ಕೊಪ್ಪಳ: ಕುಷ್ಟಗಿ ತಾಲ್ಲೂಕಿನ ಚಿಕ್ಕವಂಕಲಕುಂಟ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಒಣ ಗಾಂಜಾ ಜಪ್ತಿ ಮಾಡಿರುವ ಅಬಕಾರಿ ಇಲಾಖೆಯ ಅಧಿಕಾರಿಗಳು, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.
ಗುರುವಾರ ನಡೆದ ದಾಳಿಯಲ್ಲಿ, ಅಬಕಾರಿ ಇಲಾಖೆ ಒಟ್ಟು 188 ಗ್ರಾಂ ಒಣ ಗಾಂಜಾ ವಶಪಡಿಸಿಕೊಂಡಿದ್ದು, ಆರೋಪಿಯಾದ ಕುಂಟೆಪ್ಪ ಹಣಮಪ್ಪ ಪೂಜಾರಿ ವಿರುದ್ಧ ಎನ್.ಡಿ.ಪಿ.ಎಸ್. ಕಾಯ್ದೆ, 1985ನ ಪ್ರಕಾರ ಪ್ರಕರಣ ದಾಖಲಿಸಲಾಗಿದೆ.
ಈ ದಾಳಿಯನ್ನು ಅಬಕಾರಿ ಅಪರ ಆಯುಕ್ತರು (ಜಾರಿ ಮತ್ತು ತನಿಖೆ), ಬೆಳಗಾವಿ ಕೇಂದ್ರ, ಹೊಸಪೇಟೆ ವಿಭಾಗದ ಅಬಕಾರಿ ಜಂಟಿ ಆಯುಕ್ತರು ಹಾಗೂ ಕೊಪ್ಪಳ ಜಿಲ್ಲೆಯ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ನಡೆಸಲಾಯಿತು. ಅಬಕಾರಿ ಉಪ ಅಧೀಕ್ಷಕರಾದ ಭಾರತಿ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ದಾಳಿಯಲ್ಲಿ ಪಾಲ್ಗೊಂಡವರು:
ಅಬಕಾರಿ ಉಪ ಅಧೀಕ್ಷಕರಾದ ಭಾರತಿ
ಅಬಕಾರಿ ನಿರೀಕ್ಷಕ ಶಂಕರ ಗುಡದಾರ್
ಕೊಪ್ಪಳ ಉಪ ವಿಭಾಗದ ಅಬಕಾರಿ ಉಪ ನಿರೀಕ್ಷಕ ತಿಮ್ಮಯ್ಯ
ಗ್ರಾಮ ಆಡಳಿತ ಅಧಿಕಾರಿ ಅಂಜು
ಅಬಕಾರಿ ಮುಖ್ಯ ಪೇದೆಗಳು: ಮೋಹನ್ ಕುಮಾರ್, ಹನಮಂತಪ್ಪ ಕುರಿ
ಗೃಹರಕ್ಷಕ ಶರಣಪ್ಪ ಹಾಗೂ ಇತರ ಸಿಬ್ಬಂದಿ
ಈ ದಾಳಿಯು ಗ್ರಾಮದಲ್ಲಿ ಅಕ್ರಮ ಮಾದಕವಸ್ತು ಮಾರಾಟವನ್ನು ತಡೆಗಟ್ಟಲು ಅಗತ್ಯ ಕ್ರಮವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿಯುತ್ತಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…