ಮುಂಡಗೋಡ ಪೊಲೀಸರು ಅಕ್ರಮವಾಗಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಶಿರಸಿ ಹುಬ್ಬಳ್ಳಿ ರಸ್ತೆಯ KSRTC ಡೀಪೋ ಬಳಿ ದಾಳಿ ಮಾಡಿ ಇಂದೂರಿನ ಅಕ್ಬರ್ ಮೌಲಾಸಾಬ್ ಸೈಯದ್ ಅಲಿ (32) ಎನ್ನುವ ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ.
ಮುಂಡಗೋಡ ಪಟ್ಟಣದ ಶಿರಸಿ-ಹುಬ್ಬಳ್ಳಿ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಹತ್ತಿರ ಸಾರ್ವಜನಿಕ ರಸ್ತೆಯ ಪಕ್ಕದಲ್ಲಿ ಆರೋಪಿತನಾದ ಅಕ್ಬರ್ ಮೌಲಾಸಾಬ ಸೈಯದ್ಅಲಿ ಈತನು ಬಿಳಿ ಬಣ್ಣದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗನಲ್ಲಿ ಗಾಂಜಾವನ್ನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದಾಗ ದಾಳಿ ಮಾಡಿ ಆರೋಪಿತನನ್ನು ಬಂದಿಸಲಾಗಿದೆ.
ದಾಳಿಯ ವೇಳೆ ಸುಮಾರು 12 ಸಾವಿರ ಮೌಲ್ಯದ 184 ಗ್ರಾಂ ತೂಕದ ಗಾಂಜಾ ಹಾಗೂ ಅಂಗ ಶೋಧನೆ ವೇಳೆ ಸಿಕ್ಕ ನಗದು 360 ರೂ. ವಶಪಡಿಸಿಕೊಳ್ಳಲಾಗಿದೆ.
ಉತ್ತರ ಕನ್ನಡ ಎಸ್ಪಿ ದೀಪನ್ ಎಮ್.ಎನ್,
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ, ಶಿರಸಿ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ ರವರ ಮಾರ್ಗದರ್ಶನದಲ್ಲಿ ಅಕ್ರಮ ಗಾಂಜಾವನ್ನು ಮಾರಾಟ ಮಾಡುವ ಆರೋಪಿತನನ್ನು ಬಂಧಿಸುವಲ್ಲಿ ಮುಂಡಗೋಡ ಪಿಐ ರಂಗನಾಥ ನೀಲಮ್ಮನವರ, ಪಿಎಸ್ಐ ಮಂಜುನಾಥ ಗೌಡರ ಸಿಬ್ಬಂದಿಗಳಾದ ಕೋಟೇಶ ನಾಗರವಳ್ಳಿ, ಅಣ್ಣಪ್ಪ ಬುಡಿಗೇರ, ಮಹಾಂತೇಶ ಮುಧೋಳ, ನಾಗಪ್ಪ ಮೊರಟಗಿ ಹಾಗೂ ಬಸವರಾಜ ಡೆಯರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಇವರುಗಳಿಗೆ ಎಸ್ಪಿ ದೀಪನ್ ಎಂ.ಎನ್ ಪ್ರಶಂಸಿಸಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…