ಬೆಂಗಳೂರು: ಅಕ್ರಮ ಮದ್ಯ ಮಾರಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿ, ಲಕ್ಷಾಂತರ ಮೌಲ್ಯದ ಮದ್ಯ ಮತ್ತು ಎರಡು ದ್ವಿಚಕ್ರವಾಹನಗಳನ್ನು ಜಪ್ತಿ ಮಾಡಿದ್ದಾರೆ.
ಬಂಧಿತನನ್ನು ಜಗನ್ನಾಥ್ ಕೆ.ವಿ. ಎಂದು ಗುರುತಿಸಲಾಗಿದ್ದು, ಅವನಿಂದ ರೂ. 39,08,907 ಮೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ, ಎರಡು ದ್ವಿಚಕ್ರವಾಹನಗಳೊಂದಿಗೆ ಒಟ್ಟು ವಶಪಡಿಸಿಕೊಳ್ಳಲಾದ ಆಸ್ತಿಯ ಮೌಲ್ಯ ರೂ. 47,70,000 ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿ ನಡೆಸಿದ ಸ್ಥಳಗಳು:
ಜ.29 ಮತ್ತು ಜ.30 ರಂದು, ಅಧಿಕಾರಿಗಳು ನಗರದಲ್ಲಿ ಹಲವೆಡೆ ದಾಳಿ ನಡೆಸಿದ್ದು, ಅಕ್ರಮ ಮದ್ಯ ಭಂಡಾರ ಪತ್ತೆಯಾಗಿದೆ. ನಾಗರಭಾವಿಯ ಮುನೇಶ್ವರ ದೇವಸ್ಥಾನದ ಸಮೀಪ, ದಾಸರಹಳ್ಳಿಯ ಹೌಸಿಂಗ್ ಬೋರ್ಡ್ ರಸ್ತೆ ಬಳಿಯ ರಹೇಜಾ ಅಪಾರ್ಟ್ಮೆಂಟ್ ಎದುರು, ಕಾಮಾಕ್ಷಿ ಪಾಳ್ಯದ ಶಾರದಾಂಬ ಪಿಜಿ ಕಟ್ಟಡದ ನೆಲಮಹಡಿಯಲ್ಲಿ ಇರುವ ಗೋದಾಮು ಹಾಗೂ ಮೀನಾಕ್ಷಿ ನಗರದ ಮನೆಯೊಂದರಲ್ಲಿ ಭಾರಿ ಪ್ರಮಾಣದ ಅಕ್ರಮ ಮದ್ಯ ಜಪ್ತಿ ಮಾಡಲಾಗಿದೆ.
ಅಬಕಾರಿ ಇಲಾಖೆ ಅಧಿಕಾರಿಗಳ ಕಾರ್ಯಚರಣೆ ಯಶಸ್ವಿಯಾಗಿದ್ದು, ಅಕ್ರಮ ಮದ್ಯ ಮಾರಾಟ ಜಾಲವನ್ನೂ ಭೇದಿಸಲು ತನಿಖೆ ಮುಂದುವರೆದಿದೆ.
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…