Corruption

ದೇವಲ ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರುಳು ಮಾಫಿಯಾ!

ಅಫಜಲಪೂರ: ಮಳೆ ಇಲ್ಲದೆ ಭೀಮಾ ನದಿಯಲ್ಲಿ ನೀರಿಲ್ಲದೆ ರೈತರು ಪರದಾಡುತ್ತಿದ್ದು 13 ದಿನಗಳಕಾಲ ಆಮರಣಾಂತ ಉಪವಾಸ ಸತ್ಯಾಗ್ರಹ ಕುಳಿತು ಶಿವಕುಮಾರ್ ನಾಟಿಕರವರು ಸೊನ್ನ ಬ್ಯಾರೇಜ್‌ಗೆ 1 ಟಿಎಂಸಿ ನೀರು ಬಿಡುಗಡೆ ಮಾಡಿಸಿದರು ಇಂತಹ ಪರಿಸ್ಥಿತಿಯಲ್ಲಿ ಭೀಮಾ ನದಿಯನ್ನು ಅವಲಂಬಿಸಿ ಬದುಕುತ್ತಿರುವ ಸಾಕಷ್ಟು ರೈತರು ನೀರಿಲ್ಲದೆ ಪರದಾಡುತ್ತಿದ್ದಾರೆ ಆದರೆ ಇಲ್ಲಿನ ಮರುಳ ದಂದೆಕೋರರು ಮಾತ್ರ ಯಾವುದೇ ಅಧಿಕಾರಿಗಳ ಭಯವಿಲ್ಲದೆ ರಾಜಾರೋಷವಾಗಿ ಮರಳದಂದೆ ಮಾಡುತ್ತಿದ್ದಾರೆ. ದೇವಲ ಗಾಣಗಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕೆಲವು ಹಳ್ಳಿಗಳ ನದಿಯ ದಡದಲ್ಲಿ ಅಕ್ರಮ ಮರುಳು ಸಂಗ್ರಹಣೆ ಮಾಡಿ ರಾತ್ರೋರಾತ್ರಿ ಟಿಪ್ಪರ್ ಮತ್ತು ಟ್ರ್ಯಾಕ್ಟರ್ಗಳ ಮುಖಾಂತರ ಮರಳನ್ನು ಸಾಗಿಸುವ ದಂದೆ ಎಗ್ಗಿಲ್ಲದೆ ನಡೆಯುತ್ತಿದೆ. ಅದಲ್ಲದೆ ಮರಳದಂದೆ ಕೋರರು ಹೇಳುವ ಪ್ರಕಾರ ನಾವು ಪೊಲೀಸರಿಗೆ ಹಫ್ತಾ ನೀಡಿ ಮರಳು ದಂಧೆಯನ್ನು ಮಾಡುತ್ತಿದ್ದೇವೆಂದು ಹೇಳುತ್ತಿದ್ದಾರೆ ಹಾಗಾದರೆ ಕೆಲವು ಪೊಲೀಸ್ ಪೇದೆಗಳು ಶಾಮಿಲಾಗಿದ್ದಾರೆಯೇ?? ಅನುಮಾನ ಕಾಡುತ್ತಿದೆ.ಗುಳೂರ,ಬಟಗೇರಿ, ದೇವಲ ಗಣಗಾಪುರ್ ಸಂಗಮದ್ ನದಿಯ ದಡದಲ್ಲಿ ಯಾವುದೇ ಪರವಾನಿಗೆಲ್ಲದೆ ಅಕ್ರಮ ಮರಳು ಸಂಗ್ರಹಣೆ ಮಾಡಿದ್ದಾರೆ. ಕ್ರಮ ಕೈಗೊಳ್ಳಬೇಕಾದ ಗಣಿ ಅಧಿಕಾರಿಗಳು ಮೌನವಾಗಿದ್ದಾರೆ? ಸರ್ಕಾರದ ನಿಯಮಗಳಿಗೆ ಬೆಲೆ ಇಲ್ಲದಂತಾಗಿದೆ. ಈಗಲಾದರೂ ದೇವಲ ಗಾಣಗಾಪುರ್ ಠಾಣೆಯ ಪಿಎಸ್ಐ ಸಾಹೇಬರೇ ಅಕ್ರಮ ಮರಳು ದಂದೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಮುಂದಿನ ದಿನಗಳಲ್ಲಿ ಯಾವುದೇ ಅಕ್ರಮದಂದೆ ನಡೆಯದಂತೆ ಕ್ರಮ ಜರುಗಿಸಿ.

ವರದಿ : ಸಂಗಮೇಶ್ ಸರಡಗಿ

ಭ್ರಷ್ಟರ ಬೇಟೆ

Recent Posts

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

6 hours ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

8 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

1 day ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

1 day ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

1 day ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago