Latest

ಅಕ್ರಮ ಪಡಿತರ ಅಕ್ಕಿ ಸಾಗಾಟ ತಡೆ: ಕೊಳ್ಳೇಗಾಲದಲ್ಲಿ ಲಾರಿ ವಶ

ಕೊಳ್ಳೇಗಾಲ, ಮೇ 4 – ಪಟ್ಟಣದ ಹತ್ತಿರದ ಮಲೆ ಮಹದೇಶ್ವರ ಬೆಟ್ಟ ರಸ್ತೆಯಲ್ಲಿ ಅಕ್ರಮವಾಗಿ ತಮಿಳುನಾಡಿಗೆ ಸಾಗಿಸಲಾಗುತ್ತಿದ್ದ ಸುಮಾರು 30 ಟನ್ ಪಡಿತರ ಅಕ್ಕಿಯನ್ನು ಅಧಿಕಾರಿಗಳು ಪೊಲೀಸರ ಸಹಕಾರದಿಂದ ವಶಕ್ಕೆ ಪಡೆದಿದ್ದಾರೆ.

ಅಹರ ಮತ್ತು ನಾಗರಿಕ ಸರಬರಾಜು ಇಲಾಖೆಯ ನಿರೀಕ್ಷಕ ಎಂ.ಎನ್. ಪ್ರಸಾದ್ ಅವರಿಗೆ ಲಾರಿಗೆ ಅಕ್ಕಿ ತುಂಬಿ ಕಳತೆ ಮಾರ್ಗವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಅವರು ಪಟ್ಟಣ ಠಾಣೆ ಪೊಲೀಸರೊಂದಿಗೆ ಕಾರ್ಯಾಚರಣೆ ನಡೆಸಿದರು.

ಅಶೋಕ್ ಲೈಲ್ಯಾಂಡ್ ಲಾರಿ ಗ್ರಾಮಾಂತರ ಠಾಣೆ ಎದುರುಗಡೆಯಿಂದ ಬರುವ ವೇಳೆ ತಡೆದ ಅಧಿಕಾರಿಗಳನ್ನು ನೋಡಿ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಲಾರಿಯ ಪರಿಶೀಲನೆಯ ವೇಳೆ 550 ಕ್ಕೂ ಹೆಚ್ಚು ಚೀಲಗಳಲ್ಲಿ ಪಡಿತರ ಅಕ್ಕಿ ತುಂಬಲಾಗಿದ್ದು, ಚೀಲಗಳ ಮೇಲೆ “ಮಹದೇವ ರೈಸ್ ಮಿಲ್” ಮತ್ತು “ಶಿವಶಂಕರ್ ರೈಸ್ ಮಿಲ್” ಎಂಬ ಟ್ಯಾಗ್ ಅಂಟಿಸಲಾಗಿದೆ.

ಪೂರ್ವ ತನಿಖೆಯ ಪ್ರಕಾರ ಲಾರಿಯನ್ನು ಶಿಗ್ಗಾಂವಿಯಿಂದ ಟಿ. ನರಸೀಪುರ, ಕೊಳ್ಳೇಗಾಲ, ರಾಮಾಪುರ ಮಾರ್ಗವಾಗಿ ತಮಿಳುನಾಡಿಗೆ ಕಳುಹಿಸಲಾಗುತ್ತಿತ್ತು. ಕಾಳಸಂತೆಯ ದಂಧೆಕೋರರು ಗ್ರಾಮೀಣ ಪ್ರದೇಶದ ಅನ್ನಭಾಗ್ಯ ಫಲಾನುಭವಿಗಳಿಂದ ಕಡಿಮೆ ದರದಲ್ಲಿ ಅಕ್ಕಿ ಖರೀದಿ ಮಾಡಿ, ಒಂದೆಡೆ ಸಂಗ್ರಹಿಸಿ ನಂತರ ಹೊರ ರಾಜ್ಯಗಳಿಗೆ ಸಾಗಿಸುತ್ತಿರುವ ಮಾದರಿ ಇದು.

ದಾಳಿಯಲ್ಲಿ ಪಟ್ಟಣ ಠಾಣೆಯ ಉಪನಿರೀಕ್ಷಕ ಸುಪ್ರೀತ್, ಎಎಸ್‌ಐ ಮಧುಕುಮಾರ್, ಮುಖ್ಯ ಪೇದೆ ಸೂರ್ಯಪ್ರಕಾಶ್, ಪೇದೆಗಳು ಸಚಿನ್, ಅನಿಲ್ ಮತ್ತು ಲಾರಿ ಚಾಲಕ ನಂಜುಂಡಸ್ವಾಮಿ ಪಾಲ್ಗೊಂಡಿದ್ದರು. ಈ ಕುರಿತು ಆಹಾರ ನಿರೀಕ್ಷಕ ಪ್ರಸಾದ್ ಅವರು ಪಟ್ಟಣ ಠಾಣೆಗೆ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಿಸಲಾಗಿದೆ.

nazeer ahamad

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

10 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

11 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

11 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago