ರಾಯಚೂರು, ಜುಲೈ 6: ರಾಯಚೂರು ಗ್ರಾಮೀಣ ಪೊಲೀಸ್ ಠಾಣೆ ಸಿಬ್ಬಂದಿ ನಡೆಸಿದ ಸುದೀರ್ಘ ಶೋಧಕಾರ್ಯ ಮತ್ತು ಖಚಿತ ಮಾಹಿತಿಯ ಆಧಾರಿತ ದಾಳಿಯಲ್ಲಿ, ನಗರ ಹೊರವಲಯದ ಲಾಡ್ಜ್ ಒಂದರಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ಜಾಲವನ್ನು ಭೇದಿಸಲು ಪೊಲೀಸರು ಯಶಸ್ವಿಯಾದರು.
ಕುಕನೂರ ಕ್ರಾಸ್ ಬಳಿ ಇರುವ “ಮೇಘಾ ರೆಸ್ಟೋರೆಂಟ್ ಹೊಟೇಲ್” ನಲ್ಲಿ ಮಹಿಳಾ ದೇಹ ವ್ಯಾಪಾರ ನಡೆಯುತ್ತಿರುವ ಮಾಹಿತಿ ಲಭಿಸಿದ ಹಿನ್ನೆಲೆ, ಗ್ರಾಮೀಣ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸಾಬಯ್ಯ ಹಾಗೂ ಪಿಎಸ್ಐ ಪ್ರಕಾಶ್ ಡಂಬಾಳ್ ನೇತೃತ್ವದ ತಂಡ ದಾಳಿಯನ್ನು ನಡೆಸಿತು. ದಾಳಿಯ ವೇಳೆ ಆರು ಮಹಿಳೆಯರನ್ನು ರಕ್ಷಿಸಲಾಗಿದೆ.
ಸ್ಥಳದಿಂದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ದೇಹ ವ್ಯಾಪಾರದ ನಿರ್ವಹಣೆಗೆ ಬಳಸಲಾಗುತ್ತಿದ್ದ ಎರಡು ಕಾರುಗಳನ್ನು ಕೂಡ ಪೊಲೀಸರು ಜಪ್ತಿ ಮಾಡಿದ್ದಾರೆ. ಅಕ್ರಮ ವೇಶ್ಯಾವಾಟಿಕೆಯನ್ನು ಬೆಂಬಲಿಸಿದ್ದ ಲಾಡ್ಜ್ ಮಾಲೀಕರು ಹಾಗೂ ಆಪರೇಟರ್ಗಳ ವಿರುದ್ಧವೂ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಈ ಘಟನೆ ಮತ್ತೊಮ್ಮೆ ನಗರಾಭಿವೃದ್ದಿಯ ಹೆಸರಿನಲ್ಲಿ ನಡೆಯುತ್ತಿರುವ ಅಂತರ್ಮುಖಿ ಅಪರಾಧ ಚಟುವಟಿಕೆಗಳ ಕುರಿತ ಎಚ್ಚರಿಕೆಯನ್ನು ಪೊಲೀಸರಿಗೆ ನೀಡಿದ್ದು, ಶೀಘ್ರದಲ್ಲೇ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವ ನಿಟ್ಟಿನಲ್ಲಿ ತನಿಖೆ ಮುಂದುವರೆದಿದೆ.
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ಮಹಿಳಾ ಸಹೋದ್ಯೋಗಿಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಕಾರಿನಲ್ಲಿ ಕರೆದೊಯ್ದ ಆರೋಪದ ಹಿನ್ನೆಲೆಯಲ್ಲಿ…
ಬಾಗಲಕೋಟೆ: ಸುಮಾರು 20 ವರ್ಷಗಳ ಹಿಂದೆ ಭೂಸ್ವಾಧೀನಪಡಿಸಿಕೊಂಡ ಜಮೀನಿಗೆ ಇನ್ನೂ ಪರಿಹಾರ ನೀಡದೇ ರೈತನನ್ನು ಅಲೆದಾಡಿಸಿರುವ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ…
ಬೆಂಗಳೂರು: ಅಧಿಕೃತ ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಗ್ರಾಮ ಪಂಚಾಯಿತಿಯ ಅಭಿವೃದ್ಧಿ…
ಗೌರಿಬಿದನೂರು: ತೊಂಡೇಭಾವಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರೈತರ ಹಣ ದುರುಪಯೋಗವಾಗಿರುವ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ಗ್ರಾಮಸ್ಥರು ಹಾಗೂ…
ಕಲಬುರಗಿ: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ನಡೆಸುತ್ತಿರುವ ಕಾರ್ಯಾಚರಣೆ ಮುಂದುವರಿದಿದ್ದು, ಕಲಬುರಗಿ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್…
ಈ ಕಾಲದಲ್ಲಿ ಪ್ರತಿಭೆ ಮತ್ತು ಕ್ರಿಯೇಟಿವಿಟಿಗೆ ಯಾವುದೇ ವಿದ್ಯಾರ್ಹತೆ ಅಥವಾ ದೊಡ್ಡ ಹುದ್ದೆಗಳ ಅಗತ್ಯವಿಲ್ಲ ಎಂಬುದನ್ನು ಹಾಸನ ಜಿಲ್ಲೆಯ ಅರಸೀಕೆರೆಯ…