ಬೆಂಗಳೂರು: ಅಕ್ರಮ ಮದ್ಯ ಮಾರಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿ, ಲಕ್ಷಾಂತರ ಮೌಲ್ಯದ ಮದ್ಯ ಮತ್ತು ಎರಡು ದ್ವಿಚಕ್ರವಾಹನಗಳನ್ನು ಜಪ್ತಿ ಮಾಡಿದ್ದಾರೆ.
ಬಂಧಿತನನ್ನು ಜಗನ್ನಾಥ್ ಕೆ.ವಿ. ಎಂದು ಗುರುತಿಸಲಾಗಿದ್ದು, ಅವನಿಂದ ರೂ. 39,08,907 ಮೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ, ಎರಡು ದ್ವಿಚಕ್ರವಾಹನಗಳೊಂದಿಗೆ ಒಟ್ಟು ವಶಪಡಿಸಿಕೊಳ್ಳಲಾದ ಆಸ್ತಿಯ ಮೌಲ್ಯ ರೂ. 47,70,000 ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿ ನಡೆಸಿದ ಸ್ಥಳಗಳು:
ಜ.29 ಮತ್ತು ಜ.30 ರಂದು, ಅಧಿಕಾರಿಗಳು ನಗರದಲ್ಲಿ ಹಲವೆಡೆ ದಾಳಿ ನಡೆಸಿದ್ದು, ಅಕ್ರಮ ಮದ್ಯ ಭಂಡಾರ ಪತ್ತೆಯಾಗಿದೆ. ನಾಗರಭಾವಿಯ ಮುನೇಶ್ವರ ದೇವಸ್ಥಾನದ ಸಮೀಪ, ದಾಸರಹಳ್ಳಿಯ ಹೌಸಿಂಗ್ ಬೋರ್ಡ್ ರಸ್ತೆ ಬಳಿಯ ರಹೇಜಾ ಅಪಾರ್ಟ್ಮೆಂಟ್ ಎದುರು, ಕಾಮಾಕ್ಷಿ ಪಾಳ್ಯದ ಶಾರದಾಂಬ ಪಿಜಿ ಕಟ್ಟಡದ ನೆಲಮಹಡಿಯಲ್ಲಿ ಇರುವ ಗೋದಾಮು ಹಾಗೂ ಮೀನಾಕ್ಷಿ ನಗರದ ಮನೆಯೊಂದರಲ್ಲಿ ಭಾರಿ ಪ್ರಮಾಣದ ಅಕ್ರಮ ಮದ್ಯ ಜಪ್ತಿ ಮಾಡಲಾಗಿದೆ.
ಅಬಕಾರಿ ಇಲಾಖೆ ಅಧಿಕಾರಿಗಳ ಕಾರ್ಯಚರಣೆ ಯಶಸ್ವಿಯಾಗಿದ್ದು, ಅಕ್ರಮ ಮದ್ಯ ಮಾರಾಟ ಜಾಲವನ್ನೂ ಭೇದಿಸಲು ತನಿಖೆ ಮುಂದುವರೆದಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…