ಅಫಜಲಪೂರ: ಮಳೆ ಇಲ್ಲದೆ ಭೀಮಾ ನದಿಯಲ್ಲಿ ನೀರಿಲ್ಲದೆ ರೈತರು ಪರದಾಡುತ್ತಿದ್ದು 13 ದಿನಗಳಕಾಲ ಆಮರಣಾಂತ ಉಪವಾಸ ಸತ್ಯಾಗ್ರಹ ಕುಳಿತು ಶಿವಕುಮಾರ್ ನಾಟಿಕರವರು ಸೊನ್ನ ಬ್ಯಾರೇಜ್ಗೆ 1 ಟಿಎಂಸಿ ನೀರು ಬಿಡುಗಡೆ ಮಾಡಿಸಿದರು ಇಂತಹ ಪರಿಸ್ಥಿತಿಯಲ್ಲಿ ಭೀಮಾ ನದಿಯನ್ನು ಅವಲಂಬಿಸಿ ಬದುಕುತ್ತಿರುವ ಸಾಕಷ್ಟು ರೈತರು ನೀರಿಲ್ಲದೆ ಪರದಾಡುತ್ತಿದ್ದಾರೆ ಆದರೆ ಇಲ್ಲಿನ ಮರುಳ ದಂದೆಕೋರರು ಮಾತ್ರ ಯಾವುದೇ ಅಧಿಕಾರಿಗಳ ಭಯವಿಲ್ಲದೆ ರಾಜಾರೋಷವಾಗಿ ಮರಳದಂದೆ ಮಾಡುತ್ತಿದ್ದಾರೆ. ದೇವಲ ಗಾಣಗಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕೆಲವು ಹಳ್ಳಿಗಳ ನದಿಯ ದಡದಲ್ಲಿ ಅಕ್ರಮ ಮರುಳು ಸಂಗ್ರಹಣೆ ಮಾಡಿ ರಾತ್ರೋರಾತ್ರಿ ಟಿಪ್ಪರ್ ಮತ್ತು ಟ್ರ್ಯಾಕ್ಟರ್ಗಳ ಮುಖಾಂತರ ಮರಳನ್ನು ಸಾಗಿಸುವ ದಂದೆ ಎಗ್ಗಿಲ್ಲದೆ ನಡೆಯುತ್ತಿದೆ. ಅದಲ್ಲದೆ ಮರಳದಂದೆ ಕೋರರು ಹೇಳುವ ಪ್ರಕಾರ ನಾವು ಪೊಲೀಸರಿಗೆ ಹಫ್ತಾ ನೀಡಿ ಮರಳು ದಂಧೆಯನ್ನು ಮಾಡುತ್ತಿದ್ದೇವೆಂದು ಹೇಳುತ್ತಿದ್ದಾರೆ ಹಾಗಾದರೆ ಕೆಲವು ಪೊಲೀಸ್ ಪೇದೆಗಳು ಶಾಮಿಲಾಗಿದ್ದಾರೆಯೇ?? ಅನುಮಾನ ಕಾಡುತ್ತಿದೆ.ಗುಳೂರ,ಬಟಗೇರಿ, ದೇವಲ ಗಣಗಾಪುರ್ ಸಂಗಮದ್ ನದಿಯ ದಡದಲ್ಲಿ ಯಾವುದೇ ಪರವಾನಿಗೆಲ್ಲದೆ ಅಕ್ರಮ ಮರಳು ಸಂಗ್ರಹಣೆ ಮಾಡಿದ್ದಾರೆ. ಕ್ರಮ ಕೈಗೊಳ್ಳಬೇಕಾದ ಗಣಿ ಅಧಿಕಾರಿಗಳು ಮೌನವಾಗಿದ್ದಾರೆ? ಸರ್ಕಾರದ ನಿಯಮಗಳಿಗೆ ಬೆಲೆ ಇಲ್ಲದಂತಾಗಿದೆ. ಈಗಲಾದರೂ ದೇವಲ ಗಾಣಗಾಪುರ್ ಠಾಣೆಯ ಪಿಎಸ್ಐ ಸಾಹೇಬರೇ ಅಕ್ರಮ ಮರಳು ದಂದೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಮುಂದಿನ ದಿನಗಳಲ್ಲಿ ಯಾವುದೇ ಅಕ್ರಮದಂದೆ ನಡೆಯದಂತೆ ಕ್ರಮ ಜರುಗಿಸಿ.
ವರದಿ : ಸಂಗಮೇಶ್ ಸರಡಗಿ
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…