Corruption

ದೇವಲ ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರುಳು ಮಾಫಿಯಾ!

ಅಫಜಲಪೂರ: ಮಳೆ ಇಲ್ಲದೆ ಭೀಮಾ ನದಿಯಲ್ಲಿ ನೀರಿಲ್ಲದೆ ರೈತರು ಪರದಾಡುತ್ತಿದ್ದು 13 ದಿನಗಳಕಾಲ ಆಮರಣಾಂತ ಉಪವಾಸ ಸತ್ಯಾಗ್ರಹ ಕುಳಿತು ಶಿವಕುಮಾರ್ ನಾಟಿಕರವರು ಸೊನ್ನ ಬ್ಯಾರೇಜ್‌ಗೆ 1 ಟಿಎಂಸಿ ನೀರು ಬಿಡುಗಡೆ ಮಾಡಿಸಿದರು ಇಂತಹ ಪರಿಸ್ಥಿತಿಯಲ್ಲಿ ಭೀಮಾ ನದಿಯನ್ನು ಅವಲಂಬಿಸಿ ಬದುಕುತ್ತಿರುವ ಸಾಕಷ್ಟು ರೈತರು ನೀರಿಲ್ಲದೆ ಪರದಾಡುತ್ತಿದ್ದಾರೆ ಆದರೆ ಇಲ್ಲಿನ ಮರುಳ ದಂದೆಕೋರರು ಮಾತ್ರ ಯಾವುದೇ ಅಧಿಕಾರಿಗಳ ಭಯವಿಲ್ಲದೆ ರಾಜಾರೋಷವಾಗಿ ಮರಳದಂದೆ ಮಾಡುತ್ತಿದ್ದಾರೆ. ದೇವಲ ಗಾಣಗಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕೆಲವು ಹಳ್ಳಿಗಳ ನದಿಯ ದಡದಲ್ಲಿ ಅಕ್ರಮ ಮರುಳು ಸಂಗ್ರಹಣೆ ಮಾಡಿ ರಾತ್ರೋರಾತ್ರಿ ಟಿಪ್ಪರ್ ಮತ್ತು ಟ್ರ್ಯಾಕ್ಟರ್ಗಳ ಮುಖಾಂತರ ಮರಳನ್ನು ಸಾಗಿಸುವ ದಂದೆ ಎಗ್ಗಿಲ್ಲದೆ ನಡೆಯುತ್ತಿದೆ. ಅದಲ್ಲದೆ ಮರಳದಂದೆ ಕೋರರು ಹೇಳುವ ಪ್ರಕಾರ ನಾವು ಪೊಲೀಸರಿಗೆ ಹಫ್ತಾ ನೀಡಿ ಮರಳು ದಂಧೆಯನ್ನು ಮಾಡುತ್ತಿದ್ದೇವೆಂದು ಹೇಳುತ್ತಿದ್ದಾರೆ ಹಾಗಾದರೆ ಕೆಲವು ಪೊಲೀಸ್ ಪೇದೆಗಳು ಶಾಮಿಲಾಗಿದ್ದಾರೆಯೇ?? ಅನುಮಾನ ಕಾಡುತ್ತಿದೆ.ಗುಳೂರ,ಬಟಗೇರಿ, ದೇವಲ ಗಣಗಾಪುರ್ ಸಂಗಮದ್ ನದಿಯ ದಡದಲ್ಲಿ ಯಾವುದೇ ಪರವಾನಿಗೆಲ್ಲದೆ ಅಕ್ರಮ ಮರಳು ಸಂಗ್ರಹಣೆ ಮಾಡಿದ್ದಾರೆ. ಕ್ರಮ ಕೈಗೊಳ್ಳಬೇಕಾದ ಗಣಿ ಅಧಿಕಾರಿಗಳು ಮೌನವಾಗಿದ್ದಾರೆ? ಸರ್ಕಾರದ ನಿಯಮಗಳಿಗೆ ಬೆಲೆ ಇಲ್ಲದಂತಾಗಿದೆ. ಈಗಲಾದರೂ ದೇವಲ ಗಾಣಗಾಪುರ್ ಠಾಣೆಯ ಪಿಎಸ್ಐ ಸಾಹೇಬರೇ ಅಕ್ರಮ ಮರಳು ದಂದೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಮುಂದಿನ ದಿನಗಳಲ್ಲಿ ಯಾವುದೇ ಅಕ್ರಮದಂದೆ ನಡೆಯದಂತೆ ಕ್ರಮ ಜರುಗಿಸಿ.

ವರದಿ : ಸಂಗಮೇಶ್ ಸರಡಗಿ

ಭ್ರಷ್ಟರ ಬೇಟೆ

Recent Posts

ಮೋದಿ ಭೇಟಿ ಮುನ್ನ ಜಿಲೆಟಿನ್-ಟೈಮರ್ ಪತ್ತೆ! ಉಗ್ರ ಸಂಚೋ? ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಗೆ ಮುನ್ನವೇ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದ ಘಟನೆ ಹೊಸ ಆತಂಕಕ್ಕೆ…

23 hours ago

ಕಿರುತೆರೆ-ಬೆಳ್ಳಿತೆರೆಗೆ ಶಾಕ್‌: ನಟ ದಿಲೀಪ್‌ ರಾಜ್ ಹೃದಯಾಘಾತದಿಂದ ನಿಧನ

ಕನ್ನಡ ಕಿರುತೆರೆ ಹಾಗೂ ಸಿನಿಮಾರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ, ನಿರ್ಮಾಪಕ ಮತ್ತು ಕಂಠದಾನ ಕಲಾವಿದ ದಿಲೀಪ್‌ ರಾಜ್…

1 day ago

ಭೂದಾಖಲೆಗಳ ನಕಲು ಶುಲ್ಕ ಪರಿಷ್ಕರಣೆ: ಸರ್ಕಾರದಿಂದ ಹೊಸ ಏಕರೂಪದ ದರ ಜಾರಿ

ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ…

2 days ago

ಮದರಸಾದಿಂದ 24 ಮಕ್ಕಳು ಪರಾರಿ! ತುಮಕೂರಿನಲ್ಲಿ ಬಯಲಾಯ್ತು ಅಮಾನವೀಯ ಹಿಂಸೆ

ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…

2 days ago

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

3 days ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

3 days ago