Latest

ಮನೆಯಲ್ಲೇ ಗ್ಯಾಸ್ ರೀಫಿಲ್ಲಿಂಗ್ ಅಕ್ರಮ: ಗ್ರಾಮ ಪಂಚಾಯಿತಿ ಸದಸ್ಯ ಅರೆಸ್ಟ್

ಗ್ರಾಮಾಂತರ ಪೊಲೀಸ್ ಠಾಣೆಯ ತಂಡ, ಆಹಾರ ಇಲಾಖೆಯ ನಿರೀಕ್ಷಕರ ಸಹಯೋಗದಲ್ಲಿ, ಸತ್ತೇಗಾಲ ಹ್ಯಾಂಡ್‌ಪೋಸ್ಟ್‌ ಗ್ರಾಮ ಪಂಚಾಯಿತಿ ಸದಸ್ಯ ಸಿದ್ದು ಅವರನ್ನು ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ರೀಫಿಲ್ಲಿಂಗ್ ಆರೋಪದ ಮೇಲೆ ಬಂಧಿಸಿದೆ.

ಮನೆಯಲ್ಲೇ ಅಕ್ರಮ ಗ್ಯಾಸಿನ ಪೂರೈಕೆ

ಪೊಲೀಸರ ತನಿಖೆಯಲ್ಲಿ, ಸಿದ್ದು ತಮ್ಮ ಮನೆಯಲ್ಲಿಯೇ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿ ಆಟೋ ರಿಕ್ಷಾಗಳಿಗೆ ಅಕ್ರಮವಾಗಿ ರೀಫಿಲ್ಲಿಂಗ್ ಮಾಡುತ್ತಿದ್ದರೆಂದು ಗೊತ್ತಾಗಿದೆ. ಈ ಕುರಿತು ಖಚಿತ ಮಾಹಿತಿ ಪಡೆದ ಪಿಎಸ್‌ಐ ವರ್ಷಾ ಹಾಗೂ ಆಹಾರ ಇಲಾಖೆಯ ನಿರೀಕ್ಷಕ ಪ್ರಸಾದ್ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ಆರು ಸಿಲಿಂಡರ್‌ಗಳು ವಶಕ್ಕೆ

ಆರೋಪಿಯಿಂದ 5 ಗ್ಯಾಸ್ ಸಿಲಿಂಡರ್‌ಗಳು, ರೀಫಿಲ್ಲಿಂಗ್‌ನಲ್ಲಿ ಬಳಸುತ್ತಿದ್ದ ಉಪಕರಣಗಳು ಹಾಗೂ ಇತರ ವಸ್ತುಗಳು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಾನೂನುಬದ್ಧ ಕ್ರಮ

ಕಾರ್ಯಾಚರಣೆಯಲ್ಲಿ ಅಪರಾಧ ಪತ್ತೆದಳದ ಡಿವೈಎಸ್ಪಿ, ಎಎಸ್‌ಐ ತಖೀಉಲ್ಲಾ, ಹೆಡ್‌ಕಾನ್‌ಸ್ಟೆಬಲ್ ರವಿ, ಸಿಬ್ಬంది ವೆಂಕಟೇಶ್, ಬಿಳಿಗೌಡ, ಮತ್ತು ಕಾನ್‌ಸ್ಟೆಬಲ್ ಶಿವಕುಮಾರ್ ಭಾಗವಹಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿಯುತ್ತಿದೆ.

nazeer ahamad

Recent Posts

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

5 minutes ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

17 minutes ago

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

10 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

10 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

13 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

15 hours ago