ಬೆಂಗಳೂರು: ಅಕ್ರಮ ಮದ್ಯ ಮಾರಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿ, ಲಕ್ಷಾಂತರ ಮೌಲ್ಯದ ಮದ್ಯ ಮತ್ತು ಎರಡು ದ್ವಿಚಕ್ರವಾಹನಗಳನ್ನು ಜಪ್ತಿ ಮಾಡಿದ್ದಾರೆ.
ಬಂಧಿತನನ್ನು ಜಗನ್ನಾಥ್ ಕೆ.ವಿ. ಎಂದು ಗುರುತಿಸಲಾಗಿದ್ದು, ಅವನಿಂದ ರೂ. 39,08,907 ಮೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ, ಎರಡು ದ್ವಿಚಕ್ರವಾಹನಗಳೊಂದಿಗೆ ಒಟ್ಟು ವಶಪಡಿಸಿಕೊಳ್ಳಲಾದ ಆಸ್ತಿಯ ಮೌಲ್ಯ ರೂ. 47,70,000 ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿ ನಡೆಸಿದ ಸ್ಥಳಗಳು:
ಜ.29 ಮತ್ತು ಜ.30 ರಂದು, ಅಧಿಕಾರಿಗಳು ನಗರದಲ್ಲಿ ಹಲವೆಡೆ ದಾಳಿ ನಡೆಸಿದ್ದು, ಅಕ್ರಮ ಮದ್ಯ ಭಂಡಾರ ಪತ್ತೆಯಾಗಿದೆ. ನಾಗರಭಾವಿಯ ಮುನೇಶ್ವರ ದೇವಸ್ಥಾನದ ಸಮೀಪ, ದಾಸರಹಳ್ಳಿಯ ಹೌಸಿಂಗ್ ಬೋರ್ಡ್ ರಸ್ತೆ ಬಳಿಯ ರಹೇಜಾ ಅಪಾರ್ಟ್ಮೆಂಟ್ ಎದುರು, ಕಾಮಾಕ್ಷಿ ಪಾಳ್ಯದ ಶಾರದಾಂಬ ಪಿಜಿ ಕಟ್ಟಡದ ನೆಲಮಹಡಿಯಲ್ಲಿ ಇರುವ ಗೋದಾಮು ಹಾಗೂ ಮೀನಾಕ್ಷಿ ನಗರದ ಮನೆಯೊಂದರಲ್ಲಿ ಭಾರಿ ಪ್ರಮಾಣದ ಅಕ್ರಮ ಮದ್ಯ ಜಪ್ತಿ ಮಾಡಲಾಗಿದೆ.
ಅಬಕಾರಿ ಇಲಾಖೆ ಅಧಿಕಾರಿಗಳ ಕಾರ್ಯಚರಣೆ ಯಶಸ್ವಿಯಾಗಿದ್ದು, ಅಕ್ರಮ ಮದ್ಯ ಮಾರಾಟ ಜಾಲವನ್ನೂ ಭೇದಿಸಲು ತನಿಖೆ ಮುಂದುವರೆದಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…