Latest

ಆನಂದ್ ಸಿಂಗ್ ವಿರುದ್ಧದ ಅಕ್ರಮ ಗಣಿಗಾರಿಕೆ ಪ್ರಕರಣ: ಫೆಬ್ರವರಿ 24ರಂದು ತೀರ್ಪು

ಬೆಂಗಳೂರು: ಮಾಜಿ ಸಚಿವ ಆನಂದ್ ಸಿಂಗ್ ವಿರುದ್ಧ ದಾಖಲಾದ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣದ ವಿಚಾರಣೆ ಅಂತಿಮ ಹಂತ ತಲುಪಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಫೆಬ್ರವರಿ 24ರಂದು ತೀರ್ಪು ಪ್ರಕಟಿಸುವ ದಿನಾಂಕ ನಿಗದಿಪಡಿಸಿದೆ.

ನ್ಯಾಯಾಲಯದ ನಿರ್ಧಾರ:
ಇಂದು (ಫೆ.10) ತೀರ್ಪು ಪ್ರಕಟವಾಗಬೇಕಾಗಿದ್ದರೂ, ಅದನ್ನು ಫೆಬ್ರವರಿ 24ಕ್ಕೆ ಮುಂದೂಡಲಾಗಿದೆ. ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರ ಏಕಸದಸ್ಯ ಪೀಠ ಈ ಸಂಬಂಧ ಅಂತಿಮ ತೀರ್ಪು ಪ್ರಕಟಿಸಲು ದಿನಾಂಕ ಪ್ರಕಟಿಸಿದೆ.

ಪ್ರಕರಣದ ಹಿನ್ನೆಲೆ:
2015ರಲ್ಲಿ ಆನಂದ್ ಸಿಂಗ್ ವಿರುದ್ಧ 16,976 ಮೆಟ್ರಿಕ್ ಟನ್ ಅದಿರು ಅಕ್ರಮ ಗಣಿಗಾರಿಕೆ ಆರೋಪ ದಾಖಲಾಗಿತ್ತು. ಜೈಸಿಂಗ್ಪುರದ ಬಳಿ SVK ಫ್ಲಾಟ್‌ನಲ್ಲಿ ಅಕ್ರಮ ಗಣಿಗಾರಿಕೆ ನಡೆಸಲಾಗಿದೆ ಎಂಬ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಕೇಂದ್ರ ಶಿಷ್ಟಾಚಾರ ಆಯೋಗ (CVC) ವರದಿ ಆಧರಿಸಿ ಸುಪ್ರೀಂಕೋರ್ಟ್ ತನಿಖೆಗೆ ಆದೇಶ ನೀಡಿತ್ತು.

ಲೋಕಾಯುಕ್ತ ತನಿಖೆ:
ಸುಪ್ರೀಂಕೋರ್ಟ್ ಆದೇಶದಂತೆ ಕರ್ನಾಟಕ ಲೋಕಾಯುಕ್ತ ಪ್ರಕರಣದ ತನಿಖೆ ನಡೆಸಿ ಆನಂದ್ ಸಿಂಗ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿತ್ತು. ಸುದೀರ್ಘ ವಿಚಾರಣೆ ಬಳಿಕ ಈ ಪ್ರಕರಣದ ಅಂತಿಮ ತೀರ್ಪು ಪ್ರಕಟಿಸಲು ದಿನಾಂಕ ನಿಗದಿಯಾಗಿದೆ.

ಈ ತೀರ್ಪು ಪ್ರಕರಣದ ಭವಿಷ್ಯ ನಿರ್ಧಾರ ಮಾಡಲಿದ್ದು, ರಾಜಕೀಯ ವಲಯದ ಗಮನ ಸೆಳೆದಿದೆ.

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

13 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

13 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

13 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

13 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

13 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

13 hours ago