Latest

ಅಕ್ರಮ ಮದ್ಯ ಮಾರಾಟ – ಒಬ್ಬರು ಬಂಧನ, ಲಕ್ಷಾಂತರ ಮೌಲ್ಯದ ಮದ್ಯ ಜಪ್ತಿ

ಬೆಂಗಳೂರು: ಅಕ್ರಮ ಮದ್ಯ ಮಾರಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿ, ಲಕ್ಷಾಂತರ ಮೌಲ್ಯದ ಮದ್ಯ ಮತ್ತು ಎರಡು ದ್ವಿಚಕ್ರವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಬಂಧಿತನನ್ನು ಜಗನ್ನಾಥ್ ಕೆ.ವಿ. ಎಂದು ಗುರುತಿಸಲಾಗಿದ್ದು, ಅವನಿಂದ ರೂ. 39,08,907 ಮೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ, ಎರಡು ದ್ವಿಚಕ್ರವಾಹನಗಳೊಂದಿಗೆ ಒಟ್ಟು ವಶಪಡಿಸಿಕೊಳ್ಳಲಾದ ಆಸ್ತಿಯ ಮೌಲ್ಯ ರೂ. 47,70,000 ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿ ನಡೆಸಿದ ಸ್ಥಳಗಳು:
ಜ.29 ಮತ್ತು ಜ.30 ರಂದು, ಅಧಿಕಾರಿಗಳು ನಗರದಲ್ಲಿ ಹಲವೆಡೆ ದಾಳಿ ನಡೆಸಿದ್ದು, ಅಕ್ರಮ ಮದ್ಯ ಭಂಡಾರ ಪತ್ತೆಯಾಗಿದೆ. ನಾಗರಭಾವಿಯ ಮುನೇಶ್ವರ ದೇವಸ್ಥಾನದ ಸಮೀಪ, ದಾಸರಹಳ್ಳಿಯ ಹೌಸಿಂಗ್ ಬೋರ್ಡ್ ರಸ್ತೆ ಬಳಿಯ ರಹೇಜಾ ಅಪಾರ್ಟ್ಮೆಂಟ್ ಎದುರು, ಕಾಮಾಕ್ಷಿ ಪಾಳ್ಯದ ಶಾರದಾಂಬ ಪಿಜಿ ಕಟ್ಟಡದ ನೆಲಮಹಡಿಯಲ್ಲಿ ಇರುವ ಗೋದಾಮು ಹಾಗೂ ಮೀನಾಕ್ಷಿ ನಗರದ ಮನೆಯೊಂದರಲ್ಲಿ ಭಾರಿ ಪ್ರಮಾಣದ ಅಕ್ರಮ ಮದ್ಯ ಜಪ್ತಿ ಮಾಡಲಾಗಿದೆ.

ಅಬಕಾರಿ ಇಲಾಖೆ ಅಧಿಕಾರಿಗಳ ಕಾರ್ಯಚರಣೆ ಯಶಸ್ವಿಯಾಗಿದ್ದು, ಅಕ್ರಮ ಮದ್ಯ ಮಾರಾಟ ಜಾಲವನ್ನೂ ಭೇದಿಸಲು ತನಿಖೆ ಮುಂದುವರೆದಿದೆ.

nazeer ahamad

Recent Posts

“ಕಾಲೇಜಿಗೆ ಹೋಗ್ತೀನಿ ಅಂತ ಹೇಳಿ OYOಗೆ!” — ಮಗಳ ಮೇಲೆ ತಾಯಿ ದಾಳಿ ವಿಡಿಯೋ ವೈರಲ್.

ಇಂಟರ್‌ನೆಟ್ ಕ್ರಾಂತಿಯ ನಂತರ ಸ್ಮಾರ್ಟ್‌ಫೋನ್ ಪ್ರತಿಯೊಬ್ಬರ ಕೈಗೆ ತಲುಪಿದ ಪರಿಣಾಮ, ಸಾಮಾನ್ಯ ಜನರೂ ಈಗ ಕಂಟೆಂಟ್ ಕ್ರಿಯೇಟರ್‌ಗಳಾಗಿ ಪರಿಣಮಿಸಿದ್ದಾರೆ. ಈ…

3 hours ago

ಯಾದಗಿರಿಯಲ್ಲಿ ಭೀಕರ ರಸ್ತೆ ದುರಂತ: ಕಾರು–ಬಸ್ ಡಿಕ್ಕಿ, 6 ಮಂದಿ ಸಜೀವ ದಹನ—ಹೃದಯ ಕಲುಕುವ ದೃಶ್ಯ

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಜೀವ…

3 hours ago

ಧರ್ಮಾಧಾರಿತ ಮೀಸಲಾತಿಗೆ ಅವಕಾಶ ಇಲ್ಲ— ಲೋಕಸಭೆಯಲ್ಲಿ ಅಮಿತ್ ಶಾ ಕಠಿಣ ನಿಲುವು

ನವದೆಹಲಿ: ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವುದು ಎಂದರೆ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವುದಾಗಿ ಅರ್ಥೈಸಿಕೊಳ್ಳಲಾಗುವುದಿಲ್ಲ ಎಂದು ಕೇಂದ್ರ ಗೃಹ…

5 hours ago

ಐಪಿಎಲ್ ಟಿಕೆಟ್ ಕಾಳಬಜಾರ್ ಭೇದಿಸಿದ ಸಿಸಿಬಿ! ₹1,200 ಟಿಕೆಟ್ ₹19,000ಕ್ಕೆ ಮಾರಾಟ—ಚಿನ್ನಸ್ವಾಮಿ ಒಳಗೇ ನಡೆಯುತ್ತಿದ್ದ ದೊಡ್ಡ ದಂಧೆ ಬಯಲು

ಬೆಂಗಳೂರು: ಐಪಿಎಲ್ ಹುಚ್ಚನ್ನು ದುರುಪಯೋಗಪಡಿಸಿಕೊಂಡು ಅಭಿಮಾನಿಗಳಿಂದ ಲಕ್ಷಾಂತರ ಹಣ ದೋಚುತ್ತಿದ್ದ ದೊಡ್ಡ ಟಿಕೆಟ್ ಕಾಳಬಜಾರ್ ಜಾಲವೊಂದನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ.…

7 hours ago

ಅಂಕೋಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಪೆಟ್ರೋಲಿಯಂ ಟ್ಯಾಂಕರ್ – ಸಂಚಾರ ಸ್ಥಗಿತ

ಅಂಕೋಲ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಂಚಿನಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಪೆಟ್ರೋಲಿಯಂ ಉತ್ಪನ್ನ ಹೊತ್ತೊಯ್ಯುತ್ತಿದ್ದ ಟ್ಯಾಂಕರ್…

21 hours ago

ಮುಂಡಗೋಡದಲ್ಲಿ ಯೂರಿಯಾ ಸಂಕಷ್ಟ ತಡೆಗೆ ಸಭೆ: ತಾಲೂಕು ರೈತರಿಗೆ ಮೊದಲ ಆದ್ಯತೆ ನೀಡಲು ಸೂಚನೆ

ಮುಂಡಗೋಡ: ಶಿರಸಿಯ ಕೃಷಿ ಉಪ ನಿರ್ದೇಶಕರಾದ ಪಾಂಡು ಅವರ ನೇತೃತ್ವದಲ್ಲಿ ಮುಂಡಗೋಡ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಬುಧವಾರ ರಸಗೊಬ್ಬರ ಮಾರಾಟಗಾರರ…

21 hours ago