್ಗಳು ಹಾಗೂ 62 ವಾಣಿಜ್ಯ ಗ್ಯಾಸ್ ಸಿಲಿಂಡರ್ಗಳು ಸಿಕ್ಕಿವೆ.
ಆರೋಪಿ ಬಂಧನ, ಇನ್ನಿಬ್ಬರು ಪರಾರಿ
ಪೊಲೀಸರು ರಘು ಎಂಬಾತನನ್ನು ಬಂಧಿಸಿ, ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆದರೆ, ಇನ್ನಿಬ್ಬರು ಆರೋಪಿಗಳು ಪೊಲೀಸರು ದಾಳಿ ನಡೆಸುವ ವೇಳೆಗೆ ಪರಾರಿಯಾಗಿದ್ದಾರೆ.
ಪೊಲೀಸರ ಕಾರ್ಯಾಚರಣೆಗೆ ಡಿವೈಎಸ್ಪಿ ಭೇಟಿ
ಈ ದಾಳಿಯ ವೇಳೆ ಮಧುಗಿರಿ ಡಿವೈಎಸ್ಪಿ ಮಂಜುನಾಥ್, ಸಿಪಿಐ ಅನಿಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾರ್ಯಾಚರಣೆಯಲ್ಲಿ ಎಎಸ್ಐ ಗಂಗಾಧರಪ್ಪ, ಪೇದೆಗಳಾದ ದೊಡ್ಡಲಿಂಗಯ್ಯ, ಮೋಹನ್, ದಯಾನಂದ್, ರಾಮಚಂದ್ರ, ನವೀನ್, ಸಿದ್ದರಾಮು ಹಾಗೂ ಇತರ ಪೊಲೀಸರು ಭಾಗಿಯಾಗಿದ್ದರು.
ಈ ಪ್ರಕರಣದ ಬಗ್ಗೆ ಕೊರಟಗೆರೆ ಪೊಲೀಸರು ಮುಂದಿನ ತನಿಖೆಯನ್ನು ಮುಂದುವರೆಸಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…