ಕೊಳ್ಳೇಗಾಲ, ಮೇ 4 – ಪಟ್ಟಣದ ಹತ್ತಿರದ ಮಲೆ ಮಹದೇಶ್ವರ ಬೆಟ್ಟ ರಸ್ತೆಯಲ್ಲಿ ಅಕ್ರಮವಾಗಿ ತಮಿಳುನಾಡಿಗೆ ಸಾಗಿಸಲಾಗುತ್ತಿದ್ದ ಸುಮಾರು 30 ಟನ್ ಪಡಿತರ ಅಕ್ಕಿಯನ್ನು ಅಧಿಕಾರಿಗಳು ಪೊಲೀಸರ ಸಹಕಾರದಿಂದ ವಶಕ್ಕೆ ಪಡೆದಿದ್ದಾರೆ.
ಅಹರ ಮತ್ತು ನಾಗರಿಕ ಸರಬರಾಜು ಇಲಾಖೆಯ ನಿರೀಕ್ಷಕ ಎಂ.ಎನ್. ಪ್ರಸಾದ್ ಅವರಿಗೆ ಲಾರಿಗೆ ಅಕ್ಕಿ ತುಂಬಿ ಕಳತೆ ಮಾರ್ಗವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಅವರು ಪಟ್ಟಣ ಠಾಣೆ ಪೊಲೀಸರೊಂದಿಗೆ ಕಾರ್ಯಾಚರಣೆ ನಡೆಸಿದರು.
ಅಶೋಕ್ ಲೈಲ್ಯಾಂಡ್ ಲಾರಿ ಗ್ರಾಮಾಂತರ ಠಾಣೆ ಎದುರುಗಡೆಯಿಂದ ಬರುವ ವೇಳೆ ತಡೆದ ಅಧಿಕಾರಿಗಳನ್ನು ನೋಡಿ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಲಾರಿಯ ಪರಿಶೀಲನೆಯ ವೇಳೆ 550 ಕ್ಕೂ ಹೆಚ್ಚು ಚೀಲಗಳಲ್ಲಿ ಪಡಿತರ ಅಕ್ಕಿ ತುಂಬಲಾಗಿದ್ದು, ಚೀಲಗಳ ಮೇಲೆ “ಮಹದೇವ ರೈಸ್ ಮಿಲ್” ಮತ್ತು “ಶಿವಶಂಕರ್ ರೈಸ್ ಮಿಲ್” ಎಂಬ ಟ್ಯಾಗ್ ಅಂಟಿಸಲಾಗಿದೆ.
ಪೂರ್ವ ತನಿಖೆಯ ಪ್ರಕಾರ ಲಾರಿಯನ್ನು ಶಿಗ್ಗಾಂವಿಯಿಂದ ಟಿ. ನರಸೀಪುರ, ಕೊಳ್ಳೇಗಾಲ, ರಾಮಾಪುರ ಮಾರ್ಗವಾಗಿ ತಮಿಳುನಾಡಿಗೆ ಕಳುಹಿಸಲಾಗುತ್ತಿತ್ತು. ಕಾಳಸಂತೆಯ ದಂಧೆಕೋರರು ಗ್ರಾಮೀಣ ಪ್ರದೇಶದ ಅನ್ನಭಾಗ್ಯ ಫಲಾನುಭವಿಗಳಿಂದ ಕಡಿಮೆ ದರದಲ್ಲಿ ಅಕ್ಕಿ ಖರೀದಿ ಮಾಡಿ, ಒಂದೆಡೆ ಸಂಗ್ರಹಿಸಿ ನಂತರ ಹೊರ ರಾಜ್ಯಗಳಿಗೆ ಸಾಗಿಸುತ್ತಿರುವ ಮಾದರಿ ಇದು.
ದಾಳಿಯಲ್ಲಿ ಪಟ್ಟಣ ಠಾಣೆಯ ಉಪನಿರೀಕ್ಷಕ ಸುಪ್ರೀತ್, ಎಎಸ್ಐ ಮಧುಕುಮಾರ್, ಮುಖ್ಯ ಪೇದೆ ಸೂರ್ಯಪ್ರಕಾಶ್, ಪೇದೆಗಳು ಸಚಿನ್, ಅನಿಲ್ ಮತ್ತು ಲಾರಿ ಚಾಲಕ ನಂಜುಂಡಸ್ವಾಮಿ ಪಾಲ್ಗೊಂಡಿದ್ದರು. ಈ ಕುರಿತು ಆಹಾರ ನಿರೀಕ್ಷಕ ಪ್ರಸಾದ್ ಅವರು ಪಟ್ಟಣ ಠಾಣೆಗೆ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಿಸಲಾಗಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…