ಬೆಂಗಳೂರು: ಅಕ್ರಮ ಮದ್ಯ ಮಾರಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿ, ಲಕ್ಷಾಂತರ ಮೌಲ್ಯದ ಮದ್ಯ ಮತ್ತು ಎರಡು ದ್ವಿಚಕ್ರವಾಹನಗಳನ್ನು ಜಪ್ತಿ ಮಾಡಿದ್ದಾರೆ.
ಬಂಧಿತನನ್ನು ಜಗನ್ನಾಥ್ ಕೆ.ವಿ. ಎಂದು ಗುರುತಿಸಲಾಗಿದ್ದು, ಅವನಿಂದ ರೂ. 39,08,907 ಮೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ, ಎರಡು ದ್ವಿಚಕ್ರವಾಹನಗಳೊಂದಿಗೆ ಒಟ್ಟು ವಶಪಡಿಸಿಕೊಳ್ಳಲಾದ ಆಸ್ತಿಯ ಮೌಲ್ಯ ರೂ. 47,70,000 ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿ ನಡೆಸಿದ ಸ್ಥಳಗಳು:
ಜ.29 ಮತ್ತು ಜ.30 ರಂದು, ಅಧಿಕಾರಿಗಳು ನಗರದಲ್ಲಿ ಹಲವೆಡೆ ದಾಳಿ ನಡೆಸಿದ್ದು, ಅಕ್ರಮ ಮದ್ಯ ಭಂಡಾರ ಪತ್ತೆಯಾಗಿದೆ. ನಾಗರಭಾವಿಯ ಮುನೇಶ್ವರ ದೇವಸ್ಥಾನದ ಸಮೀಪ, ದಾಸರಹಳ್ಳಿಯ ಹೌಸಿಂಗ್ ಬೋರ್ಡ್ ರಸ್ತೆ ಬಳಿಯ ರಹೇಜಾ ಅಪಾರ್ಟ್ಮೆಂಟ್ ಎದುರು, ಕಾಮಾಕ್ಷಿ ಪಾಳ್ಯದ ಶಾರದಾಂಬ ಪಿಜಿ ಕಟ್ಟಡದ ನೆಲಮಹಡಿಯಲ್ಲಿ ಇರುವ ಗೋದಾಮು ಹಾಗೂ ಮೀನಾಕ್ಷಿ ನಗರದ ಮನೆಯೊಂದರಲ್ಲಿ ಭಾರಿ ಪ್ರಮಾಣದ ಅಕ್ರಮ ಮದ್ಯ ಜಪ್ತಿ ಮಾಡಲಾಗಿದೆ.
ಅಬಕಾರಿ ಇಲಾಖೆ ಅಧಿಕಾರಿಗಳ ಕಾರ್ಯಚರಣೆ ಯಶಸ್ವಿಯಾಗಿದ್ದು, ಅಕ್ರಮ ಮದ್ಯ ಮಾರಾಟ ಜಾಲವನ್ನೂ ಭೇದಿಸಲು ತನಿಖೆ ಮುಂದುವರೆದಿದೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…